ನಾಳೆ ಸಚಿವ ಸುಧಾಕರ್ ಅವರಿಂದ ವಿವಿ ಸಾಗರಕ್ಕೆ ಬಾಗಿನ, ಭದ್ರಾ ಮೇಲ್ದಂಡೆ ಕಾಮಗಾರಿ ಪರಿವೀಕ್ಷಣೆ

1 Min Read

 

ಚಿತ್ರದುರ್ಗ. ಜ.03: ಯೋಜನೆ ಮತ್ತು ಸಾಂಖ್ಯಿಕ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಹಾಗೂ ಜಿಲ್ಲೆಯ ಶಾಸಕರುಗಳು ಇದೇ ಜನವರಿ 04 ರಂದು ವಾಣಿ ವಿಲಾಸ ಸಾಗರ ಜಲಾಶಯಕ್ಕೆ ಬಾಗಿನ ಅರ್ಪಿಸಿ, ಬಳಿಕ ಭದ್ರಾ ಮೇಲ್ದಂಡೆ ಯೋಜನೆಯ ಚಿತ್ರದುರ್ಗ ಶಾಖಾ ಕಾಲುವೆಯ ಕಾಮಗಾರಿ ಪರಿವೀಕ್ಷಣೆ ಮಾಡುವರು.

ಜ.04 ರಂದು ಬೆಳಿಗ್ಗೆ 10.30 ಕ್ಕೆ ಹಿರಿಯೂರು ತಾಲ್ಲೂಕು ವಿ.ವಿ.ಪುರ ಗ್ರಾಮದ ವಿ.ವಿ.ಸಾಗರ ಜಲಾಶಯ ಬಾಗಿನ ಅರ್ಪಣೆ, ಮಧ್ಯಾಹ್ನ 12 ರಿಂದ ಚಿಕ್ಕಸಿದ್ದವ್ವನಹಳ್ಳಿ ಕಾಲುವೆ ನಿರ್ಮಾಣ ಕಾಮಗಾರಿ, ಕುಂಚಿಗನಾಳ್ ಅಕ್ವಡೆಕ್ಟ್, ಸೇತುವೆ ನಿರ್ಮಾಣ ಕಾಮಗಾರಿ ಮತ್ತು ಗೋನೂರು ಸೇತುವೆ ನಿರ್ಮಾಣ ಕಾಮಗಾರಿ ಪರಿವೀಕ್ಷಣೆ ಮಾಡುವರು. ಮಧ್ಯಾಹ್ನ 2 ರಿಂದ ಚಿತ್ರದುರ್ಗ ನಗರದ ಭದ್ರಾ ಮೇಲ್ದಂಡೆ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸುವರು ಎಂದು ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಅವರು ತಿಳಿಸಿದ್ದಾರೆ.

Share This Article
Enable Notifications OK No thanks