Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಉಸ್ತುವಾರಿ ಹಂಚಿಕೆ ಬೆನ್ನಲ್ಲೇ ಸಚಿವರ ಮಧ್ಯೆ ಅಸಮಾಧಾನದ ಹೊಗೆ..!

Facebook
Twitter
Telegram
WhatsApp

ಬೆಂಗಳೂರು: ನಿನ್ನೆಯಷ್ಟೇ ಸಿಎಂ ಬಸವರಾಜ್ ಬೊಮ್ಮಾಯಿ ಜಿಲ್ಲೆಗಳಿಗೆ ಉಸ್ತುವಾರಿ ಸಚಿವರನ್ನ ನೇಮಕ ಮಾಡಿದ್ದಾರೆ. ಆದ್ರೆ ಇದು ಕೆಲವರಿಗೆ ಅಸಮಾಧಾನಕ್ಕೆ ಕಾರಣವಾಗಿದೆ.ಬಯಸಿದ ಜಿಲ್ಲೆಯ ಉಸ್ತುವಾರಿ ಸಿಗದೆ ಒಳಗೊಳಗೆ ಗೋಳಾಡುವಂತ ಪರಿಸ್ಥಿತಿ ನಿರ್ಮಾಣವಾಗಿದೆ. ಸಚಿವರು ಹಾಗೆಲ್ಲ ಏನು ಇಲ್ಲ ಅಂದ್ರು ಕೂಡ ಮೇಲ್ನೋಟಕ್ಕೆ ಬೆಳವಣಿಗೆಯಲ್ಲೇ ಎಲ್ಲಾ ಕಾಣ್ತಾ ಇದೆ.

ನಮ್ಮ ಹೈಕಮಾಂಡ್ ಸಿಎಂ ಯಾವ ನಿರ್ಧಾರ ತೆಗೆದುಕೊಂಡ್ರು ಬದ್ಧರಾಗಿರ್ತೀವಿ. ನಾನು ಏನ್ ಹೇಳ್ಬೇಕು ಅಂದ್ರು ಅದು ನಮ್ಮ ಪಕ್ಷದ ಆಂತರಿಕ ವಿಚಾರ. ನಮ್ಮ ಸಮಸ್ಯೆ ನಮ್ಮ ಸಲಹೆಗಳನ್ನ ಸಿಎಂ ಬಳಿ ಹಂಚಿಕೊಳ್ತೇವೆ. ಬಹಿರಂಗವಾಗಿ ಏನನ್ನು ಹೇಳೋಕೆ ಆಗಲ್ಲ ಅಂತ ಸುಧಾಕರ್ ಹೇಳಿದ್ದಾರೆ.

ಎಂಟಿಬಿ ನಾಗರಾಜ್ ಕೂಡ ಸಿಎಂ ಭೇಟಿಯಾಗಿ ಮಾತಾಡಿದ್ದಾರೆ. ಈ ಮುಂಚೆ ಚಿಕ್ಕಬಳ್ಳಾಪುರ ಕ್ಷೇತ್ರ ವಹಿಸಿಕೊಂಡಿದ್ದ ಸುಧಾಕರ್ ಆಂತರಿಕವಾಗಿ ಮಾತಾಡ್ತೀವಿ ಅಂದಿದ್ದಾರೆ. ಬಹಿರಂಗವಾಗಿ ಹೇಳಿಕೆ ನೀಡಿದ್ರೆ ಹೈಕಮಾಂಡ್ ಕೆಂಗಣ್ಣಿಗೆ ಗುರಿ ಆಗ್ತೀವಿ ಎಂಬುದರಿಂದ ಎಲ್ಲರು ನೇರವಾಗಿ ಅಸಮಾಧಾನ ಹೊರ ಹಾಕುತ್ತಿಲ್ಲ ಎನ್ನಲಾಗಿದೆ.

ಈಗಾಗಲೇ ಎಂಟಿಬಿ ನಾಗಾರಾಜ್ ಮತ್ತು ಸುಧಾಕರ್ ಭೇಟಿ ಮಾಡಿದ್ದಾರೆ. ಬೆಂಗಳೂರು ಗ್ರಾಮಾಂತರವನ್ನ ಎಂಟಿಬಿ ನಾಗರಾಜ್ ಬಯಸಿದ್ರು. ಈಗ ಅದು ಸುಧಾಕರ್ ಪಾಲಾಗಿದೆ. ಚಿಕ್ಕಬಳ್ಳಾಪುರ ಬಯಸಿದ್ದು ಸುಧಾಕರ್ ಆದ್ರೆ ಅವರಿಗೆ ಬೆಂಗಳೂರು ಗ್ರಾಮಾಂತರ ನೀಡಲಾಗಿದೆ. ಸ್ವಂತ ಜಿಲ್ಲೆ ಸಿಗದೆ ಇರೋದಕ್ಕೆ ಅಸಮಾಧಾನ ಹೊಗೆಯಾಡುತ್ತಿದೆ ಎನ್ನಲಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ದಾಖಲೆ ಇಲ್ಲದೆ ಸಾಗಿಸುತ್ತಿದ್ದ 20 ಲಕ್ಷ ವಶಕ್ಕೆ 

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್, 19 :  ನಗರದ ತಿರುಮಲ ಡಾಬ ಚೆಕ್ ಪೋಸ್ಟ್ ಬಳಿಯಲ್ಲಿ ಮಧ್ಯಾಹ್ನ ಸುಮಾರು 3.00 ಗಂಟೆ ಸಮಯದಲ್ಲಿ ಯಾವುದೇ ಸೂಕ್ತ ದಾಖಲಾತಿ ಇಲ್ಲದೆ ಸಾಗಿಸುತ್ತಿದ್ದ ರೂ.20,93,928 ರ ಮೊತ್ತವನ್ನು ಸಂಬಂಧಿಸಿದ

ಇದು ಪಿಕ್ ಪಾಕೆಟ್ ಸರ್ಕಾರ : ಹಿರಿಯೂರಿನಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ವಾಗ್ದಾಳಿ

ಸುದ್ದಿಒನ್, ಹಿರಿಯೂರು, ಏಪ್ರಿಲ್, 19  : ಗ್ಯಾರಂಟಿ ಯೋಜನೆ ಅಡಿಯಲ್ಲಿ ಮಹಿಳೆಯರಿಗೆ 2 ಸಾವಿರ ಹಣ ಕೊಟ್ಟು ಕುಟುಂಬದ ಮುಖ್ಯಸ್ಥರಿಂದ ಪ್ರತಿ ತಿಂಗಳು  5 ರಿಂದ 6 ಸಾವಿರ ವಸೂಲಿ ಮಾಡುತ್ತಿದ್ದಾರೆ . ಇದು

error: Content is protected !!