Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಶಾಸಕ ಟಿ. ರಘುಮೂರ್ತಿಗೆ ಮಂತ್ರಿ ಸ್ಥಾನ: ರಘುಮೂರ್ತಿ ಯುವ ಸೇನೆಯಿಂದ ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮ!

---Advertisement---

ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಆಗಸ್ಟ್. 03 : ಸತತವಾಗಿ ಮೂರನೆ ಬಾರಿಗೆ ಚಳ್ಳಕೆರೆ ಶಾಸಕರಾಗಿ ಆಯ್ಕೆಯಾಗಿರುವ ಅಭಿವೃದ್ದಿಯ ಹರಿಕಾರ ಟಿ.ರಘುಮೂರ್ತಿಗೆ ರಾಜ್ಯ ಸಚಿವ ಸಂಪುಟದಲ್ಲಿ ಮಂತ್ರಿ ಸ್ಥಾನ ಸಿಕ್ಕಿರುವುದಕ್ಕೆ ಟಿ.ರಘುಮೂರ್ತಿ ಯುವ ಸೇನೆಯಿಂದ ಒನಕೆ ಓಬವ್ವ ವೃತ್ತದಲ್ಲಿ ಸೋಮವಾರ ಪಟಾಕಿ ಸಿಡಿಸಿ ಕಾಂಗ್ರೆಸ್ ಕಚೇರಿ ಎದುರು ಸಿಹಿ ಹಂಚಿ
ಸಂಭ್ರಮಿಸಲಾಯಿತು.

ಟಿ.ರಘುಮೂರ್ತಿ ಯುವ ಸೇನೆ ರಾಜ್ಯಾಧ್ಯಕ್ಷ ಕೆ.ಟಿ.ಶಿವಕುಮಾರ್ ಮಾತನಾಡಿ ಟಿ.ರಘುಮೂರ್ತಿವರ ಅಭಿವೃದ್ದಿ ದೃಷ್ಟಿ ಹಾಗೂ ಪಕ್ಷದ ಮೇಲಿಟ್ಟಿರುವ ನಿಷ್ಠೆಯನ್ನು ಗುರುತಿಸಿ ಕಾಂಗ್ರೆಸ್ ಹೈಕಮಾಂಡ್ ಸಚಿವ ಸ್ಥಾನ ನೀಡಿರುವುದು ನಮಗೆಲ್ಲಾ ಹೆಮ್ಮೆಯೆನಿಸಿದೆ. ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಚಿತ್ರದುರ್ಗಕ್ಕೆ ಆಗಮಿಸಿದ ಸಂದರ್ಭದಲ್ಲಿ
ಟಿ.ರಘುಮೂರ್ತಿಗೆ ಸಚಿವ ಸ್ಥಾನ ನೀಡುವಂತೆ ರಕ್ತದಲ್ಲಿ ಬರೆದ ಪತ್ರವನ್ನು ಅರ್ಪಿಸಿ ಒತ್ತಾಯಿಸಿದ್ದೆವು. ನಮ್ಮ ಬೇಡಿಕೆ ಈಡೇರಿದೆ ಎಂದು ಸಂತಸ ವ್ಯಕ್ತಪಡಿಸಿದರು.

ಟಿ.ರಘುಮೂರ್ತಿ ಸಚಿವರಾಗಿರುವುದರಿಂದ ಭದ್ರಾ ಮೇಲ್ದಂಡೆ ಯೋಜನೆ ಪೂರ್ಣಗೊಂಡು ಜಿಲ್ಲೆಗೆ ನೀರು ಹರಿಯತ್ತದೆಂಬ ಭರವಸೆಯಿದೆ. ಅದೇ ರೀತಿ ಚಿತ್ರದುರ್ಗದಲ್ಲಿ ಇಂಜಿನಿಯರಿಂಗ್ ಕಾಲೇಜು ಆಗಬೇಕು. ಐತಿಹಾಸಿಕ ಪ್ರಸಿದ್ದಿ ಪಡೆದಿರುವ ಚಿತ್ರದುರ್ಗದಲ್ಲಿ ರಸ್ತೆ ಅಗಲೀಕರಣವಾಗಲಿ ಎಂದು ನೂತನ ಸಚಿವರಿಗೆ ಕೆ.ಟಿ.ಶಿವಕುಮಾರ್ ಶುಭ ಹಾರೈಸಿದರು.

ಕಾಂಗ್ರೆಸ್‍ನ ಮಧುಪಾಲೇಗೌಡ, ಸುರೇಶ್ ಈಚಲನಾಗೇನಹಳ್ಳಿ ಹಾಗೂ ಟಿ.ರಘುಮೂರ್ತಿ ಯುವ ಸೇನೆಯ ಪದಾಧಿಕಾರಿಗಳಾದ ಚಳ್ಳಕೆರೆ ಪಾಂಡು
ಎನ್.ಎಸ್.ತಿಪ್ಪೇಸ್ವಾಮಿ, ವಿಠಲ, ಶಿವಕುಮಾರ್, ಕೆಂಚವೀರಪ್ಪ, ರಾಕೇಶ್ ಇವರುಗಳು ಸಂಭ್ರಮಾಚರಣೆಯಲ್ಲಿ ಪಾಲ್ಗೊಂಡಿದ್ದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now