ನಮ್ಮ ಕ್ಷೇತ್ರಕ್ಕೆ ಬನ್ನಿ ಬನ್ನಿ ಎಂದರೆ ಅವರಿಗೇನು ಕ್ಷೇತ್ರಕ್ಕೆ ಗತಿ ಇಲ್ವಾ..? : ಸಿದ್ದರಾಮಯ್ಯ ಬಗ್ಗೆ ಸುಧಾಕರ್ ಹೇಳಿಕೆ

1 Min Read

 

ಚಿಕ್ಕಬಳ್ಳಾಪುರ: ಮುಂದಿನ ಚುನಾವಣೆಯಲ್ಲಿ ಸಿದ್ದರಾಮಯ್ಯ ಅವರಿಗೆ ಸ್ಪರ್ಧೆ ನಡೆಸಲು ಕ್ಷೇತ್ರದ್ದೇ ದೊಡ್ಡ ಸಮಸ್ಯೆಯಾಗಿದೆ. ಸಿದ್ದರಾಮಯ್ಯ ಯಾವ ಕ್ಷೇತ್ರ ಆಯ್ಕೆ ಮಾಡಿಕೊಳ್ಳುತ್ತಾರೆ ಎಂಬುದೇ ಎಲ್ಲರ ಪ್ರಶ್ನೆಯಾಗಿದೆ. ಅದರ ಜೊತೆಗೆ ಕೆಲವು ಜಿಲ್ಲೆಯ ಬೆಂಬಲಿಗರು ಕೂಡ ನಮ್ಮ ಜಿಲ್ಲೆಗೆ ಬನ್ನಿ ಎಂದು ಕರೆಯುತ್ತಿದ್ದಾರೆ. ಆದರೆ ಸಿದ್ದರಾಮಯ್ಯ ಮಾತ್ರ ಇನ್ನು ಏನನ್ನು ನಿರ್ಧರಿಸಿಲ್ಲ. ಈ ಬಗ್ಗೆ ಇದೀಗ ಸಚಿವ ಸುಧಾಕರ್ ಮಾತನಾಡಿದ್ದು, ಯಾಕೆ ಸಿದ್ದರಾಮಯ್ಯರಿಗೇನು ಕ್ಷೇತ್ರ ಗತಿ ಇಲ್ಲವಾ ಎಂದಿದ್ದಾರೆ.

ನಗರದಲ್ಲಿ ಮಾತನಾಡಿದ ಸುಧಾಕರ್, ಸಿದ್ದರಾಮಯ್ಯ ಅವರನ್ನು ನಮ್ಮ ಕ್ಷೇತ್ರಕ್ಕೆ ಬನ್ನಿ, ಬಂದು ಇಲ್ಲಿಂದಲೇ ಸ್ಪರ್ಧೆ ಮಾಡಿ ಎನ್ನುತ್ತಾರೆ. ಈ ರೀತಿ ಕರೆಯುವ ಮೂಲಕ ಕಾಂಗ್ರೆಸ್ ಶಾಸಕರೇ ನಮ್ಮ ನಾಯಕರಾಗಿದ್ದ ಸಿದ್ದರಾಮಯ್ಯ ಅವರಿಗೆ ಅವಮಾನ ಮಾಡುತ್ತಿದ್ದಾರೆ. ಅವರೂ 40 ವರ್ಷದಿಂದ ರಾಜಕೀಯ ಕ್ಷೇತ್ರದಲ್ಲಿದ್ದವರು. ಅವರಿಗೂ ಸ್ವಂತ ಕ್ಷೇತ್ರ ಎಂಬುದಿದೆ. ನಮ್ಮ ಕ್ಷೇತ್ರಕ್ಕೆ ಬನ್ನಿ ನಮ್ಮ ಕ್ಷೇತ್ರಕ್ಕೆ ಬನ್ನಿ ಎಂದರೆ ಯಾಕೆ ಅವರಿಗೇನು ಕ್ಷೇತ್ರದ ಗತಿ ಇಲ್ಲವಾ ಎಂದು ವ್ಯಂಗ್ಯವಾಡಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *