Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

16 ಕೋಟಿ ವೆಚ್ಚದಲ್ಲಿ ಎಮ್ಮಿಗನೂರು 110 ಕೆ.ವಿ ಕಾಮಗಾರಿಗೆ ಚಾಲನೆ ನೀಡಿದ ಶಾಸಕ ಜೆ.ಎನ್.ಗಣೇಶ

---Advertisement---

ಕುರುಗೋಡು.(ಜ.28) : ಬಹುದಿನದ ರೈತರ ಕನಸಿನಂತೆ ಎಮ್ಮಿಗನೂರು ಗ್ರಾಮದಲ್ಲಿ 110 ಕೆ.ವಿ ವಿದ್ಯುತ್ ಉಪ ಕೇಂದ್ರದ ಕಾಮಗಾರಿಗೆ ಚಾಲನೆ ದೊರೆತಿರುವುದು ಸಂತಸ ತರಿಸಿದೆ ಎಂದು ಶಾಸಕ ಜೆ.ಎನ್.ಗಣೇಶ್ ಹೇಳಿದರು.

ಸಮೀಪದ ಎಮ್ಮಿಗನೂರು ಗ್ರಾಮದಲ್ಲಿ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮದ ಯೋಜನೆಯಡಿ ಸುಮಾರು 16 ಕೋಟಿ 20 ಲಕ್ಷ ವೆಚ್ಚದಲ್ಲಿ 33/11 ಕೆ.ವಿ ವಿದ್ಯುತ್ ಉಪಕೇಂದ್ರದಿಂದ 110 ಕೆ.ವಿ ವಿದ್ಯುತ್ ಉಪ ಕೇಂದ್ರಕ್ಕೆ ಉನ್ನತೀಕರಿಸುವ ಕಾಮಗಾರಿಗೆ ಶನಿವಾರ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು ಈ ಭಾಗದ ರೈತರಿಗೆ 110 ಕೆ.ವಿ ಕೊಡಿಸಬೇಕೆಂದು ಸತತ ನಾಲ್ಕು ವರ್ಷದ ನಿಂತರ ಪ್ರಯತ್ನದಿಂದಾಗಿ ಇಂದು 110 ಕೆ.ವಿ ವಿದ್ಯುತ್ ಉಪ ಕೇಂದ್ರ ಕಾಮಗಾರಿ ಕಾರ್ಯರೂಪಕ್ಕೆ ಬಂದಿದೆ. ಎಮ್ಮಿಗನೂರು, ಬಳಾಪುರ, ಒರ್ವಾಯಿ, ಶಂಕರ್ ಸಿಂಗ್ ಕ್ಯಾಂಪ್, ಸೇರಿದಂತೆ ಇತರೆ ಹಳ್ಳಿಗಳಿಗೆ ಎಮ್ಮಿಗನೂರು 110 ಕೆ.ವಿ ಅನುಕೂಲ ವಾಗಲಿದೆ ಎಂದರು.

ಇನ್ನೂ ಕೆಲ ದಿನಗಳಲ್ಲಿ ಕೊರ್ಲಗುಂದಿ, ಬಸರಕೋಡು, ದಮ್ಮೂರು ಗ್ರಾಮಗಳಲ್ಲಿ 110 ಕೆ. ವಿ. ವಿದ್ಯುತ್ ಗೆ ಚಾಲನೆ ದೊರೆಯಲಿದೆ.

ಈಗಾಗಲೇ 17 ಕೋಟಿ ವೆಚ್ಚದಲ್ಲಿ ರಸ್ತೆ ನಿರ್ಮಾಣ ಮಾಡಲಾಗಿದೆ ಅದರ ಮೇಲೆ ರೈತರು ಟ್ರ್ಯಾಕ್ಟರ್ ವಿಲ್ ಗಳನ್ನು ಬಳಸದೆ ರಸ್ತೆಯ ಗುಣ ಮಟ್ಟತೆ ಯನ್ನು ಕಾಪಾಡಿಕೊಳ್ಳಬೇಕು ಎಂದು ರೈತರಿಗೆ ಕರೆ ನೀಡಿದರು.

ರೈತರ ಸಂಕಷ್ಟ ತಿಳಿಸಿರುವುದರಿಂದ ಸಮಸ್ಯೆಗಳನ್ನು ಬಗೆಹರಿಸಲಾಗುತ್ತಿದೆ. ಮುಂದೆ ಜನರು ಆಶೀರ್ವಾದ ಮಾಡಿದರೆ, ಈ ಭಾಗದಲ್ಲಿ ಏತಾನೀರಾವರಿ ಮಾಡುವ ಜತೆಗೆ ರೈತರ ನೆಮ್ಮದಿಯ ಬದುಕಿಗಾಗಿ ನಾನಾ ಯೋಜನೆಗಳನ್ನು ತರಲಾಗುವುದು. ಮುಂದಿನ ದಿನದಲ್ಲಿ ರಾಜ್ಯದಲ್ಲಿ ಕಾಂಗ್ರೇಸ್ ಸರಕಾರ ಅಧಿಕಾರಕ್ಕೆ ಬಂದ್ರೆ ಜನರಿಗೆ ಇನ್ನೂ ಹೆಚ್ಚು ಅನುಕೂಲ ವಾಗುವ ಅಭಿವೃದ್ಧಿ ಯೋಜನೆ ಗಳನ್ನು ಅವರಿಗೆ ತಲುಪಿಸುವ ಪ್ರಯತ್ನ ಮಾಡುತ್ತೇನೆ ಎಂದರು.

ನಂತರ ಗ್ರಾಮದ ಮುಖಂಡರು ಮಾತನಾಡಿ, ಶಾಸಕರ ಮುತುವರ್ಜಿಯಿಂದಾಗಿ  ಎಮ್ಮಿಗನೂರು ಗ್ರಾಮದಲ್ಲಿ 110 ಕೆ.ವಿ ವಿದ್ಯುತ್ ಉಪ ಕೇಂದ್ರವಾಗಿದೆ. ರೈತರಿಗೆ ನೀಡುವ 7 ತಾಸು ವಿದ್ಯುತ್ ಸಾಕಾಗುತ್ತಿಲ್ಲ. ಆದ್ದರಿಂದ ಸತತ ಹತ್ತು ತಾಸು ವಿದ್ಯುತ್ ನೀಡಬೇಕು ಎಂದರು.

ಪ್ರಾರಂಭದಲ್ಲಿ ಶಾಸಕ ಗಣೇಶ್ ಗ್ರಾಮದ ವಾಮದೇವ ಮಹಾ ಸ್ವಾಮಿಗಳು ಮಠಕ್ಕೆ ತೆರಳಿ ಶ್ರೀಗಳ ಅಶ್ರಿವಾದ ಪಡೆದು, ಮುಖ್ಯ ರಸ್ತೆಯಿಂದ ಕೆ. ವಿ. ವರೆಗೆ ಮೆರವಣಿಗೆ ಮೂಲಕ ಬಂದು ಭೂಮಿ ಪೂಜೆ ನೆರೆವೇರಿಸಿದರು.

ಈ ಸಂದರ್ಭದಲ್ಲಿ ಅಧಿಕಾರಿಗಳು, ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು, ಮಹಿಳೆಯರು, ಮುಖಂಡರು ಇದ್ದರು.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...