Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಪಂಚರತ್ನ ರಥಯಾತ್ರೆಯಲ್ಲಿ ಸುಸ್ತಾದ ಶಾಸಕ : ತೆರೆದ ವಾಹನದಲ್ಲಿ ಕುಸಿದು ಕೂತರು..!

Facebook
Twitter
Telegram
WhatsApp

ಮಂಡ್ಯ: ಚುನಾವಣೆ ಸಮೀಪಿಸುತ್ತಿದ್ದಂತೆ ಮೂರು ಪಕ್ಷಗಳು ತಮ್ಮ ಪ್ರಚಾರ ಕಾರ್ಯವನ್ನು ಭರ್ಜರಿಯಾಗಿ ಮುಂದುವರೆಸಿವೆ. ಜೆಡಿಎಸ್ ಪಕ್ಷ ಪಂಚರತ್ನ ರಥಯಾತ್ರೆಯ ಮೂಲಕ ಜನರನ್ನು ಸೆಲೆಯುವ ಪ್ರಯತ್ನ ನಡೆಸುತ್ತಿದೆ. ಈ ಮೂಲಕ ಜಿಲ್ಲೆ ಜಿಲ್ಲೆಗಳಿಗೂ ಜೆಡಿಎಸ್ ಪಂಚರತ್ನ ರಥಯಾತ್ರೆ ಸಾಗುತ್ತಿದೆ. ಇಂದು ಮಂಡ್ಯ ಜಿಲ್ಲೆಯಲ್ಲಿ ಯಾತ್ರೆ ಸಾಗುತ್ತಿದೆ.

ಮದ್ದೂರಿನಲ್ಲಿ ಈ ಬಾರಿ ಡಿ ಸಿ ತಮ್ಮಣ್ಣ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ. ಇವರ ಪರವಾಗಿ ಮತಬೇಟೆಯನ್ನು ಕುಮಾರಸ್ವಾಮಿ ಆರಂಭಿಸಿದ್ದಾರೆ. ಯಾತ್ರೆ ಮೂಲಕ ಜನರ ಬಳಿ ಸಾಗಿದ್ದು, ತಮ್ಮಣ್ಣನ ಬಗ್ಗೆ ಮಾತನಾಡುತ್ತಾ ಸಾಗಿದ್ದಾರೆ. ಜೆಡಿಎಸ್ ನಿಂದ ಸಂಕಲ್ಪ ಮಾಡಿರುವ ಅಭಿವೃದ್ಧಿಗಳ ಬಗ್ಗೆಯೂ ರಥಯಾತ್ರೆಯಲ್ಲಿ ಹೇಳಲಾಗುತ್ತಿದೆ.

ಹೀಗೆ ತೆರೆದ ವಾಹನದಲ್ಲಿ ಕುಮಾರಸ್ವಾಮಿ ನಿಂತು ಭಾಷಣ ಮಾಡುತ್ತಿದ್ದಾಗ ವಾಹನದಲ್ಲಿದ್ದ ಶಾಸಕ ಡಿಸಿ ತಮ್ಮಣ್ಣ ಆಯಾಸದಿಂದ ಕುಸಿದು ಕೂತಿದ್ದಾರೆ. ಬಿಸಿಲು ಬೇರೆ ಇದ್ದ ಕಾರಣ ಅವರ ಸುಸ್ತಿಗೆ ಕಾರಣವಾಗಿರಬಹುದು. ಯಾತ್ರೆಯಲ್ಲಿದ್ದವರು ಕೂಡ ಶಾಕ್ ಆಗಿದ್ದಾರೆ. ತಕ್ಷಣ ಅವರನ್ನು ವಾಹನದಲ್ಲಿಯೇ ಕೂರಿಸಿ, ವೈದ್ಯರನ್ನು ಕರೆಸಿ, ಚಿಕಿತ್ಸೆ ಕೊಡಿಸಿದ್ದಾರೆ. ಒಂದಷ್ಟು ಸಮಯ ಯಾತ್ರೆಯನ್ನು ನಿಲ್ಲಿಸಲಾಗಿತ್ತು. ಬಳಿಕ ಡಿಸಿ ತಮ್ಮಣ್ಣ ಅವರೇ ಜನರತ್ತ ಕೈಬೀಸಿ ನಾನು ಹುಷರಾಗಿದ್ದೇನೆ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

43 ವಯಸ್ಸು ಅಂತ ಚಿಂತೆ ಬೇಡ.. PDO ಹುದ್ದೆಗೆ ನೀವೂ ಅರ್ಜಿ ಹಾಕಬಹುದು..!

ಬೆಂಗಳೂರು: ಎಷ್ಟೋ ಯುವಕ-ಯುವತಿಯರು ಸರ್ಕಾರಿ ಕೆಲಸಕ್ಕಾಗಿ ತಮ್ಮಿಡಿ ಜೀವನವನ್ನ ಮುಡಿಪಾಗಿಟ್ಟು ಓದುತ್ತಾ ಇರುತ್ತಾರೆ. ಆದರೆ ಎಲ್ಲರಿಗೂ ಸರ್ಕಾರಿ ಕೆಲಸಕ್ಕೆ ಹೋಗುವ ಅದೃಷ್ಟವೂ ಇರುವುದಿಲ್ಲ, ಕೆಲಸವೂ ಸಿಗುವುದಿಲ್ಲ. ವಯಸ್ಸು ಮೀರುತ್ತೆ. ಆದ್ರೀಗ ಅರ್ಜಿ ಆಹ್ವಾನಿಸಿರುವ ಪಿಡಿಓ

Tirumala Laddu : ತಿರುಪತಿ ಲಡ್ಡುವಿನಲ್ಲಿ ಪ್ರಾಣಿಗಳ ಕೊಬ್ಬು : ಬಿಡುಗಡೆಯಾದ ಲ್ಯಾಬ್ ವರದಿಯಲ್ಲೇನಿದೆ ?

ಸುದ್ದಿಒನ್, ತಿರುಮಲ, ಸೆಪ್ಟೆಂಬರ್. 19 : ಆಂಧ್ರಪ್ರದೇಶದಲ್ಲಿ ತಿರುಮಲ ತಿರುಪತಿ ಲಡ್ಡು ವಿಚಾರ ಬಾರೀ ಸದ್ದು ಮಾಡುತ್ತಿದೆ. ವೈಸಿಪಿ ಆಡಳಿತದಲ್ಲಿ ಲಡ್ಡೂಗಳಿಗೆ ಪ್ರಾಣಿಗಳ ಕೊಬ್ಬನ್ನು ಬಳಸಲಾಗುತ್ತಿತ್ತು ಎಂಬ ಸಿಎಂ ಚಂದ್ರಬಾಬು ಹೇಳಿಕೆ ಸಂಚಲನ ಮೂಡಿಸಿತ್ತು.

ಸೆಪ್ಟೆಂಬರ್ 21 ರಂದು ದಾವಣಗೆರೆಯಲ್ಲಿ ಉದ್ಯೋಗ ಮೇಳ

ದಾವಣಗೆರೆ,ಸೆಪ್ಟೆಂಬರ್.19 : ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಇವರ ವತಿಯಿಂದ ಸೆ.21 ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಕೊಠಡಿ ಸಂಖ್ಯೆ-51,  ಜಿಲ್ಲಾಧಿಕಾರಿಗಳ ಕಚೇರಿ, ದಾವಣಗೆರೆ ಇಲ್ಲಿ ಉದ್ಯೋಗಮೇಳ ಆಯೋಜಿಸಲಾಗಿದೆ.

error: Content is protected !!