Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಫಲ ನೀಡಿದ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಅವರ ಪ್ರಯತ್ನ : ಭದ್ರಾ ಮೇಲ್ದಂಡೆ ಯೋಜನೆಯಡಿ ಕೈಬಿಟ್ಟ 8 ಕೆರೆ ತುಂಬಿಸಲು ಕ್ರಮ

---Advertisement---

ಚಿತ್ರದುರ್ಗ. ಆ.06: ಚಿತ್ರದುರ್ಗ ವಿಧಾನಸಭಾ ಕ್ಷೇತ್ರದಲ್ಲಿ ಭದ್ರಾ ಮೇಲ್ದಂಡೆ ಯೋಜನೆಯಡಿ ಕೈಬಿಡಲಾಗಿದ್ದ 8 ಕೆರೆಗಳನ್ನು ತುಂಬಿಸುವ ಯೋಜನೆಗೆ ಸಂಬಂಧಿಸಿದಂತೆ ಅಗತ್ಯ ತೀರುವಳಿ ಪಡೆದು, ಸೂಕ್ತ ಶಿಫಾರಸ್ಸಿನೊಂದಿಗೆ ವಿಸ್ತøತ ಯೋಜನಾ ವರದಿ ಸಲ್ಲಿಸುವಂತೆ ಜಲಸಂಪನ್ಮೂಲ ಇಲಾಖೆಯು ವಿಶ್ವೇಶ್ವರಯ್ಯ ಜಲನಿಗಮ ನಿಯಮಿತದ ವ್ಯವಸ್ಥಾಪಕ ನಿರ್ದೇಶಕರಿಗೆ ಸೂಚಿಸಿದೆ.

ಭದ್ರಾ ಮೇಲ್ದಂಡೆ ಯೋಜನೆಯಿಂದ ಕೈ ಬಿಡಲಾಗಿದ್ದ ಚಿತ್ರದುರ್ಗ ವಿಧಾನಸಭಾ ಕ್ಷೇತ್ರದ 8 ಕೆರೆಗಳನ್ನು ಮತ್ತೆ ಯೋಜನೆಗೆ ಸೇರಿಸಲು ಚಿತ್ರದುರ್ಗ ಶಾಸಕರಾದ ಕೆ.ಸಿ.ವೀರೇಂದ್ರ ಪಪ್ಪಿ ಅವರ ಪ್ರಯತ್ನ ಫಲ ನೀಡಿದೆ.
ರೈತರ ಹಿತದೃಷ್ಠಿಯಿಂದ ಸರ್ಕಾರ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ, ‘ಆಲ್ಕಾನ್ ಕನ್ಸಲ್ಟೆನ್ಸಿ ಇಂಜಿನಿಯರ್ಸ್ (ಇಂಡಿಯಾ) ಪ್ರೈವೇಟ್ ಲಿಮಿಟೆಡ್’ ಸಂಸ್ಥೆಯು ವಿಸ್ತøತ ಕ್ಷೇತ್ರ ಸಮೀಕ್ಷೆ ನಡೆಸಿ, ರೂ.102.50 ಕೋಟಿ ಮೊತ್ತದ ಯೋಜನಾ ವರದಿಯನ್ನು ಸಿದ್ಧಪಡಿಸಿತ್ತು. ಈ ಅಂದಾಜು ಪಟ್ಟಿಯನ್ನು 2025ರ ಸೆಪ್ಟೆಂಬರ್ 19ರಂದು ನಡೆದ ಅಂದಾಜು ಪರಿಶೀಲನಾ ಸಮಿತಿಯ ಸಭೆಯಲ್ಲೂ ಮಂಡಿಸಲಾಗಿತ್ತು.

 

ಈ ಕುರಿತು ನಿಯಮಾನುಸಾರ ಸೂಕ್ತ ಪರಿಶೀಲನೆ ನಡೆಸಿ, ನಿಗಮದ ಮಂಡಳಿ ಸಭೆಯಲ್ಲಿ ಮಂಡಿಸಿ ತೀರುವಳಿ (ಅನುಮೋದನೆ) ಪಡೆದುಕೊಂಡು, ಅಂತಿಮ ಯೋಜನಾ ವರದಿಯನ್ನು ಸರ್ಕಾರಕ್ಕೆ ಸಲ್ಲಿಸುವಂತೆ ಜಲಸಂಪನ್ಮೂಲ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ (ತಾಂತ್ರಿಕ-4) ಎಲ್.ಲಕ್ಷ್ಮೀ ತಿಳಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now