Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಹಿರಿಯೂರಿನ ವಾಗ್ದೇವಿ ಪಬ್ಲಿಕ್ ಶಾಲೆಯಲ್ಲಿ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮ ಉದ್ಘಾಟಿಸಿದ ಶಾಸಕಿ ಕೆ.ಪೂರ್ಣಿಮಾ ಶ್ರೀನಿವಾಸ್

---Advertisement---

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಬೆಳಗೆರೆ
ಮೊ : 9739875729

ಚಿತ್ರದುರ್ಗ : ಮಕ್ಕಳಿಗೆ ಚಿಕ್ಕ ವಯಸ್ಸಿನಲ್ಲಿ ಸಂಸ್ಕಾರ ಕಲಿಸಬೇಕು. ಗಿಡವಾಗಿ ಬಗ್ಗಿದ್ದು ಮರವಾಗಿ ಬಗ್ಗೀತೆ ಎಂಬ ಗಾದೆಯಂತೆ ಮಕ್ಕಳಿಗೆ ಚಿಕ್ಕವರಿದ್ದಾಗಲೇ ಉತ್ತಮ ಶಿಕ್ಷಣ ಕೋಡಿಸಬೇಕು ಎಂದು ಹಿರಿಯೂರು ಶಾಸಕಿ ಕೆ ಪೂರ್ಣಿಮಾ ಶ್ರೀನಿವಾಸ್ ಹೇಳಿದರು.

ಹಿರಿಯೂರು ನಗರದ  ನಗರಂಗೆರೆ ರಸ್ತೆಯ ಸಮೀಪವಿರುವ ವಾಗ್ದೇವಿ ಪಬ್ಲಿಕ್ ಶಾಲೆಯಲ್ಲಿ ಶಾಲಾವತಿಯಿಂದ ಹಮ್ಮಿಕೊಂಡಿದ್ದ ಶಾಲಾ ವಾರ್ಷಿಕೋತ್ಸವ ಹಾಗೂ ಸಿರಿ ಸಿಂಚನ ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದರು.

ಶಿಕ್ಷಣ ಸಂಸ್ಥೆ ಕಟ್ಟಿ ಶಿಕ್ಷಣ ಕಲಿಸುವುದು ತುಂಬಾ ಜವಾಬ್ದಾರಿಯ ಕೆಲಸವಾಗಿದೆ. ನಾನು ಸಹ ಶಿಕ್ಷಣ ಸಂಸ್ಥೆ ನಡೆಸುವವಳಾಗಿ ಸಂಪೂರ್ಣವಾಗಿ ತಿಳಿದಿದ್ದೇನೆ. ಚಿಕ್ಕಣ್ಣ ಇವರು ಸಂಸ್ಥೆ ಕಟ್ಟಿ ಬೆಳಸಿ ಈ ಭಾಗದ ಬಡ ಮಕ್ಕಳಿಗೆ ವಿದ್ಯದಾನ ಮಾಡುತ್ತಿದ್ದಾರೆ. ಪೋಷಕರು ಸಹ ಅಷ್ಟೇ ಜವಾಬ್ದಾರಿಯಿಂದ ಮಕ್ಕಳನ್ನು ಶಾಲೆಗೆ ಕಳಿಸಬೇಕು. ಪ್ರತಿಯೊಬ್ಬರಿಗೂ ಶಿಕ್ಷಣವೇ ಶಕ್ತಿಯಾಗಿದೆ ಇಂದು ಶಿಕ್ಷಣವಿದ್ದರೆ ಏನು ಬೇಕಾದರು ಸಾಧಿಸಬಹುದು.

ಇಂದಿನ ಕಾರ್ಯಕ್ರಮದಲ್ಲಿ ಮಕ್ಕಳ ಸಾಂಸ್ಕೃತಿ ಕಾರ್ಯಕ್ರಮ ನೋಡಲು ಎಲ್ಲರೂ ಕಾತುರರಾಗಿದ್ದಾರೆ. ಅದರಲ್ಲೂ ತಾಯಂದಿರು ಸಹ ತುಂಬಾ ಆಸಕ್ತಿ ವಹಿಸಿ ಈ ಕಾರ್ಯಕ್ರಮಕ್ಕೆ ಬಂದು ಕಾರ್ಯಕ್ರಮ ವೀಕ್ಷಣೆಗೆ ಕಾತರರಾಗಿದ್ದಾರೆ.

ಪ್ರತಿಯೊಬ್ಬರು ತನ್ನ ಮಕ್ಕಳ ಮೇಲೆ ಕನಸು ಕಟ್ಟಿಕೊಂಡು ಶಾಲೆಗೆ ಕಳಿಸುತ್ತಾರೆ. ಮಕ್ಕಳು ಮುಂದೆ ಏನಾಗಬೇಕು ಏನು ಓದಬೇಕು ಎಂಬುದನ್ನು ಕನಸು ಕಟ್ಟಿಕೊಂಡು ಕಳಿಸುತ್ತಾರೆ. ಆದರೆ ಮಕ್ಕಳಲ್ಲಿ ಏನಿದೆ ಅವರ ಅಭಿರುಚಿಯನ್ನು ಎಂಬುದನ್ನು ಯಾರು ತಿಳಿದುಕೊಳ್ಳುವುದಿಲ್ಲ. ಮನೆಯಿಂದ ಮಕ್ಕಳು ಶಾಲೆಗೆ ಹೋದರೆ ಪ್ರತಿಯೊಂದು ಶಾಲೆಯ ಶಾಲೆಯವರದೇ ಜವಾಬ್ದಾರಿ ಎಂದು ಕೊಳ್ಳಬಾರದು ಪ್ರತಿಯೊಬ್ಬರ ಜವಾಬ್ದಾರಿ ಹೊತ್ತು ಮಕ್ಕಳನ್ನು ಶಾಲೆಗೆ ಕಳಿಸಬೇಕು ಎಂದು ಪೋಷಕರಿಗೆ ಕಿವಿ ಮಾತು ಹೇಳಿದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...