Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಶಾಸಕ ಬಿ ಆರ್ ಪಾಟೀಲ್ ಆಡಿಯೋ ವೈರಲ್ : ವರದಿ ಕೇಳಿದ ಹೈಕಮಾಂಡ್..!

---Advertisement---

ಬೆಂಗಳೂರು; ಬೆಳಗ್ಗೆಯಿಂದ ಸೋಷಿಯಲ್ ಮೀಡಿಯಾದಲ್ಲಿ ಒಂದೇ ವಿಡಿಯೋ ವೈರಲ್ ಆಗ್ತಾ ಇರೋದು. ಅದು ವಸಗಿ ಯೋಜನೆ ವಿಚಾರಕ್ಕೆ ಶಾಸಕ ಬಿ ಆರ್ ಪಾಟೀಲ್ ಅವರು ಮಾತನಾಡಿರುವ ಆಡಿಯೋ. ಹಣ ಕೊಟ್ಟವರಿಗೆ ಮಾತ್ರ ವಸತಿಗಳು ಸಿಗುತ್ತವಾ ಎಂಬ ಮಾತುಗಳು. ಕಾಂಗ್ರೆಸ್ ಪಕ್ಷದವರೇ ಮಾತನಾಡಿದ ಕಾರಣ, ಸಾಮಾನ್ಯ ಜನರಿಗೂ ಇದು ಹೌದಾ ಎನಿಸಿದೆ. ಹಲವು ಪ್ರಶ್ನೆಗಳು ಕಾಡುವುದಕ್ಕೆ ಶುರುವಾಗಿದೆ. ಈ ಆಡಿಯೋ ವೈರಲ್ ಆಗಿದ್ದು, ಕಾಂಗ್ರೆಸ್ ಸರ್ಕಾರಕ್ಕೆ ಮುಜುಗರ ಉಂಟಾಗಿದೆ. ಈ ಸಂಬಂಧ ಈಗಾಗಲೇ ಹೈಕಮಾಂಡ್ ವರದಿ ಕೇಳಿದೆ ಎನ್ನಲಾಗಿದೆ.

ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಅವರು ವಸತಿ ಇಲಾಖೆಯ ವಿರುದ್ಧ ಆರೋಪದ ಸಂಬಂಧ ಮಾಹಿತಿಯನ್ನ ಕೇಳಿದ್ದಾರೆ. ಅಷ್ಟೇ ಅಲ್ಲ ಶಾಸಕ ಬಿ.ಆರ್.ಪಾಟೀಲ್ ಬಗ್ಗೆಯೂ ರಣದೀಪ್ ಸಿಂಗ್ ಸುರ್ಜೇವಾಲ ಅವರು ಬೇಸರ ವ್ಯಕ್ತಪಡಿಸಿದ್ದಾರೆ. ಇಂತಹ ವಿಚಾರವನ್ನು ಪಕ್ಷದ ಗಮನಕ್ಕೆ ತರದೆ ಸಾರ್ವಜನಿಕ ವಲಯದಲ್ಲಿ ಹರಿಬಿಟ್ಟಿದ್ದಕ್ಕೆ ಬೇಸರ ಹೊರ ಹಾಕಿದ್ದಾರೆ ಎನ್ನಲಾಗಿದೆ.

ಬಿ ಆರ್ ಪಾಟೀಲ್ ಆರೋಪದಿಂದ ರಾಜ್ಯ ಸರ್ಕಾರಕ್ಕೆ ತೀವ್ರ ಮುಜುಗರ ಉಂಟಾಗಿದೆ. ವಿರೋಧ ಪಕ್ಷಗಳಿಗೆ ಇದೊಂದು ರಾಜಕೀಯ ಅಸ್ತ್ರವಾಗಿದೆ. ಬಿ.ಆರ್.ಪಾಟೀಲ್ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರು, “ಬಿಆರ್ ಪಾಟೀಲ್ ಹೇಳಿದ್ದು ನೂರಕ್ಕೆ ನೂರು ಸತ್ಯ. ಹಣ ಕೊಡದೆ ಯಾವುದೇ ಕೆಲಸ ಆಗುವುದಿಲ್ಲ ಎಂಬುದು ಸಾಬೀತಾಗಿದೆ ಎಂದು ನುಡಿದರು. ಬಡವರು ಮನೆ ಬೇಕೆಂದರೂ ದುಡ್ಡು ಕೊಟ್ಟು ತೆಗೆದುಕೊಳ್ಳಬೇಕಾಗಿದೆ. ಸರಕಾರ ತಪ್ಪನ್ನು ಒಪ್ಪಿಕೊಂಡು ಅದನ್ನು ಸರಿಪಡಿಸಿ ಬಡವರಿಗೆ ನ್ಯಾಯ ಒದಗಿಸಿಕೊಡಲಿ”ಎಂದು ಆಗ್ರಹಿಸಿದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment