ಬೆಳಗಾವಿ: ಜನಪ್ರತಿನಿಧಿಗಳು ಎಂದರೆ ಜನರ ಸಮಸ್ಯೆ ಆಲಿಸಬೇಕು ಅಲ್ಲವೆ. ಅದನ್ನ ಬಿಟ್ಟು ತಾವೂ ನೋಡಲ್ಲ, ಸಮಸ್ಯೆ ಹೇಳಲು ಬಂದವರಿಗೂ ಸರಿಯಾದ ರೆಸ್ಪಾನ್ಸ್ ಮಾಡಲ್ಲ ಅಂದ್ರೆ ಜನಪ್ರತಿನಿಧಿಗಳು ಯಾತಕ್ಕಾಗಿ ಎಂಬ ಪ್ರಶ್ನೆ ಜನರಿಗೆ ಮೂಡಿಯೇ ಮೂಡುತ್ತೆ. ಯಾಕಂದ್ರೆ ಅಂತದ್ದೊಂದು ಘಟನೆ ಜಿಲ್ಲೆಯಲ್ಲಿ ನಡೆದಿದೆ.
ಬೆಳಗಾವಿ ಉತ್ತರ ವಿಧನಾಸಭಾ ಕ್ಷೇತ್ರದ ಶಾಸಕ ಅನಿಲ್ ಬೊನಕೆ ಮಹಿಳೆಯೊಬ್ಬರಿಗೆ ಆವಾಜ್ ಹಾಕಿದ್ದಾರೆ. ಶಾಸಕ ಅನಿಲ್ ಗೋವಾ ವಿಧಾನಸಭಾ ಚುನಾವಣೆಯ ಪ್ರಚಾರದಲ್ಲಿದ್ದರಂತೆ. ಆಗ ಬಾಂಧುರ ಗಲ್ಲಿಯ ಮಹಿಳೆಯೊಬ್ಬರು ತಮ್ಮ ಸಮಸ್ಯೆ ಹೇಳಲು ಕರೆ ಮಾಡಿದ್ದಾರೆ.
ಸರ್ ಗಲ್ಲಿಯ ಡ್ರೈನೇಜ್ ಹಾಳಾಗಿ ಮನೆಯೊಳಗೆ ನೀರು ಬರ್ತಿದೆ. ಇದರ ಪರಿಣಾಮ ಜನರು ಆಸ್ಪತ್ರೆಗೆ ಸೇರುತ್ತಿದ್ದಾರೆ. ಆದಷ್ಟು ಬೇಗ ಸರಿ ಮಾಡಿಸಿ ಸರ್ ಎಂದಿದ್ದಷ್ಟೇ, ಆ ಕಡೆಯಿಂದ ಆ ಕೆಲಸ ಆಗಬೇಕು.. ಈ ಕೆಲಸ ಆಗಬೇಕು ಅಂತ ಹೇಳೋಕೆ ನೀವೂ ಯಾರು..? ಗೋವಾ ಚುನಾವಣಾ ಪ್ರಚಾರದಲ್ಲಿದ್ದೇನ ಬರ್ತೀನಿ ಇಡು ಅಂತ ಏಕವಚನದಲ್ಲೇ ಆವಾಜ್ ಹಾಕಿ ಕರೆ ಕಟ್ ಮಾಡಿದ್ದಾರೆ. ಆ ಆಡಿಯೋ ವೈರಲ್ ಆಗಿದ್ದು, ಶಾಸಕರ ನಡತೆಗೆ ಎಲ್ಲೆಡೆ ಆಕ್ರೋಶ ವ್ಯಕ್ತವಾಗಿದೆ.
ಬೆಂಗಳೂರು: ರಾಜ್ಯಾದ್ಯಂತ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳ ಹೆಚ್ಚಾಗಿದೆ. ಇದರಿಂದ ಅದೆಷ್ಟೋ ಜನ ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಸಾಲ ಕೊಟ್ಟ…
ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 07 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಶೇಂಗಾ, ಕಡಲೆ, ಮೆಕ್ಕೆಜೋಳ ಸೇರಿದಂತೆ ಇತರೆ…
ಬೆಂಗಳೂರು: ನಟ ಡಾಲಿ ಧನಂಜಯ್ ಮದುವೆ ಸಂಭ್ರಮದಲ್ಲಿದ್ದಾರೆ. ಚಿತ್ರದುರ್ಗದ ಅಳಿಯ ಬೇರೆ ಆಗ್ತಾ ಇದ್ದಾರೆ. ಧನ್ಯತಾ ಮೂಲತಃ ಚಿತ್ರದುರ್ಗದವರು. ಆದರೆ…
ಬೆಂಗಳೂರು: ಇಂದು ಹೈಕೋರ್ಟ್ ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ್ದು ಸಿಎಂ ಸಿದ್ದರಾಮಯ್ಯ ಅವರಿಗೆ ಬಿಗ್ ರಿಲೀಫ್ ನೀಡಿದೆ. ಈ…
ಈ ರಾಶಿಯವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ಒದಗಿ ಬರಲಿವೆ, ಈ ರಾಶಿಯವರಿಗೆ ಉತ್ತಮ ಸಂಗಾತಿ ಸಿಗುವರು, ಶುಕ್ರವಾರದ ರಾಶಿ ಭವಿಷ್ಯ…
144 ವರ್ಷಗಳಿಗೊಮ್ಮೆ ಬರುವ ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದರೆ ಕರ್ಮ ಕಳೆಯುತ್ತದೆ ಎಂದು ನಂಬಲಾಗಿದೆ. ಹೀಗಾಗಿ ಕೋಟ್ಯಾಂತರ ಮಂದಿ…