Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

16 ಕೋಟಿ ವೆಚ್ಚದಲ್ಲಿ ಎಮ್ಮಿಗನೂರು 110 ಕೆ.ವಿ ಕಾಮಗಾರಿಗೆ ಚಾಲನೆ ನೀಡಿದ ಶಾಸಕ ಜೆ.ಎನ್.ಗಣೇಶ

Facebook
Twitter
Telegram
WhatsApp

ಕುರುಗೋಡು.(ಜ.28) : ಬಹುದಿನದ ರೈತರ ಕನಸಿನಂತೆ ಎಮ್ಮಿಗನೂರು ಗ್ರಾಮದಲ್ಲಿ 110 ಕೆ.ವಿ ವಿದ್ಯುತ್ ಉಪ ಕೇಂದ್ರದ ಕಾಮಗಾರಿಗೆ ಚಾಲನೆ ದೊರೆತಿರುವುದು ಸಂತಸ ತರಿಸಿದೆ ಎಂದು ಶಾಸಕ ಜೆ.ಎನ್.ಗಣೇಶ್ ಹೇಳಿದರು.

ಸಮೀಪದ ಎಮ್ಮಿಗನೂರು ಗ್ರಾಮದಲ್ಲಿ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮದ ಯೋಜನೆಯಡಿ ಸುಮಾರು 16 ಕೋಟಿ 20 ಲಕ್ಷ ವೆಚ್ಚದಲ್ಲಿ 33/11 ಕೆ.ವಿ ವಿದ್ಯುತ್ ಉಪಕೇಂದ್ರದಿಂದ 110 ಕೆ.ವಿ ವಿದ್ಯುತ್ ಉಪ ಕೇಂದ್ರಕ್ಕೆ ಉನ್ನತೀಕರಿಸುವ ಕಾಮಗಾರಿಗೆ ಶನಿವಾರ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು ಈ ಭಾಗದ ರೈತರಿಗೆ 110 ಕೆ.ವಿ ಕೊಡಿಸಬೇಕೆಂದು ಸತತ ನಾಲ್ಕು ವರ್ಷದ ನಿಂತರ ಪ್ರಯತ್ನದಿಂದಾಗಿ ಇಂದು 110 ಕೆ.ವಿ ವಿದ್ಯುತ್ ಉಪ ಕೇಂದ್ರ ಕಾಮಗಾರಿ ಕಾರ್ಯರೂಪಕ್ಕೆ ಬಂದಿದೆ. ಎಮ್ಮಿಗನೂರು, ಬಳಾಪುರ, ಒರ್ವಾಯಿ, ಶಂಕರ್ ಸಿಂಗ್ ಕ್ಯಾಂಪ್, ಸೇರಿದಂತೆ ಇತರೆ ಹಳ್ಳಿಗಳಿಗೆ ಎಮ್ಮಿಗನೂರು 110 ಕೆ.ವಿ ಅನುಕೂಲ ವಾಗಲಿದೆ ಎಂದರು.

ಇನ್ನೂ ಕೆಲ ದಿನಗಳಲ್ಲಿ ಕೊರ್ಲಗುಂದಿ, ಬಸರಕೋಡು, ದಮ್ಮೂರು ಗ್ರಾಮಗಳಲ್ಲಿ 110 ಕೆ. ವಿ. ವಿದ್ಯುತ್ ಗೆ ಚಾಲನೆ ದೊರೆಯಲಿದೆ.

ಈಗಾಗಲೇ 17 ಕೋಟಿ ವೆಚ್ಚದಲ್ಲಿ ರಸ್ತೆ ನಿರ್ಮಾಣ ಮಾಡಲಾಗಿದೆ ಅದರ ಮೇಲೆ ರೈತರು ಟ್ರ್ಯಾಕ್ಟರ್ ವಿಲ್ ಗಳನ್ನು ಬಳಸದೆ ರಸ್ತೆಯ ಗುಣ ಮಟ್ಟತೆ ಯನ್ನು ಕಾಪಾಡಿಕೊಳ್ಳಬೇಕು ಎಂದು ರೈತರಿಗೆ ಕರೆ ನೀಡಿದರು.

ರೈತರ ಸಂಕಷ್ಟ ತಿಳಿಸಿರುವುದರಿಂದ ಸಮಸ್ಯೆಗಳನ್ನು ಬಗೆಹರಿಸಲಾಗುತ್ತಿದೆ. ಮುಂದೆ ಜನರು ಆಶೀರ್ವಾದ ಮಾಡಿದರೆ, ಈ ಭಾಗದಲ್ಲಿ ಏತಾನೀರಾವರಿ ಮಾಡುವ ಜತೆಗೆ ರೈತರ ನೆಮ್ಮದಿಯ ಬದುಕಿಗಾಗಿ ನಾನಾ ಯೋಜನೆಗಳನ್ನು ತರಲಾಗುವುದು. ಮುಂದಿನ ದಿನದಲ್ಲಿ ರಾಜ್ಯದಲ್ಲಿ ಕಾಂಗ್ರೇಸ್ ಸರಕಾರ ಅಧಿಕಾರಕ್ಕೆ ಬಂದ್ರೆ ಜನರಿಗೆ ಇನ್ನೂ ಹೆಚ್ಚು ಅನುಕೂಲ ವಾಗುವ ಅಭಿವೃದ್ಧಿ ಯೋಜನೆ ಗಳನ್ನು ಅವರಿಗೆ ತಲುಪಿಸುವ ಪ್ರಯತ್ನ ಮಾಡುತ್ತೇನೆ ಎಂದರು.

ನಂತರ ಗ್ರಾಮದ ಮುಖಂಡರು ಮಾತನಾಡಿ, ಶಾಸಕರ ಮುತುವರ್ಜಿಯಿಂದಾಗಿ  ಎಮ್ಮಿಗನೂರು ಗ್ರಾಮದಲ್ಲಿ 110 ಕೆ.ವಿ ವಿದ್ಯುತ್ ಉಪ ಕೇಂದ್ರವಾಗಿದೆ. ರೈತರಿಗೆ ನೀಡುವ 7 ತಾಸು ವಿದ್ಯುತ್ ಸಾಕಾಗುತ್ತಿಲ್ಲ. ಆದ್ದರಿಂದ ಸತತ ಹತ್ತು ತಾಸು ವಿದ್ಯುತ್ ನೀಡಬೇಕು ಎಂದರು.

ಪ್ರಾರಂಭದಲ್ಲಿ ಶಾಸಕ ಗಣೇಶ್ ಗ್ರಾಮದ ವಾಮದೇವ ಮಹಾ ಸ್ವಾಮಿಗಳು ಮಠಕ್ಕೆ ತೆರಳಿ ಶ್ರೀಗಳ ಅಶ್ರಿವಾದ ಪಡೆದು, ಮುಖ್ಯ ರಸ್ತೆಯಿಂದ ಕೆ. ವಿ. ವರೆಗೆ ಮೆರವಣಿಗೆ ಮೂಲಕ ಬಂದು ಭೂಮಿ ಪೂಜೆ ನೆರೆವೇರಿಸಿದರು.

ಈ ಸಂದರ್ಭದಲ್ಲಿ ಅಧಿಕಾರಿಗಳು, ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು, ಮಹಿಳೆಯರು, ಮುಖಂಡರು ಇದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

Watermelon vs Muskmelon : ಕಲ್ಲಂಗಡಿ vs ಕರ್ಬೂಜ |  ಬೇಸಿಗೆಯಲ್ಲಿ ಆರೋಗ್ಯಕ್ಕೆ ಯಾವುದು ಉತ್ತಮ ?

  ಸುದ್ದಿಒನ್ : ಕಲ್ಲಂಗಡಿ ಮತ್ತು ಕರ್ಬೂಜ ಎರಡೂ ಬೇಸಿಗೆಯಲ್ಲಿ ಬಹಳ ಜನಪ್ರಿಯವಾದ ಹಣ್ಣುಗಳಾಗಿವೆ.  ಎರಡನ್ನೂ ಇಷ್ಟಪಡುವ ಅನೇಕ ಜನರಿದ್ದಾರೆ. ಆದರೆ ಈಗ ಇವೆರಡರಲ್ಲಿ ಯಾವುದು ಆರೋಗ್ಯಕ್ಕೆ ಒಳ್ಳೆಯದು. ಅದರ ಬಗ್ಗೆ ತಿಳಿದುಕೊಳ್ಳೋಣ. ಕಲ್ಲಂಗಡಿ

ಈ ರಾಶಿಯ ಇಂಟೀರಿಯರ್ ಡಿಸೈನ್ ಮಾಡುವವರಿಗೆ ಧನ ಲಾಭ

ಈ ರಾಶಿಯ ಇಂಟೀರಿಯರ್ ಡಿಸೈನ್ ಮಾಡುವವರಿಗೆ ಧನ ಲಾಭ, ಈ ಪಂಚ ರಾಶಿಗಳಿಗೆ ಆಕಸ್ಮಿಕ ಧನ ಲಾಭ ಪ್ರಾಪ್ತಿ,   ಗುರುವಾರ ರಾಶಿ ಭವಿಷ್ಯ ಏಪ್ರಿಲ್-25,2024 ಸೂರ್ಯೋದಯ: 05:57, ಸೂರ್ಯಾಸ್ತ : 06:30 ಶಾಲಿವಾಹನ

ಅಣ್ಣಾವ್ರಿಗೆ ಅಣ್ಣಾವ್ರೇ ಸಾಟಿ, ಹಿರಿಯೂರಲ್ಲಿ ಬಿ.ಎನ್.ಚಂದ್ರಪ್ಪ ಬಣ್ಣನೆ

ಸುದ್ದಿಒನ್, ಚಿತ್ರದುರ್ಗ, ಏ. 24 :  ಮುಖ್ಯಮಂತ್ರಿ ಸ್ಥಾನವನ್ನು ಸುಲಭವಾಗಿ ಅಲಂಕರಿಸುವ ಬಂದಿದ್ದ ಅವಕಾಶವನ್ನು ನಿರಾಕರಿಸಿ, ಕನ್ನಡ ನಾಡು-ನುಡಿಗೆ ಬದುಕು ಮಿಸಲಿಟ್ಟ ಡಾ.ರಾಜಕುಮಾರ್ ಅವರಿಗೆ ಅವರೇ ಸಾಟಿ ಎಂದು ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್.ಚಂದ್ರಪ್ಪ ಬಣ್ಣಿಸಿದರು.

error: Content is protected !!