Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಟಿವಿ, ಪೇಪರ್ ನಲ್ಲಿ ಹಾಕಿ. ಒಬ್ಬ ಒಳ್ಳೆ ಗೃಹ ಮಂತ್ರಿ ಬೇಕಾಗಿದ್ದಾರೆ ಅಂತ ಶಾಸಕ ಯತ್ನಾಳ್

Facebook
Twitter
Telegram
WhatsApp

 

ವಿಜಯಪುರ: ಹುಬ್ಬಳ್ಳಿ ಗಲಭೆ ಬಗ್ಗೆ ಗೃಹ ಮಂತ್ರಿಯನ್ನು ತರಾಟೆ ತೆಗೆದುಕೊಂಡಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಮಾಡಿಸ್ತಾರೆ ರೀ ಎಲ್ಲೂ ಆಗಲ್ಲ ಇಲ್ಲಿಯೇ ಕರ್ನಾಟಕದಲ್ಲಿ ಅಷ್ಟೇ ಆಗೋದು. ಉತ್ತರ ಪ್ರದೇಶದಲ್ಲಿ ಆದಾಗ ಎಲ್ಲಿತ್ತು, ಗುಜರಾತ್ ನಲ್ಲಿ ಆಡಳಿತದಲ್ಲಿದ್ದಾಗ ಎಲ್ಲಿ ಘಟನೆ ನಡೆಯಿತು. ಬಿಜೆಪಿ ಸರ್ಕಾರ ಅಧಿಕಾರದಲ್ಲಿ ಹತ್ತು ವರ್ಷದಿಂದ ಇದೆ. ಎಲ್ಲಿ ಗಲಾಟೆಯಾಗಿದೆ. ಎಲ್ಲೆಲ್ಲಿ ಸ್ವಲ್ಪ ವೀಕ್ ಇದೆ ಅಲ್ಲಲ್ಲಿ ಇಂಥ ಗಲಾಟೆಗಳು ಆಗುತ್ತವೆ.

ಒಬ್ಬ ಸ್ಟ್ರಾಂಗ್ ಹೋಮ್ ಮಿನಿಸ್ಟರ್ ಈ ರಾಜ್ಯಕ್ಕೆ ಬೇಕಾಗಿದೆ. ನೀವೆಲ್ಲಾ ಟಿವಿ, ಪೇಪರ್ ನಲ್ಲಿ ಹಾಕಿ. ಒಬ್ಬ ಒಳ್ಳೆ ಗೃಹ ಮಂತ್ರಿ ಬೇಕಾಗಿದ್ದಾರೆ ಅಂತ ಎಂದು ವ್ಯಂಗ್ಯವಾಡಿದ್ದಾರೆ. ಗೃಹಮಂತ್ರಿ ಸ್ಟ್ರಾಂಗ್ ಇಲ್ಲ ಅನ್ನೋದನ್ನು ಶಾಸಕ ಯತ್ನಾಳ್ ಕೂಡ ಒಪ್ಪಿಕೊಂಡಂತಾಗಿದೆ.

ಕಳೆದ ಕೆಲವು ದಿನಗಳಿಂದ ರಾಜ್ಯದಲ್ಲಿ ಏನೇನೋ ಘಟನೆಗಳು ನಡೆಯುತ್ತಿವೆ. ಈ ಸಮಸ್ಯೆಗಳಿಗೆ ಸರ್ಕಾರ ತಲೆ ಹಾಕುತ್ತಿಲ್ಲ, ಸಮಸ್ಯೆ ಬಗೆಹರಿಸುವ ಗೋಜಿಗೆ ಹೋಗುತ್ತಿಲ್ಲ, ಗೃಹ ಇಲಾಖೆ ಸಂಪೂರ್ಣ ವಿಫಲವಾಗುತ್ತಿದೆ, ಸಮಾಜದ ಸ್ವಾಸ್ಥ್ಯ ಹಾಳಾಗುತ್ತಿದೆ ಎಂಬ ಆರೋಪಗಳು ಸಾಕಷ್ಟು ಕೇಳಿ ಬರುತ್ತಿದೆ. ಈ ನಡುವೆ ಹುಬ್ಬಳ್ಳಿ ವಾಟ್ಸಾಪ್ ಸಂದೇಶವೊಂದರಿಂದ ಪ್ರಕ್ಷುಬ್ಧ ವಾತಾವರಣವೇ ನಿರ್ಮಾಣವಾಗಿದೆ. ಈ ಬಗ್ಗೆ ಶಾಸಕ ಬಸನಗೌಡ ಯತ್ನಾಳ್ ಕೂಡ ಗೃಹ ಸಚಿವರ ಮೇಲೆ ಕಿಡಿಕಾರಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಸಾಹಿತಿ ಬಿ.ಎಲ್.ವೇಣು ನಿವಾಸಕ್ಕೆ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಭೇಟಿ

ಸುದ್ದಿಒನ್, ಚಿತ್ರದುರ್ಗ, ಮೇ. 02 :  ಖ್ಯಾತ ಸಾಹಿತಿ, ಚಿಂತಕ ಬಿ.ಎಲ್.ವೇಣು ಅವರ ನಿವಾಸಕ್ಕೆ ಸ್ಥಳೀಯ ಶಾಸಕ ಕೆ.ಸಿ.ವೀರೆಂದ್ರ ಪಪ್ಪಿ ಅವರು ಭೇಟಿ ಮಾಡಿ, ಆಶೀರ್ವಾದ ಪಡೆದು, ಅಭಿವೃದ್ಧಿ ಕಾರ್ಯಗಳ ಬಗ್ಗೆ ಸಲಹೆಗಳನ್ನು ಪಡೆದರು.

ಹೆಚ್ಚುತ್ತಿರುವ ಬಿಸಿಲ ಝಳ : ಸಾರ್ವಜನಿಕರು ಅನುಸರಿಸಬೇಕಾದ ಸರಳ ಉಪಾಯಗಳ ಬಗ್ಗೆ ಮಾಹಿತಿ ನೀಡಿದ ಜಿಲ್ಲಾ ಆಯುಷ್ ಅಧಿಕಾರಿ ಡಾ.ಚಂದ್ರಕಾಂತ್ ಎಸ್.ನಾಗಸಮುದ್ರ

ಚಿತ್ರದುರ್ಗ. ಮೇ.02: ರಾಜ್ಯಾದ್ಯಂತ ಬಿಸಿಲಬೇಗೆ ದಿನೇ ದಿನೇ ಹೆಚ್ಚಾಗುತ್ತಿದ್ದು, ಇನ್ನೂ ಕೆಲವು ದಿನಗಳ ಕಾಲ ಉಷ್ಣ ಹವೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಿಸಿಲ ಝಳವು ಮನುಷ್ಯನ ಆರೋಗ್ಯದ ಮೇಲೆ ತೀವ್ರತರವಾದ

ಕಾರ್ಮಿಕರು ಕೆಲಸದ ಜೊತೆ ಆರೋಗ್ಯದ ಕಡೆಗೂ ಹೆಚ್ಚಿನ ಗಮನ ಕೊಡಬೇಕು : ನ್ಯಾಯಾಧೀಶೆ ಬಿ.ಗೀತ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 02 : ಅನೇಕ ಸೌಲಭ್ಯಗಳಿಂದ ವಂಚಿತರಾಗಿರುವ ಅಸಂಘಟಿತ ಕಾರ್ಮಿಕರಿಗೆ ಹಕ್ಕುಗಳ ಕುರಿತು ಕಾನೂನು ಜಾಗೃತಿ

error: Content is protected !!