Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ನಾಪತ್ತೆಯಾಗಿದ್ದ ದರ್ಶನ್ ಮ್ಯಾನೇಜರ್ ದಿಢೀರ್ ಪ್ರತ್ಯಕ್ಷ : ದರ್ಶನ್ – ಧ್ರುವ ಬಗ್ಗೆ ಹೇಳಿದ್ದೇನು..?

---Advertisement---

ಬೆಂಗಳೂರು: ಕಳೆದ ಕೆಲವು ವರ್ಷಗಳ ಹಿಂದೆ ಮಲ್ಲಿಕಾರ್ಜುನ್ ಅಲಿಯಾಸ್ ಮಲ್ಲು ನಾಪತ್ತೆಯಾಗಿದ್ದರು. ಆಗ ಸಾಕಷ್ಟು ಅನುಮಾನಗಳು ಹುಟ್ಟಿಕೊಂಡಿದ್ದವು. ಮಲ್ಲು ಅವರು ಎಲ್ಲಿದ್ದಾರೆ ಎಂಬ ಬಗ್ಗೆ ತನಿಖೆ ಆಗಬೇಕು ಅಂತ ಆಗ್ರಹ ಕೂಡ ಕೇಳಿ ಬಂದಿತ್ತು. ಇದೀಗ ದಿಢೀರ್ ಅಂತ ಮಲ್ಲಿಕಾರ್ಜುನ್ ಪ್ರತ್ಯಕ್ಷವಾಗಿದ್ದು, ಇಷ್ಟು ವರ್ಷ ಏನ್ಮಾಡ್ತಾ ಇದ್ದೆ..? ಯಾಕೆ ಇದ್ದಕ್ಕಿದ್ದ ಹಾಗೇ ನಾಪತ್ತೆಯಾಗಿದ್ದು ಎಂಬ ಬಗ್ಗೆ ತಿಳಿಸಿದ್ದಾರೆ.

 

ಈ ಸಂಬಂಧ ಸುದ್ದಿಗೋಷ್ಠಿಯಲ್ಲಿ ಮಾತನ್ನಾಡಿ, ನನ್ನಿಂದ ಎಷ್ಟೋ ಜನರಿಗೆ ಅನ್ಯಾಯವಾಗಿದೆ, ತೊಂದರೆಯಾಗಿದೆ. ಅವರೆಲ್ಲರಿಗೂ ನಾನು ಕ್ಷಮೆ ಕೇಳುತ್ತೇನೆ. ಇಂಜಿನಿಯರಿಂಗ್ ಮುಗಿಸಿ, ಅಸಿಸ್ಟೆಂಟ್ ಡೈರೆಕ್ಟರ್ ಆದ ಬಳಿಕ ದರ್ಶನ್ ಅವರ ಮ್ಯಾನೇಜರ್ ಆಗಿ ಸೇರಿಕೊಂಡೆ. ಮೊದಲ ಸಲ ಸಿನಿಮಾ ಮಾಡಿದಾಗ ಅಂದುಕೊಂಡ ರೀತಿ ಕೈ ಹಿಡಿಯಲಿಲ್ಲ. ಸಿನಿಮಾ ನಿರ್ಮಾಣ ಮಾಡಿದೆ, ಡಿಸ್ಟ್ರಿಬ್ಯೂಷನ್ ಮಾಡಿದೆ, ಹೊಟೇಲ್ ಬಿಸಿನೆಸ್ ಮಾಡಿದೆ. ಆದರೆ ಯಾವುದು ಕೈ ಹಿಡಿಯಲಿಲ್ಲ. 8 ಕೋಟಿ ಸಾಲ ಮಾಡಿದೆ. ತೀರಿಸಲು ಆಗದೆ ಸಾಯುವ ನಿರ್ಧಾರ ತೆಗೆದುಕೊಂಡಿದ್ದೆ. ಆದರೆ ಆ ಒಂದು ಮದುವೆಯಲ್ಲಿ ಸಾಯುವ ನಿರ್ಧಾರದಿಂದ ಹಿಂದೆ ಸರಿಯುವಂತೆ ಮಾಡಿತು.

ಕಳೆದ ವರ್ಷ ದಿನಕರ್ ತೂಗುದೀಪ ಅವರನ್ನ ಭೇಟಿ ಮಾಡಿದ್ದೆ. ದರ್ಶನ್ ಅವರನ್ನ ಭೇಟಿ ಮಾಡಬೇಕು ಎನ್ನುವಷ್ಟರಲ್ಲಿ ನಂಗೆ ಪ್ಯಾರಾಲಿಸಿಸ್ ಆಯ್ತು. ಮತ್ತೆ ಏಳು ತಿಂಗಳ ಕಾಲ ಬೆಡ್ ರೆಸ್ಟ್ ನಲ್ಲಿದ್ದೆ. ಒಮ್ಮೆ ಕಷ್ಟ ಎಂದಾಗ ದರ್ಶನ್ ಸರ್ ಬಳಿ ಎಂಟು ಕೋಟಿ ಸಾಲ ಅಂತ ಹೇಳಿಲ್ಲ, ಒಂದು ಕೋಟಿ ಸಾಲ ಇದೆ ಅಂದ್ರು. ಅದನ್ನ ಅವರು ಕೊಟ್ಟಿದ್ದರು. ಒಂದು ಕೋಟಿ ಸಹಾಯ ಮಾಡಿದ್ದ ದರ್ಶನ್ ಅವರ ಬಳಿ ಮತ್ತೆ ಮತ್ತೆ ಕೇಳೋದಕ್ಕೆ ಆಗ್ಲಿಲ್ಲ ಎಂದಿದ್ದಾರೆ.

ದರ್ಶನ್ ಹಾಗೂ ಧ್ರುವ ಅವರ ಬಾಂಧವ್ಯ ಈ ಮೊದಲು ತುಂಬಾ ಚೆನ್ನಾಗಿ ಇತ್ತು. ಆದರೆ ಪ್ರೇಮಬರಹ ಮುಗಿದ ಮೇಲೆ ಮನಸ್ತಾಪವೇ ಜಾಸ್ತಿ ಆಗಿದೆ. ಅದಕ್ಕೆ ಕಾರಣ ಕೂಡ ಮಲ್ಲಿಕಾರ್ಜುನ್ ಅಂತ ಹೇಳಲಾಗಿದೆ. ಆ ಬಗ್ಗೆ ನಂಗೆ ಗೊತ್ತಿಲ್ಲ. ಪ್ರೇಮಬರಹ ಸಿನಿಮಾ ಡಿಸ್ಟ್ರಿಬ್ಯೂಷನ್ ಕೊಡಿಸಿದ್ದು ದರ್ಶನ್ ಅವರೇ ಎಂದಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now