ಹೊಳಲ್ಕೆರೆಯಲ್ಲಿ ದಲಿತ ಸಮುದಾಯದ ಮುಖಂಡರಿಂದ ಶಾಸಕ ಎಂ.ಚಂದ್ರಪ್ಪಗೆ ಮುತ್ತಿಗೆ

 

ಮಾಹಿತಿ ಮತ್ತು ಫೋಟೋ ಕೃಪೆ
ಪಾಂಡುರಂಗಪ್ಪ, ಹೊಳಲ್ಕೆರೆ,
9986343484

ಹೊಳಲ್ಕೆರೆ, (ಜೂ. 04) : ಒಳಮೀಸಲು ನೀತಿ ಜಾರಿಗೆ ಮುಂದಾಗಿದ್ದೇ ಬಿಜೆಪಿ ಸೋಲಿಗೆ ಕಾರಣವೆಂದು ಹೇಳುವ ಮೂಲಕ ಜಾತಿ-ಜಾತಿಗಳ ಮಧ್ಯೆ ಗಲಾಟೆ ಉಂಟು ಮಾಡಲು ಯತ್ನಿಸಿದ್ದಾರೆ ಎಂದು ಆರೋಪಿಸಿ ಹೊಳಲ್ಕೆರೆ ಶಾಸಕ ಎಂ.ಚಂದ್ರಪ್ಪ ಅವರಿಗೆ ಮಾದಿಗ ಸಮುದಾಯದ ನೂರಾರು ಮುಖಂಡರು ದಿಗ್ಬಂಧನ ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪ್ರವಾಸಿಮಂದಿರದ ಬಳಿ ಭಾನುವಾರ ಜಮಾಯಿಸಿದ ಮಾದಿಗ ಹಾಗೂ ದಲಿತ ಸಂಘರ್ಷ ಸಮಿತಿಯ ನೂರಾರು ಮುಖಂಡರು, ಚಂದ್ರಪ್ಪ ಅವರಿದ್ದ ಕಾರಿಗೆ ಕೆಲಕಾಲ ದಿಗ್ಬಂಧನ ಹಾಕಿ ದಿಕ್ಕಾರ ಕೂಗಿದರು.

ಯಾವುದೇ ಪಕ್ಷ ಚುನಾವಣೆಯಲ್ಲಿ ಸೋಲಲು ವಿವಿಧ ಕಾರಣಗಳು ಇರುತ್ತವೆ. ಆದರೆ ಹೊಳಲ್ಕೆರೆ ಶಾಸಕ ಎಂ.ಚಂದ್ರಪ್ಪ ಮಾತ್ರ, ರಾಜ್ಯದಲ್ಲಿ ಬಿಜೆಪಿ ಸೋಲಿಗೆ ಮಾದಿಗ ಸಮುದಾಯದ ರಾಜ್ಯದ ಪ್ರಭಾವಿ ನಾಯಕರಾದ ಎ.ನಾರಾಯಣಸ್ವಾಮಿ, ಗೋವಿಂದ ಕಾರಜೋಳ ಹಾಗೂ ಮುಖ್ಯಮಂತ್ರಿ ಬಸರಾಜ ಬೊಮ್ಮಾಯಿ ಅವರೇ ಮುಖ್ಯ ಕಾರಣ ಎಂದು ಹೇಳಿಕೆ ನೀಡಿರುವುದು ಅತ್ಯಂತ ನೋವಿನ ವಿಷಯ ಎಂದು ಬೇಸರಿಸಿದರು.

ಚುನಾವಣೆಗೆ ಮುನ್ನ ಈ ರೀತಿ ಹೇಳಿಕೆ ನೀಡಿದ್ದರೆ ಚಂದ್ರಪ್ಪ ಸೋಲು ಖಚಿತವಾಗುತ್ತಿತ್ತು. ಆದರೆ ಚುನಾವಣೆ ಮುಗಿದ ಬಳಿಕ ಈ ರೀತಿ ಹೇಳಿಕೆ ನೀಡಿ ಕ್ಷೇತ್ರದಲ್ಲಿ ಸಹೋದರರ ರೀತಿ ಜೀವನ ನಡೆಸುತ್ತಿರುವ ಮಾದಿಗ, ಭೋವಿ, ಲಂಬಾಣಿ, ಕೊರಚ ಇತರೆ ಜಾತಿಗಳ ಮಧ್ಯೆ ವಿಷ ಬೀಜ ಬಿತ್ತುವ ಕೆಲಸಕ್ಕೆ ಕೈ ಹಾಕಿದ್ದಾರೆ. ಈ ಮೂಲಕ ಕ್ಷೇತ್ರದಲ್ಲಿ ಗಲಭೆ ಹುಟ್ಟಿ ಹಾಕಿ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಮುಂದಾಗಿದ್ದಾರೆ ಎಂದು ಆರೋಪಿಸಿದರು.

ಆರು ತಿಂಗಳ ಹಿಂದೆ ತನ್ನ ಬೆಂಬಲಿಗನ ಮೂಲಕ ವೀರಶೈವ ಲಿಂಗಾಯತ ಮುಖಂಡನ ಮೇಲೆ ಮಾರಾಣಾಂತಿಕ ಹಲ್ಲೆ ನಡೆಸಿದ್ದು, ಅಶಕ್ತ ಮಹಿಳೆಯೊಬ್ಬರ ಆಸ್ತಿಯನ್ನು ತನ್ನ ಕುಟುಂಬದ ಹೆಸರಿಗೆ ಅಕ್ರಮವಾಗಿ ನೋಂದಣಿ ಮಾಡಿಸಿಕೊಂಡು, ಕ್ಷೇತ್ರದಲ್ಲಿ ಸರ್ವಾಧಿಕಾರಿ ರೀತಿ ವರ್ತಿಸುತ್ತಿರುವ ಚಂದ್ರಪ್ಪ, ಈಗ ಜಾತಿ ಗಲಭೆ ಹುಟ್ಟುಹಾಕಲು ಮುಂದಾಗಿದ್ದಾರೆ ಎಂದು ಆರೋಪಿಸಿದರು.

ಬಿಜೆಪಿ ವರಿಷ್ಢರು ಹಾಗೂ ಸಂಘಪರಿವಾರದ ನಿರ್ಧಾರದಂತೆ ಮುಖ್ಯಮಂತ್ರಿ ಆಗಿದ್ದ ಬಸವರಾಜ್ ಬೊಮ್ಮಾಯಿ ಒಳಮೀಸಲು ಜಾರಿಗಾಗಿ ಕೇಂದ್ರಕ್ಕೆ ಶಿಫಾರಸು ಮಾಡಿದರು. ಈ ಸಂದರ್ಭ ಸಂಪುಟದಲ್ಲಿದ್ದ ಭೋವಿ, ಲಂಬಾಣಿ ಸಮುದಾಯದವರು ಕೂಡ ಒಪ್ಪಿಗೆ ನೀಡಿದ್ದಾರೆ. ಜೊತೆಗೆ ಆ ಸಂದರ್ಭ ಬಾಯಿಮುಚ್ಚಿಕೊಂಡಿದ್ದ ಚಂದ್ರಪ್ಪ, ಈ ಚುನಾವಣೆಯಲ್ಲಿ ಅಲ್ಪಮತಗಳ ಅಂತರದಲ್ಲಷ್ಟೇ ಗೆದ್ದಿದ್ದೇನೆ ಎಂಬುದನ್ನು ಮರೆತು ಈಗ ಬಿಜೆಪಿ ಸೋಲಿಗೆ ಮಾದಿಗ ಸಮುದಾಯದ ಬಿಜೆಪಿ ಮುಖಂಡರೇ ಕಾರಣ ಎಂದು ಟೀಕೆ ಮಾಡುತ್ತಿರುವುದು ಪಕ್ಷ ವಿರೋಧಿ ಚಟುವಟಿಕೆ ಜೊತೆಗೆ, ರಾಜ್ಯದಲ್ಲಿ ಬಹುಸಂಖ್ಯೆಯಲ್ಲಿರುವ ಮಾದಿಗ ಸಮುದಾಯಕ್ಕೆ ಉದ್ದೇಶಪೂರ್ವಕವಾಗಿ ಅವಮಾನ ಮಾಡುಂತಹದ್ದಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಜೊತೆಗೆ ಕ್ಷೇತ್ರದಲ್ಲಿ ತನಗೆ ಮತ ಹಾಕದ ಲಂಬಾಣಿ ಸಮುದಾಯದ ಮೇಲೆ ಪರೋಕ್ಷವಾಗಿ ದ್ವೇಷ ತೀರಿಸಿಕೊಳ್ಳುವ ಹೇಳಿಕೆ ಚಂದ್ರಪ್ಪ ನೀಡಿದ್ದಾರೆ. ಆದ್ದರಿಂದ ಸಮುದಾಯಗಳ ವಿರುದ್ಧ ವಿಷಕಾರುತ್ತಿರುವ ಚಂದ್ರಪ್ಪನನ್ನು ಬಿಜೆಪಿ ಪಕ್ಷದಿಂದ ಉಚ್ಛಾಟನೆ ಮಾಡಬೇಕು. ಇಲ್ಲದಿದ್ದರೇ ಬಿಜೆಪಿ ವಿರುದ್ಧ ರಾಜ್ಯಾದ್ಯಂತ ಜನಜಾಗೃತಿ ಮೂಡಿಸಲಾಗುವುದು ಎಂದು ಎಚ್ಚರಿಸಿದರು.

ಹೊಳಲ್ಕೆರೆ ಕ್ಷೇತ್ರದ ಮಾದಿಗರ ಹಟ್ಟಿಯಲ್ಲೂ ಚಂದ್ರಪ್ಪ ಅವರಿಗೆ ಮತ ಹಾಕಲಾಗಿದೆ. ಕೆಲ ಜಾತಿ ಮುಖಂಡರಿಗೆ ಹಣದ ಆಮಿಷ ತೋರಿಸಿ ಮತ ಪಡೆದಿರುವ ಚಂದ್ರಪ್ಪ ಈಗ ಅದೇ ಸಮುದಾಯದ ನಾಯಕರಾದ ನಾರಾಯಣಸ್ವಾಮಿ, ಗೋವಿಂದ ಕಾರಜೋಳ ವಿರುದ್ಧ ಹೇಳಿಕೆ ಜೊತೆಗೆ ಅಂದಿನ ಮುಖ್ಯಮಂತ್ರಿ ಬಸರಾಜ ಬೊಮ್ಮಾಯಿ ಹಾಗೂ ಪಕ್ಷದ ವರಿಷ್ಠರ ನಿರ್ಧಾರವನ್ನೇ ಚಂದ್ರಪ್ಪ ವಿರೋಧಿಸಿ ಹೇಳಿಕೆ ನೀಡುತ್ತಿದ್ದಾರೆ.
ಜಾತಿಗಳ ಮಧ್ಯೆ ದ್ವೇಷ ಬಿತ್ತುವ ಇಂತಹ ಶಾಸಕನನ್ನು ಕೂಡಲೇ ಪಕ್ಷದಿಂದ ಉಚ್ಛಾಟಿಸಬೇಕು ಹಾಗೂ ಜಾತಿ ಗಲಭೆಗೆ ಪ್ರಚೋದನೆ ನೀಡುತ್ತಿರುವ ಆರೋಪದಡಿ ಪ್ರಕರಣ ದಾಖಲಿಸಿಕೊಂಡು ಬಂಧಿಸಬೇಕು ಎಂದು ಆಗ್ರಹಿಸಿದರು.

ತಕ್ಷಣ ಪೊಲೀಸರು ಮಧ್ಯ ಪ್ರವೇಶಿಸಿ ಶಾಸಕರಿದ್ದ ಕಾರು ಪ್ರವಾಸಿಮಂದಿರದಿಂದ ಹೊರಡಲು ಅವಕಾಶ ಕಲ್ಪಿಸಿಕೊಟ್ಟು ಪರಿಸ್ಥಿತಿ ತಿಳಿಗೊಳಿಸಿದರು.

ದಲಿತ ಸಂಘರ್ಷ ಸಮಿತಿ ರಾಜ್ಯ ಸಂಚಾಲಕ ಪಾಂಡುರಂಗಸ್ವಾಮಿ, ಮಾದಿಗ ಸಮುದಾಯದ ಮುಖಂಡರಾದ ಕೆಂಗುಂಟೆ ಜಯ್ಯಪ್ಪ, ಬಂಜಗೊಂಡನಹಳ್ಳಿ ಜಯಣ್ಣ,  ಮದ್ದೇರು ಕುಬೇರಪ್ಪ, ಚಿಕ್ಕಜಾಜೂರು ಸೋಮಣ್ಣ ಮುಂತಾದರಿದ್ದರು.

suddionenews

Recent Posts

ಮೈಕ್ರೋ ಫೈನಾನ್ಸ್ ಸುಗ್ರಿವಾಜ್ಞೆಗೆ ಅಂಕಿತ ಹಾಕದ ರಾಜ್ಯಪಾಲರು : ಸರ್ಕಾರಕ್ಕೆ ಹಿನ್ನಡೆ

ಬೆಂಗಳೂರು: ರಾಜ್ಯಾದ್ಯಂತ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳ ಹೆಚ್ಚಾಗಿದೆ. ಇದರಿಂದ ಅದೆಷ್ಟೋ ಜನ ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಸಾಲ ಕೊಟ್ಟ…

41 minutes ago

ಚಿತ್ರದುರ್ಗ APMC | ಶೇಂಗಾ, ಕಡಲೆ ಸೇರಿದಂತೆ ಇತರೆ ಉತ್ಪನ್ನಗಳ ಫೆಬ್ರವರಿ 07 ರ ಮಾರುಕಟ್ಟೆ ಧಾರಣೆ ವಿವಿರ ಇಲ್ಲಿದೆ…!

  ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 07 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಶೇಂಗಾ, ಕಡಲೆ, ಮೆಕ್ಕೆಜೋಳ ಸೇರಿದಂತೆ ಇತರೆ…

1 hour ago

ಚಿತ್ರದುರ್ಗದ ಅಳಿಯ ಡಾಲಿ ಮೇಲೆ ದರ್ಶನ್ ಫ್ಯಾನ್ಸ್ ಗರಂ : ಫುಲ್ ಟ್ರೋಲ್..!

ಬೆಂಗಳೂರು: ನಟ ಡಾಲಿ ಧನಂಜಯ್ ಮದುವೆ ಸಂಭ್ರಮದಲ್ಲಿದ್ದಾರೆ. ಚಿತ್ರದುರ್ಗದ ಅಳಿಯ ಬೇರೆ ಆಗ್ತಾ ಇದ್ದಾರೆ. ಧನ್ಯತಾ ಮೂಲತಃ ಚಿತ್ರದುರ್ಗದವರು. ಆದರೆ…

4 hours ago

ಮೂಡಾ ಅಪ್ಡೇಟ್: ಸಿಎಂ ಸಿದ್ದರಾಮಯ್ಯರಿಗೆ ರಿಲೀಫ್ ನೀಡಿದ ಹೈಕೋರ್ಟ್

ಬೆಂಗಳೂರು: ಇಂದು ಹೈಕೋರ್ಟ್ ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ್ದು ಸಿಎಂ ಸಿದ್ದರಾಮಯ್ಯ ಅವರಿಗೆ ಬಿಗ್ ರಿಲೀಫ್ ನೀಡಿದೆ. ಈ…

4 hours ago

ಈ ರಾಶಿಯವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ಒದಗಿ ಬರಲಿವೆ

ಈ ರಾಶಿಯವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ಒದಗಿ ಬರಲಿವೆ, ಈ ರಾಶಿಯವರಿಗೆ ಉತ್ತಮ ಸಂಗಾತಿ ಸಿಗುವರು, ಶುಕ್ರವಾರದ ರಾಶಿ ಭವಿಷ್ಯ…

11 hours ago

ಫೆಬ್ರವರಿ 10ಕ್ಕೆ ಕರ್ನಾಟಕದಲ್ಲಿ ಕುಂಭಮೇಳ : ಹೇಗಿದೆ ತಯಾರಿ..?

  144 ವರ್ಷಗಳಿಗೊಮ್ಮೆ ಬರುವ ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದರೆ ಕರ್ಮ ಕಳೆಯುತ್ತದೆ ಎಂದು ನಂಬಲಾಗಿದೆ. ಹೀಗಾಗಿ ಕೋಟ್ಯಾಂತರ ಮಂದಿ…

20 hours ago