ಸುದ್ದಿಒನ್, ಚಿತ್ರದುರ್ಗ, ಮೇ. 29 : ಕೋಟೆನಾಡು ಚಿತ್ರದುರ್ಗದ ಜಿಲ್ಲಾ ಕೇಂದ್ರ ಸಹಕಾರಿ (CDCC) ಬ್ಯಾಂಕ್ನ ನೂತನ ಸಾರಥಿ ಯಾರಾಗಲಿದ್ದಾರೆ ಎಂಬ ತೀವ್ರ ಕುತೂಹಲಕ್ಕೆ ಕೊನೆಗೂ ತೆರೆ ಬಿದ್ದಿದೆ. ಚಳ್ಳಕೆರೆ ಕ್ಷೇತ್ರದ ಜನಪ್ರಿಯ ಶಾಸಕರಾದ ಟಿ. ರಘುಮೂರ್ತಿ ಅವರು ಬ್ಯಾಂಕಿನ ನೂತನ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ರಘುಮೂರ್ತಿ ಕೈಹಿಡಿದ ಸುಧಾಕರ್ ಬಣ :
ಚಿತ್ರದುರ್ಗ ಡಿಸಿಸಿ ಬ್ಯಾಂಕ್ನಲ್ಲಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಪ್ರತಿನಿಧಿಗಳು ಸೇರಿದಂತೆ ಒಟ್ಟು 14 ನಿರ್ದೇಶಕರ ಬಲವಿದೆ. ಈ ಪೈಕಿ ಗರಿಷ್ಠ ಸಂಖ್ಯೆಯ ನಿರ್ದೇಶಕರು ಈಗಾಗಲೇ ರಘುಮೂರ್ತಿ ಅವರಿಗೆ ಜೈ ಎಂದಿದ್ದಾರೆ.
ಮುಖ್ಯವಾಗಿ, ದಿವಂಗತ ನಾಯಕ ಡಿ. ಸುಧಾಕರ್ ಅವರ ನಿಷ್ಠಾವಂತ ನಿರ್ದೇಶಕರ ದಂಡು ಈಗ ಸಂಪೂರ್ಣವಾಗಿ ರಘುಮೂರ್ತಿ ಅವರ ಕೈ ಹಿಡಿದಿದೆ. ಸುಧಾಕರ್ ಅವರೊಂದಿಗೆ ಉತ್ತಮ ಒಡನಾಟ ಹೊಂದಿದ್ದ ರಘುಮೂರ್ತಿ ಅವರ ಕಾರ್ಯವೈಖರಿಗೆ ಇಡೀ ಬಣ ಮನಸೋತಿದೆ. ಈ ಹಿಂದೆ ಡಿ. ಸುಧಾಕರ್ ಅವರು ಸಹ ಚಳ್ಳಕೆರೆ ತಾಲೂಕಿನಿಂದಲೇ ಸ್ಪರ್ಧಿಸಿ ಡಿಸಿಸಿ ಬ್ಯಾಂಕ್ ನಿರ್ದೇಶಕರಾಗಿ, ಸುದೀರ್ಘ ಕಾಲ ಅಧ್ಯಕ್ಷ ಹುದ್ದೆ ಅಲಂಕರಿಸಿದ್ದರು. ಈಗ ಅದೇ ಹಾದಿಯಲ್ಲಿ ರಘುಮೂರ್ತಿ ಅವರು ಹೆಜ್ಜೆ ಇಟ್ಟಿರುವುದು ವಿಶೇಷ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.
















