ಕೊರೊನಾ ಬಗ್ಗೆ ಮಾತಾಡೋ ವೈದ್ಯರಿಗೆ ಸಚಿವ ಸುಧಾಕರ್ ಖಡಕ್ ಎಚ್ಚರಿಕೆ..!

suddionenews
1 Min Read

ಬೆಂಗಳೂರು: ಕೊರೊನಾ ಹೆಚ್ಚಾಗುತ್ತಿರುವ ನಡುವೆ ಕೊರೊನಾ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸಿದ್ರೆ ಕಠಿಣ ಕ್ರಮ ತೆಗೆದುಕೊಳ್ಳುವುದಾಗಿ ಸಚಿವ ಡಾ.ಸುಧಾಕರ್ ಎಚ್ಚರಿಕೆ‌ ನೀಡಿದ್ದಾರೆ.

ಸರ್ಕಾರ ಇದಕ್ಕಾಗಿ ಫ್ಯಾನಲಿಸ್ಟ್ ಗಳನ್ನ ರೆಡಿ ಮಾಡ್ತಿದೆ. ಆ ಬಗ್ಗೆ ಅಧಿಕೃತ ಮಾಹಿತಿಯನ್ನು ನೀಡಲಿದೆ. ಆದ್ರೆ ಕೊರೊನಾ ಬಗ್ಗೆ ಯಾವುದೇ ದಾಖಲೆ ಇಲ್ಲದೆ ಮಾತಾಡಿದ್ರೆ ಆಕ್ಟ್ ಪ್ರಕಾರ ಕ್ರಮ ತೆಗೆದುಕೊಳ್ಳಲಾಗುತ್ತೆ ಎಂದು ವೈದ್ಯರಿಗೆ ಎಚ್ಚರಿಕೆ ನೀಡಿದ್ದಾರೆ.

ಇದು ಜನಪರ ಸರ್ಕಾರ. ಜನರಿಗೆ ಸಮಸ್ಯೆ ಆಗದಂತೆ ಕ್ರಮತಗೋಳ್ತೀನಿ. ಎಲ್ಲರ ಅಭಿಪ್ರಾಯವನ್ನು ಸರ್ಕಾರ ಗಮನದಲ್ಲಿಟ್ಟುಕೊಳ್ಳುತ್ತೆ. ಇನ್ನು ಎರಡು ದಿನ ಬಾಕಿ ಇದೆ. ಎಲ್ಲಾ ಅಂಕಿ ಅಂಶಗಳನ್ನ ಆಧಾರದಲ್ಲಿಟ್ಟುಕೊಂಡು ಶುಕ್ರವಾರ ಸಭೆ ನಡೆಸಲಾಗುತ್ತದೆ. ಆ ಬಳಿಕ ನಿರ್ಧಾರ ಮಾಡಲಾಗುತ್ತೆ ಎಂದು ತಿಳಿಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *