ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
ಬೆಂಗಳೂರು: ನಿನ್ನೆಯೆಲ್ಲಾ ಸರ್ಕಾರಿ ರಜೆಯಲ್ಲಿದ್ದ ಸಚಿವರು, ಶಾಸಕರು ಇಂದು ಅಧಿವೇಶನ ಇರುವುದನ್ನೇ ಮರೆತು ಹೋಗಿದ್ದಾರಾ ಅಂತ. ಆಡಳಿತ ಪಕ್ಷದ ನಾಯಕರು ಅಧಿವೇಶನಕ್ಕೆ ಬಾರದೆ ಇದ್ದ ಕಾರಣ ವಿಪಕ್ಷ ನಾಯಕರು ಸದನದಲ್ಲಿ ಸದ್ದು ಗದ್ದಲ ಮಾಡಿದ್ದಾರೆ. ಆರ್.ಅಶೋಕ್ ಸಚಿವರಿಗೆ ಕ್ಲಾಸ್ ತೆಗೆದುಕೊಂಡಿದ್ದಾರೆ.
ಸಭಾಧ್ಯಕ್ಷರೆ ಅಧಿವೇಶನಕ್ಕಾಗಿ ಕೋಟಿ ಕೋಟಿ ಖರ್ಚು ಮಾಡಿದ್ದೀರಿ. ತಿಂಡಿ-ಊಟದ ವ್ಯವಸ್ಥೆ ಮಾಡಿದ್ದೀರಿ. ಆದರೆ ಆಡಳಿತ ಪಕ್ಷದ ನಾಯಕರುಗಳೇ ಬಂದಿಲ್ಲವಲ್ಲ. ಸಭಾಧ್ಯಕ್ಷರೇ ಈ ಥರ ಆಡಳಿತ ಪಕ್ಷದ ನಾಯಕರ ನಡೆಯಿಂದ ಬೇಸತ್ತು, ಒಂದು ಸದನ ನಡೆಯಬೇಕು ಅಂದ್ರೆ ಕೋಟ್ಯಾಂತರ ರೂಪಾಯಿ ಖರ್ಚು ಮಾಡಿದ್ದೀರಿ. ಇವರಿಗೆ ಏನು ದಾಡಿಯಾಗಿದೆ. ದಯವಿಟ್ಟು ಈ ರೀತಿಯ ಬೇಜಾಬ್ದಾರಿ ಹೇಳಿಕೆಯನ್ನು ನೀಡಬೇಡಿ. ನಾವೂ ಪ್ರತಿಭಟನೆ ಮಾಡಿ ಹೊರಗೆ ಹೋಗ್ತಾ ಇದ್ದೀವಿ ಎಂದು ಧಿಕ್ಕಾರ ಕೂಗುತ್ತಾ ವಿಪಕ್ಷ ನಾಯಕರು ಸದನದಿಂದ ಹೊರ ನಡೆದಿದ್ದಾರೆ. ರಾಜ್ಯದ ಮುಖ್ಯಮಂತ್ರಿಗಳಿಗೆ ಧಿಕ್ಕಾರ ಧಿಕ್ಕಾರ ಅಂತ ಕೂಗುತ್ತಾ ಹೊರ ನಡೆದಿದ್ದಾರೆ. ಸಚಿವರಿಗೂ ಧಿಕ್ಕಾರ ಕೂಗಿ ಹೊರ ನಡೆದಿದ್ದಾರೆ.
ಅತ್ತ ಯುಟಿ ಖಾದರ್ ಅವರು ತಡೆಯುವುದಕ್ಕೆ ಪ್ರಯತ್ನ ಮಾಡಿದರು. ಅತ್ತ ಹಾಜರಾಗಿದ್ದ ಸಚಿವರು ಅವರಿಗೆ ಸದನ ನಡೆಸುವುದು ಇಷ್ಟವಿಲ್ಲ. ಸಭಾಧ್ಯಕ್ಷರೇ ನೀವೂ ಪ್ರಶ್ನೋತ್ತರ ಪ್ರಾರಂಭ ಮಾಡಿ ಎಂದಿದ್ದಾರೆ. ಇಂದು ನಡೆಯಬೇಕಿದ್ದ ಪ್ರಶ್ನೊತ್ತರ ಚಟುವಟಿಕೆಯನ್ನು ಕೇಳಿಸಿಕೊಳ್ಳದೆ ವಿಪಕ್ಷ ನಾಯಕರು ಹೊರನಡೆದರು.
ಈ ವೇಳೆ ಯುಟಿ ಖಾದರ್ ಕೂಡ ಆಡಳಿತ ಪಕ್ಷದ ನಾಯಕರಿಗೆ ಕ್ಲಾಸ್ ತೆಗೆದುಕೊಂಡರು. ಸರ್ಕಾರ ಅಧಿಕಾರಕ್ಕೆ ತಂದಿದ್ದಾರೆ ಎಂದರೆ ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕು. ಸದನಕ್ಕೆ ಬಾರದೆ ಎಲ್ಲಿ ಹೋದರು ಎಂದು ಪ್ರಶ್ನಿಸಿದ್ದಾರೆ.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್ಡೇಟ್. ನೀವು ಯಾವಾಗಲೂ ಅಪ್ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್