Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಸದನಕ್ಕೆ ಗೈರಾದ ಸಚಿವರು : ಕೋಪದಿಂದ ಹೊರನಡೆದ ವಿಪಕ್ಷ ನಾಯಕರು..!

---Advertisement---

 

ಬೆಂಗಳೂರು: ನಿನ್ನೆಯೆಲ್ಲಾ ಸರ್ಕಾರಿ ರಜೆಯಲ್ಲಿದ್ದ ಸಚಿವರು, ಶಾಸಕರು ಇಂದು ಅಧಿವೇಶನ ಇರುವುದನ್ನೇ ಮರೆತು ಹೋಗಿದ್ದಾರಾ ಅಂತ. ಆಡಳಿತ ಪಕ್ಷದ ನಾಯಕರು ಅಧಿವೇಶನಕ್ಕೆ ಬಾರದೆ ಇದ್ದ ಕಾರಣ ವಿಪಕ್ಷ ನಾಯಕರು ಸದನದಲ್ಲಿ ಸದ್ದು ಗದ್ದಲ ಮಾಡಿದ್ದಾರೆ. ಆರ್.ಅಶೋಕ್ ಸಚಿವರಿಗೆ ಕ್ಲಾಸ್ ತೆಗೆದುಕೊಂಡಿದ್ದಾರೆ.

ಸಭಾಧ್ಯಕ್ಷರೆ ಅಧಿವೇಶನಕ್ಕಾಗಿ ಕೋಟಿ ಕೋಟಿ ಖರ್ಚು ಮಾಡಿದ್ದೀರಿ. ತಿಂಡಿ-ಊಟದ ವ್ಯವಸ್ಥೆ ಮಾಡಿದ್ದೀರಿ. ಆದರೆ ಆಡಳಿತ ಪಕ್ಷದ ನಾಯಕರುಗಳೇ ಬಂದಿಲ್ಲವಲ್ಲ. ಸಭಾಧ್ಯಕ್ಷರೇ ಈ ಥರ ಆಡಳಿತ ಪಕ್ಷದ ನಾಯಕರ ನಡೆಯಿಂದ ಬೇಸತ್ತು, ಒಂದು ಸದನ ನಡೆಯಬೇಕು ಅಂದ್ರೆ ಕೋಟ್ಯಾಂತರ ರೂಪಾಯಿ ಖರ್ಚು ಮಾಡಿದ್ದೀರಿ. ಇವರಿಗೆ ಏನು ದಾಡಿಯಾಗಿದೆ. ದಯವಿಟ್ಟು ಈ ರೀತಿಯ ಬೇಜಾಬ್ದಾರಿ ಹೇಳಿಕೆಯನ್ನು ನೀಡಬೇಡಿ. ನಾವೂ ಪ್ರತಿಭಟನೆ ಮಾಡಿ ಹೊರಗೆ ಹೋಗ್ತಾ ಇದ್ದೀವಿ ಎಂದು ಧಿಕ್ಕಾರ ಕೂಗುತ್ತಾ ವಿಪಕ್ಷ ನಾಯಕರು ಸದನದಿಂದ ಹೊರ ನಡೆದಿದ್ದಾರೆ. ರಾಜ್ಯದ ಮುಖ್ಯಮಂತ್ರಿಗಳಿಗೆ ಧಿಕ್ಕಾರ ಧಿಕ್ಕಾರ ಅಂತ ಕೂಗುತ್ತಾ ಹೊರ ನಡೆದಿದ್ದಾರೆ. ಸಚಿವರಿಗೂ ಧಿಕ್ಕಾರ ಕೂಗಿ ಹೊರ ನಡೆದಿದ್ದಾರೆ.

ಅತ್ತ ಯುಟಿ ಖಾದರ್ ಅವರು ತಡೆಯುವುದಕ್ಕೆ ಪ್ರಯತ್ನ ಮಾಡಿದರು. ಅತ್ತ ಹಾಜರಾಗಿದ್ದ ಸಚಿವರು ಅವರಿಗೆ ಸದನ ನಡೆಸುವುದು ಇಷ್ಟವಿಲ್ಲ. ಸಭಾಧ್ಯಕ್ಷರೇ ನೀವೂ ಪ್ರಶ್ನೋತ್ತರ ಪ್ರಾರಂಭ ಮಾಡಿ ಎಂದಿದ್ದಾರೆ. ಇಂದು ನಡೆಯಬೇಕಿದ್ದ ಪ್ರಶ್ನೊತ್ತರ ಚಟುವಟಿಕೆಯನ್ನು ಕೇಳಿಸಿಕೊಳ್ಳದೆ ವಿಪಕ್ಷ ನಾಯಕರು ಹೊರನಡೆದರು.

ಈ ವೇಳೆ ಯುಟಿ ಖಾದರ್ ಕೂಡ ಆಡಳಿತ ಪಕ್ಷದ ನಾಯಕರಿಗೆ ಕ್ಲಾಸ್ ತೆಗೆದುಕೊಂಡರು. ಸರ್ಕಾರ ಅಧಿಕಾರಕ್ಕೆ ತಂದಿದ್ದಾರೆ ಎಂದರೆ ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕು. ಸದನಕ್ಕೆ ಬಾರದೆ ಎಲ್ಲಿ ಹೋದರು ಎಂದು ಪ್ರಶ್ನಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...