Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ನಾಯಕನಹಟ್ಟಿ ದೊಡ್ಡಕೆರೆಗೆ ಸಚಿವ ಶ್ರೀರಾಮುಲು ಬಾಗಿನ ಅರ್ಪಣೆ  

Facebook
Twitter
Telegram
WhatsApp

ನಾಯಕನಹಟ್ಟಿ, ದೊಡ್ಡಕೆರೆ, ಸಚಿವ ಶ್ರೀರಾಮುಲು, ಬಾಗಿನ ಅರ್ಪಣೆ, ಸುದ್ದಿಒನ್, ಚಿತ್ರದುರ್ಗ, featured, suddione, chitradurga, Minister Sriramulu, visits,  Nayakanahatty, Doddakere,

ಚಿತ್ರದುರ್ಗ,(ಸೆಪ್ಟಂಬರ್.30) :
ಅವಧೂತ ಶ್ರೀ ತಿಪ್ಪೇರುದ್ರಸ್ವಾಮಿ ನಿರ್ಮಿಸಿದ ನಾಯಕನಹಟ್ಟಿಯ ಐತಿಹಾಸಿಕ ದೊಡ್ಡಕೆರೆ,  ಹತ್ತು ವರ್ಷದ ನಂತರ ಭರ್ತಿಯಾಗಿದೆ. ರಾಜ್ಯದಲ್ಲೇ ಕಡಿಮೆ ಮಳೆ ಬೀಳುವ ನಾಯಕನಹಟ್ಟಿ ಸುತ್ತಮುತ್ತಲಿನ ಪ್ರದೇಶಗಳಿಗೆ ಕೆರೆಗಳೇ ಜೀವಾಳ. ವರುಣ ಕೃಪೆಯಿಂದ ಈ ಬಾರಿ ನಾಯಕನಹಟ್ಟಿ ಸುತ್ತಮುತ್ತಲಿನ ಕೆರೆಕಟ್ಟೆಗಳು ತುಂಬಿ ತುಳುಕುತ್ತಿವೆ. ಸಾರಿಗೆ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವ ಬಿ.ಶ್ರೀರಾಮುಲು ಶುಕ್ರವಾರ ದೊಡ್ಡಕೆರೆಗೆ ಬಾಗಿನ ಅರ್ಪಸಿದರು.

ನಾಯಕನಹಟ್ಟಿ ಪಟ್ಟಣದಲ್ಲಿ ಉತ್ಸಾಹ ಮನೆ ಮಾಡಿತ್ತು. ಅವಧೂತ ಶ್ರೀ ತಿಪ್ಪೇರುದ್ರಸ್ವಾಮಿಗಳು ಒಳ ಮಠಕ್ಕೆ ಆಗಮಿಸಿದ ಸಚಿವ ಬಿ.ಶ್ರೀರಾಮುಲು ದೇವರಿಗೆ ನಮಿಸಿ, ಬಾಗಿನ ಅರ್ಪಿಸುವ ತೊಟ್ಟಿಲನ್ನು ಭಕ್ತರೊಂದಿಗೆ ಕೈಗೂಡಿಸಿ ಸ್ವತಃ ಹೊತ್ತುಂದು ಸಿಂಗರಿಸಿದ್ದ ಎತ್ತಿನ ಬಂಡಿಯಲ್ಲಿ ಇರಿಸಿದರು. ಪೂರ್ಣ ಕುಂಬ ಹೊತ್ತ ನೂರಾರು ಮಹಿಳೆಯರು, ಡೊಳ್ಳು ಸಮೇತ ಪಟ್ಟಣದಲ್ಲಿ ಮೆರವಣಿಯ ಸಮೇತ ದೊಡ್ಡ ಕೆರೆ ತೆರಳಿಸಿದರು. ಸಚಿವ ಶ್ರೀರಾಮುಲು ಅಭಿಮಾನಿಗಳು ರಸ್ತೆಯುದ್ಧಕ್ಕೂ ಜೈಕಾರ ಕೂಗಿದರು. ಹೂವಿನ ಮಳೆಗರೆದರು.

ದೊಡ್ಡಕೆರೆಯ ಹಿನ್ನೀರಿನ ಪ್ರದೇಶಲ್ಲಿ ಸಾಂಗೋಪವಾಗಿ ಪೂಜೆ ನೆರೆವೇರಿಸಿದ ಬಳಿಕ ಸಚಿವ ಶ್ರೀರಾಮುಲು ಅವರು ಬಾಗಿನ ತೊಟ್ಟಿಲನ್ನು ಕೆರೆ ನೀರಿಗೆ ಅರ್ಪಿಸಿದರು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಕೆ.ಎಸ್.ನವೀನ್, ಚಳ್ಳಕೆರೆ ತಹಶೀಲ್ದಾರ್ ಎನ್.ರಘುಮೂರ್ತಿ, ಮುಖಂಡರಾದ ರಾಮರೆಡ್ಡಿ, ಪಾಟೀಲ್ ಜಿ.ಎಂ.ತಿಪ್ಪೇಸ್ವಾಮಿ, ಪಿ.ಬಿ.ತಿಪ್ಪೇಸ್ವಾಮಿ, ಪ್ರಕಾಶ್ ರೆಡ್ಡಿ, ಎನ್.ಮಹಾಂತೇಶ್,ರಾಮದಾಸ್, ಪಾಪೇಶ್‍ನಾಯಕ ಸೇರಿದಂತೆ ಮತ್ತಿತರರು ಉಪಸ್ಥತರಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಅದ್ದೂರಿಯಾಗಿ ಜರುಗಿದ ಬೆಳಗೆರೆ ಶ್ರೀ ಲಕ್ಷ್ಮಿ ರಂಗನಾಥ ಸ್ವಾಮಿ ಬ್ರಹ್ಮರಥೋತ್ಸವ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729   ಚಳ್ಳಕೆರೆ, ಏಪ್ರಿಲ್. 25 : ತಾಲೂಕಿನ ಬೆಳಗೆರೆ ಹಾಗೂ ನಾರಾಯಣಪುರದ ಮಧ್ಯ ಕೆರೆ  ಏರಿ ಬುಡದಲ್ಲಿ ನೆಲೆಸಿರುವ

ಗುಡುಗು, ಸಿಡಿಲು ಬಡಿತ: ಸಾರ್ವಜನಿಕರಿಗೆ ಪ್ರಮುಖ ಸಲಹೆಗಳು

ಚಿತ್ರದುರ್ಗ. ಏ.25 : ಗುಡುಗು, ಸಿಡಿಲು ಬಡಿತ ಪ್ರತಿಕೂಲ ಪರಿಣಾಮಗಳ ಸಂದರ್ಭದಲ್ಲಿ ಕಂದಾಯ ಇಲಾಖೆ (ವಿಪತ್ತು ನಿರ್ವಹಣೆ)ಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ಸುತ್ತೋಲೆ ಹೊರಡಿಸಿ ತಿಳಿಸಿದ ನಿಯಮಗಳನ್ನು ಸಾರ್ವಜನಿಕರು ಚಾಚು ತಪ್ಪದೆ ಪಾಲನೆ ಮಾಡಬೇಕು

ಕಾಯಕ ಸಮುದಾಯ ಬಿ.ಎನ್.ಚಂದ್ರಪ್ಪ, ಪ್ರಭಾ ಮಲ್ಲಿಕಾರ್ಜನ್ ರವರನ್ನು ಬೆಂಬಲಿಸಲಿ : ಎನ್.ಡಿ.ಕುಮಾರ್ ಮನವಿ

ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ ಏ.25 : ಚಿತ್ರದುರ್ಗ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳಾದ ಬಿ.ಎನ್.ಚಂದ್ರಪ್ಪ, ಮತ್ತು ದಾವಣಗೆರೆ ಕ್ಷೇತ್ರದಲ್ಲಿ ಪ್ರಭಾ ಮಲ್ಲಿಕಾರ್ಜನ್ ಅವರನ್ನು

error: Content is protected !!