ಸಿದ್ದರಾಮೋತ್ಸವಕ್ಕೆ ಪರ್ಯಾಯವಾಗಿ ಡಿಕೆ ಶಿವಕುಮಾರೋತ್ಸವ : ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದೇನು..?

1 Min Read

ಬೆಂಗಳೂರು: ಮಾಜಿ ಸಿಎಂ ಸಿದ್ದರಾಮಯ್ಯ ಅವರ ಈ ವರ್ಷದ ಹುಟ್ಟುಹಬ್ಬವನ್ನು ಬಹಳ ಅದ್ಧೂರಿಯಾಗಿ ಆಚರಿಸಲು ತೀರ್ಮಾನಿಸಲಾಗಿದೆ. 75ನೇ ವರ್ಷದ ಹುಟ್ಟುಹಬ್ಬವನ್ನು ಗ್ರ್ಯಾಂಡ್ ಆಗಿ ಮಾಡಲು ನಿಶ್ಚಯಿಸಿದ್ದಾರೆ. ಆದರೆ ಈ ಬೆನ್ನಲ್ಲೇ ಸಿದ್ದರಾಮೋತ್ಸವಕ್ಕೆ ಪರ್ಯಾಯವಾಗಿ ಡಿಕೆ ಶಿವಕುಮಾರೋತ್ಸವದ ವಿಚಾರ ಸದ್ದು ಮಾಡುತ್ತಿದೆ.

ಈ ವಿಚಾರದ ಬಗ್ಗೆ ಮಾತನಾಡಿದ ಲಕ್ಷ್ಮೀ ಹೆಬ್ಬಾಳ್ಕರ್, ಈ ಪತ್ರದ ಬಗ್ಗೆ ಮಾಹಿತಿ ಇಲ್ಲ. ಸಿದ್ದರಾಮೋತ್ಸವ ಸಮಿತಿಯಲ್ಲಿ ನಾನು ಇದ್ದೇನೆ. ಸಮಿತಿಯ ಪೂರ್ವಭಾವಿ ಸಭೆಯಲ್ಲಿ ನಾನು ಭಾಗವಹಿಸುತ್ತೇನೆ. ಸಿದ್ದರಾಮಯ್ಯನವರು 75 ವರ್ಷ ರಾಜಕೀಯ ಜೀವನದಲ್ಲಿ ತಮ್ಮದ್ದೇ ಆದ ಕೊಡುಗೆ ನೀಡಿದ್ದಾರೆ.

 

ಸಿದ್ದರಾಮೋತ್ಸವವನ್ನು ನಾವೆಲ್ರೂ ಸೇರಿ ಮಾಡ್ತಿದೀವಿ. 75 ವರ್ಷದ ಮನುಷ್ಯ ಜೀವನದಲ್ಲಿ ಸಾರ್ಥಕಕತೆ ಮೆರೆದಿದ್ದಾರೆ. ಅವರು ಹಿರಿಯರು ಅವರೊಬ್ಬರೇ ಕಾರ್ಯಕ್ರಮ ಅಂತಿಲ್ಲ. ನಾವೆಲ್ಲ ಸೇರಿಕೊಂಡು ಕಾರ್ಯಕ್ರಮ ಮಾಡುತ್ತಿದ್ದೇವೆ. ಅವರಿಗೆ ಒಳ್ಳೆಯದು ಆಗಲಿ ಅನ್ನೋದು ನಮ್ಮೆಲ್ಲರ ಆಸೆ ಎಂದು ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *