Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ತೈಲ ಬೆಲೆ ಇಳಿಸುವಂತೆ ಕಾಂಗ್ರೆಸ್ ನವರು ಬಾಯಿ ಬಾಯಿ ಬಡಿದುಕೊಳ್ತಾ ಇದ್ರಲ್ಲ : ಸಚಿವ ಸುಧಾಕರ್

Facebook
Twitter
Telegram
WhatsApp

 

ಚಿಕ್ಕಬಳ್ಳಾಪುರ: ಸದ್ಯ ತೈಲ ಬೆಲೆ ಕೊಂಚ ಇಳಿಕೆಯಾಗಿದ್ದು, ಗ್ರಾಹಕರು ನಿಟ್ಟುಸಿರು ಬಿಡುವಂತೆಯಾಗಿದೆ. ಈ ಬಗ್ಗೆ ಸಚಿವ ಸುಧಾಕರ್ ಕಾಂಗ್ರೆಸ್ ನವರಿಗೆ ತಿರುಗೇಟು ಕೊಟ್ಟಿದ್ದಾರೆ. ತೈಲ ಬೆಲೆ ಇಳಿಕೆ ಮಾಡಿ ಎಂದು ಕಾಂಗ್ರೆಸ್ ಅವರು ಬಾಯಿ ಬಾಯಿ ಬಡಿದುಕೊಳ್ಳುತ್ತಿದ್ರಲ್ಲಾ? ಏಕೆ ಕಾಂಗ್ರೆಸ್ ಅಧಿಕಾರ ಇರುವ ರಾಜ್ಯದವರು ಕಡಿಮೆ ಮಾಡಲಿಲ್ಲ? ಬರೀ ಬಿಜೆಪಿಯವರು ಅಧಿಕಾರದ ರಾಜ್ಯಗಳಲ್ಲಿ ಮಾತ್ರ ಮಾಡಿದ್ದೇವೆ. ರಾಹುಲ್ ಗಾಂಧಿ ಅವರು ಎಲ್ಲಿ ಹೋಗಿದ್ದಾರೆ ಕಾಣಿಸ್ತಿಲ್ಲ? ಏಕೆ? ಅವರು ಕಾಂಗ್ರೆಸ್ ಅಧಿಕಾರದ ರಾಜ್ಯದವರಿಗೆ ಇಳಿಕೆ ಮಾಡಿ ಎಂದು ಆದೇಶ ಮಾಡಕ್ಕಗಲ್ವಾ? ಎಂದು ವ್ಯಂಗ್ಯವಾಡಿದ್ದಾರೆ.

ಇನ್ನು ಬೈ ಎಲೆಕ್ಷನ್ ಫಲಿತಾಂಶದಿಂದ ತೈಲ ಬೆಲೆ ಇಳಿಕೆ ಮಾಡಿದ್ದಲ್ಲ. ಎರಡು ತಿಂಗಳ ಹಿಂದೆ ಬೊಮ್ಮಾಯಿ ಅವರ ಜೊತೆ ದೆಹಲಿಗೆ ಹೋಗಿದ್ವಿ. ಆಗ ನಿರ್ಮಲಾ ಸೀತರಾಮನ್ ಅವರು ಹೇಳಿದ್ದರು. ತೈಲ ಬೆಲೆ ಇಳಿಕೆ ಬಗ್ಗೆ ಲೆಕ್ಕಚಾರ ಮಾಡಿದ್ದೇವೆ ಎಂದು ಹೇಳಿದ್ದರು. ಬೈ ಎಲೆಕ್ಚನ್ ರಿಸಲ್ಟ್ ನಿಂದ ಇಳಿಸಿದ್ದರೆ, ಯಾಕೆ ಹತ್ತಾರು ರಿಸಲ್ಟ್ ಬಂತಲ್ಲ ಆಗಲೇ ಇಳಿಸಬಹುದಿತ್ತು ಎಂದಿದ್ದಾರೆ.

ವಿರೋಧ ಪಕ್ಷದವರು ಹೇಳುವ ಹಾಗೇ ಕಡಿಮೆ ಮಾಡಿಲ್ಲ. ಎರಡ್ಮೂರು ತಿಂಗಳ ಹಿಂದೆಯೇ ಯಾವ ಪ್ರಮಾಣದಲ್ಲಿ ತೈಲ ಬೆಲೆ ಇಳಿಕೆ ಮಾಡಬೇಕೆಂಬುದು ಚಿಂತೆ ಮಾಡಿದ್ವಿ. ಪಂಜಾಬ್, ಛತ್ತೀಸ್ ಘಡದಲ್ಲಿ ಏಕೆ ಮಾಡಲಿಲ್ಲ? ಕಾಂಗ್ರೆಸ್ ಇರೋ ಕಡೆ ರಾಜ್ಯಗಳಲ್ಲೂ ಸಹ ಕೇಂದ್ರ ಸರ್ಕಾರದಿಂದ ಕಡಿಮೆ ಮಾಡಲಾಗಿದೆ. ಕರ್ನಾಟಕದಲ್ಲಿ 07 ರೂ. ಮಾಡಿದ್ದೇವೆ. ಕಾಂಗ್ರೆಸ್ ಅವರು ಏಕೆ ಮಾಡ್ತಿಲ್ಲ? ಎಂದು ಪ್ರಶ್ನಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಕೋಟಿ ಕೋಟಿ ಆಸ್ತಿಯ ಒಡೆಯ ದಿಂಗಾಲೇಶ್ವರ ಸ್ವಾಮೀಜಿ : ಚಿನ್ನ, ಬೆಳ್ಳಿ ಸೇರಿ ಏನೆಲ್ಲಾ ಇದೆ‌ ಗೊತ್ತಾ..?

ಹುಬ್ಬಳ್ಳಿ: ಪ್ರಹ್ಲಾದ್ ಜೋಶಿ ಸ್ಪರ್ಧೆಗೆ ವಿರೋಧಿಸಿ, ಬಿಜೆಪಿ ಅಭ್ಯರ್ಥಿ ಪರ ಸ್ಪರ್ಧೆಗೆ ನಿಂತಿರುವ ದಿಂಗಾಲೇಶ್ವರ ಸ್ವಾಮೀಜಿ ಇಂದು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಈ ವೇಳೆ ತಮ್ಮ ಬಳಿ ಇರುವ ಚರಾಸ್ಥಿ-ಸ್ಥಿರಾಸ್ತಿ ಸೇರಿದಂತೆ ಎಲ್ಲಾ ವಿವರವನ್ನು

ಪ್ರೀತಿ ನಿರಾಕರಿಸಿದ್ದಕ್ಕೆ ಕಾರ್ಪೋರೇಟರ್ ಪುತ್ರಿಯನ್ನೇ ಚಾಕುವಿನಿಂದ ಇರಿದು ಕೊಲೆ : ಬೆಚ್ಚಿ ಬಿದ್ದ ಹುಬ್ಬಳ್ಳಿ-ಧಾರವಾಡ ಮಂದಿ

ಹುಬ್ಬಳ್ಳಿ: ಪ್ರೀತಿ ಮಾಡಲು ನಿರಾಕರಿಸಿದ್ದಕ್ಕೆ ಕಾರ್ಪೋರೇಟರ್ ಮಗಳನ್ನೇ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಹುಬ್ಬಳ್ಳಿ ನಗರದಲ್ಲಿ ನಡೆದಿದೆ. ನೇಹಾ ಬರ್ಬರವಾಗಿ ಕೊಲೆಯಾದ ಯುವತಿ. ಫಯಾಜ್ ಕೊಲೆ ಮಾಡಿದಾತ. ನೇಹಾ, ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ

ಎಳಸು, ರಾಜಕೀಯ ಜ್ಞಾನ ಇರದವನು : ವಿಜಯೇಂದ್ರ ಮೇಲೆ ಈಶ್ವರಪ್ಪ ಮಾತಿನ ಪ್ರಹಾರ

ಉಡುಪಿ: ಹಾವೇರಿಯಿಂದ ಟಿಕೆಟ್ ಆಕಾಂಕ್ಷಿಯಾಗಿದ್ದ ಈಶ್ವರಪ್ಪ ಅವರಿಗೆ ಬಿಜೆಪಿ ನಿರಾಸೆ ಮಾಡಿದಾಗಿನಿಂದ ಮಾಜಿ ಸಿಎಂ ಯಡಿಯೂರಪ್ಪ ಹಾಗೂ ಮಕ್ಕಳ ಮೇಲೆ ಹರಿಹಾಯುತ್ತಲೇ ಇದ್ದಾರೆ. ಬಿಜೆಪಿ ನಾಯಕರ ಮಾತನ್ನು ಮೀರಿ, ಸದ್ಯ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ

error: Content is protected !!