ಶಾಸಕ ಟಿ ರಘುಮೂರ್ತಿ ಕಾರು ಅಪಘಾತ..!

1 Min Read

 

ಚಿತ್ರದುರ್ಗ,(ಮೇ.24) : ಚಳ್ಳಕೆರೆ ಶಾಸಕ ಟಿ. ರಘುಮೂರ್ತಿ ಪ್ರಯಾಣಿಸುತ್ತಿದ್ದ ಕಾರಿಗೆ ಮತ್ತೊಂದು ಕಾರು ಡಿಕ್ಕಿಯಾಗಿದೆ.

ಈ ಘಟನೆ ಇಂದು(ಮಂಗಳವಾರ)ರಾತ್ರಿ 9 ಗಂಟೆ ಸುಮಾರಿಗೆ ಹಿರಿಯೂರು ತಾಲ್ಲೂಕಿನ ಬಬ್ಬೂರು ಗ್ರಾಮದ ಬಳಿ ನಡೆದಿದ್ದು, ಅದೃಷ್ಟವಶಾತ್ ಯಾವುದೇ ಅಪಾಯ ಸಂಭವಿಸಿಲ್ಲ.

ಶಾಸಕರು ಚಳ್ಳಕೆರೆಯಿಂದ ಮಸ್ಕಲ್ ಟಿ.ಬಿ. ಗೊಲ್ಲರಹಟ್ಟಿಗೆ ಹೋಗುತ್ತಿದ್ದ ವೇಳೆ ಅವರ ಇನ್ನೋವಾ ಕಾರಿಗೆ, ಮಸ್ಕಲ್ ಕಡೆಯಿಂದ ವೇಗವಾಗಿ ಬಂದ ಜೈಲೋ ಕಾರು ಡಿಕ್ಕಿ ಹೊಡೆದಿದೆ. ಈ ವೇಳೆ ಶಾಸಕರ ಕಾರಿನ ಮುಂಭಾಗ ನುಜ್ಜುಗುಜ್ಜಾಗಿದ್ದು, ಶಾಸಕ ಟಿ. ರಘುಮೂರ್ತಿ ಹಾಗೂ ಕಾರು ಚಾಲಕನಿಗೆ  ಯಾವುದೇ ತೊಂದರೆ ಆಗಿಲ್ಲ.

ಜೈಲೋ ಕಾರಿನಲ್ಲಿದ್ದ ಒಂದಿಬ್ಬರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಶಾಸಕ ಟಿ ರಘುಮೂರ್ತಿ ಅವರು ಮಸ್ಕಲ್ ಟಿ.ಬಿ. ಗೊಲ್ಲರಹಟ್ಟಿಯಲ್ಲಿ ಮದುವೆಯಾಗಿದ್ದು ಆಗಾಗ ಸಂಬಂಧಿಕರ ಮನೆಗೆ ಭೇಟಿ ನೀಡುತ್ತಿರುತ್ತಾರೆ.

ವಿಷಯ ತಿಳಿದ ತಕ್ಷಣ ಪೋಲಿಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹಿರಿಯೂರು ಗ್ರಾಮಾಂತರ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Share This Article
Leave a Comment

Leave a Reply

Your email address will not be published. Required fields are marked *