Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಶಾಸಕ ಶಿವಲಿಂಗೇಗೌಡರ ಆಡಿಯೋದಿಂದ ಡಿಕೆಶಿ, ಸಿದ್ದರಾಮಯ್ಯರಿಗೆ ಸಂಕಷ್ಟ..!

---Advertisement---

ಬೆಂಗಳೂರು: ಕೆಲವೊಂದು ಸಣ್ಣ ಸಣ್ಣ ಎಡವಟ್ಟುಗಳು ದೊಡ್ಡ ದೊಡ್ಡ ಬೆಲೆಯನ್ನ ತೆರಬೇಕಾಗುತ್ತದೆ. ಈಗ ಕಾಂಗ್ರೆಸ್ ಪಾಳಯದಲ್ಲಿ ಆ ಪರಿಸ್ಥಿತಿ ನಿರ್ಮಾಣವಾಗಿದೆ. ಶಾಸಕ ಶಿವಲಿಂಗೇಗೌಡ ಅವರ ಆಡಿಯೋ ಈಗ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರಿಗೆ ಸಂಕಷ್ಟ ತಂದೊಡ್ಡುವ ಎಲ್ಲಾ ಸಾಧ್ಯತೆಯೂ ಇದೆ. ಕಳೆದ ಲೋಕಸಭಾ ಚುನಾವಣೆಯಲ್ಲಿ ವೋಟ್ ಗಾಗಿ ನೋಟು ಹಂಚಿಕೆ ಮಾಡಲಾಗಿದೆ ಎಂಬ ಆಡಿಯೋ ವೈರಲ್ ಆಗಿತ್ತು.

ಶಿವಲಿಂಗೇಗೌಡ ಅವರದ್ದೇ ಆಡಿಯೋ ಎನ್ನಲಾಗಿದ್ದು, ಈ ಸಂಬಂಧ ಬಿಜೆಪಿ ಮುಖಂಡ ದೇವರಾಜೇಗೌಡ ಅವರು ರಾಜ್ಯಪಾಲರಿಗೆ ದೂರು ನೀಡಿದ್ದಾರೆ. 2024ರ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಹಾಸನ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ಸಂಸದ ಶ್ರೇಯಸ್ ಎಂ ಪಾಟೀಲ್ ಪರವಾಗಿ ಜಿಲ್ಲೆಯಲ್ಲಿ ಹಣ ಹಂಚಿಕೆ ಮಾಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ರಾಜ್ಯಸಭಾ ಸದಸ್ಯ ಎನ್. ಚಂದ್ರಶೇಖರ್ ಸಮ್ಮುಖದಲ್ಲಿ ತೀರ್ಮಾನಿಸಲಾಗಿದೆ ಎಂದು ಮಾತನಾಡಿದ್ದರು. ಈ ಆಡಿಯೋ ಸಿಕ್ಕಾಪಟ್ಟೆ ವೈರಲ್ ಆಗಿತ್ತು.

ಇದೀಗ ಅದೇ ಆಡಿಯೋ ಸಿದ್ದರಾಮಯ್ಯ ಹಾಗೂ ಡಿಕೆಶಿ ಕಂಟಕವಾಗಬಹುದಾ ಎಂಬ ಪ್ರಶ್ನೆಗಳು ಮೂಡಿವೆ. ಯಾಕಂದ್ರೆ ಆ ಆಡಿಯೋದಲ್ಲಿ ಸಿದ್ದರಾಮಯ್ಯ ಹಾಗೂ ಡಿಕೆಶಿ ಹೆಸರು ಕೇಳಿ ಬಂದ ಹಿನ್ನೆಲೆ, ಇಬ್ಬರ ಮೇಲೂ ಕ್ರಿಮಿನಲ್ ಪ್ರಕರಣ ದಾಖಲಿಸಲು, ಪ್ರಾಸಿಕ್ಯೂಷನ್ ಗೆ ನೀಡಲು ವಕೀಲ ದೇವರಾಜೇಗೌಡ ಮನವಿ ಮಾಡಿದ್ದಾರೆ. 1.5 ಕೋಟಿ ಹಣ ಖರ್ಚು ಮಾಡಿರುವ ಬಗ್ಗೆ ಆ ಆಡಿಯೋದಲ್ಲಿ ಸ್ಪಷ್ಟವಾಗಿ ಕೇಳಿಸುತ್ತಿದೆ ಎಂದು ದೂರು ನೀಡಿದ್ದಾರೆ‌. ಇತ್ತ ರಾಹುಲ್ ಗಾಂಧಿ ರಾಜ್ಯಕ್ಕೆ ಬಂದು ಮತಗಳ್ಳತನವಾಗಿದೆ ಅಂತ ಹೋರಾಟ ಮಾಡಿದ್ರೆ, ಬಿಜೆಪಿ ಕಾಂಗ್ರೆಸ್ ನಾಯಕರ ವಿರುದ್ಧ ದೂರು ನೀಡಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment