ಹೆಂಡ್ತಿ ಮಕ್ಕಳನ್ನು ಬಿಟ್ಟು ಸೇವೆ ಮಾಡಿ ಅಂದ್ರೆ ಹೇಗೆ : ಶಾಸಕ ವೀರೇಂದ್ರ ಪಪ್ಪಿ ಬೇಸರ

1 Min Read

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್.05 :  ಕವಾಡಿಗರಹಟ್ಟಿಯಲ್ಲಿ ಶಾಸಕ ಕೆ.ಸಿ. ವೀರೇಂದ್ರ ಪಪ್ಪಿಯವರರು ನಿನ್ನೆ (ಬುಧವಾರ) ಮಾತನಾಡಿದ ವಿಡಿಯೋ ಈಗ ಎಲ್ಲೆಡೆ ವೈರಲ್ ಆಗಿದೆ.

ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡುವಾಗ ಅವರ ಪತ್ನಿಯ ವಿಚಾರ ಮಾತನಾಡಿ ನನ್ನ ಹೆಂಡತಿಗೆ ಅನಾರೋಗ್ಯ ಕಾರಣ ಆಸ್ಪತ್ರೆಯಲ್ಲಿರುವುದರಿಂದ ನಾನು ಹೋಗಬೇಕು ಎಂದಿದ್ದಾರೆ. ತಕ್ಷಣವೇ ಅಲ್ಲಿದ್ದ ಮಹಿಳೆಯೋರ್ವರು ನಾವು ನಾಲ್ಕು ತಿಂಗಳಿಂದ ನಾವು ಸಂಬಂಧಿಕರು ಸತ್ತರೂ ಹೋಗೋಕೆ ಆಗಿಲ್ಲ ಎಂದಿದ್ದಾರೆ. ಇದರಿಂದ ಬೇಸರಗೊಂಡ ಶಾಸಕ ಹೆಂಡತಿ ಮಕ್ಕಳನ್ನ ಬಿಟ್ಟು ಸೇವೆ ಮಾಡಿ ಅಂದ್ರೆ ಹೆಂಗೆ, ಅಂಥ ದೊಡ್ಡ ಗುಣಾನೂ ನಂದಲ್ಲ, ನಾನದನ್ನ ಮಾಡಲ್ಲ. ನನಗದು ಬೇಕಾಗಿಲ್ಲ. ನಾನು ರಾಜಕೀಯದಲ್ಲಿ ಹಂಗಾಗಬೇಕು, ಹಿಂಗಾಗಬೇಕು ಅಂತ ಬಂದಿಲ್ಲ. ಬಂದಿದೀನಿ ಸೇವೆ ಮಾಡ್ತೀದೀನಿ ಅಷ್ಟೇ. ನಿಮಗೆ ಇಷ್ಟ ಇದ್ರೆ ಮುಂದಿನ ಬಾರಿ ಗೆಲ್ಸಿ. ಇಲ್ಲ ಅಂದ್ರೆ ಬಿಡಿ ಎಂದು ಬೇಸರದಿಂದಲೇ ಮಾತನಾಡಿದ್ದಾರೆ.

ನನಗೆ ಮತ ಹಾಕಿ ಗೆಲ್ಲಿಸಿ ಅಂತಾನೂ ಕೇಳೋದಿಲ್ಲ. ನನಗೆ ನಿಮ್ಮಿಂದ ಆಗಬೇಕಾಗಿದ್ದು ಏನೂ ಇಲ್ಲ. ನನ್ನ ಫ್ಯಾಮಿಲಿ ಬಗ್ಗೆ ನೀವು ಮಾತನಾಡಬೇಕಾದರೆ ಬಹಳ ಯೋಚನೆ ಮಾಡಿ ಮಾತಾಡ್ಬೇಕು. ನಿಮ್ಮಿಂದ ನನಗೆ ನೋವಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು. ನನ್ನಿಂದ ನಿಮಗೆ ತೊಂದರೆಯಾಗಿಲ್ಲ. ನನ್ನಿಂದ ನಿಮಗೆ ತೊಂದರೆಯಾಗದಾದ್ರೇ ನಿಮ್ಮ ಮಾತನ್ನು ಒಪ್ಪಿಕೊಳ್ಳುತ್ತಿದ್ದೆ ಎಂದು ಶಾಸಕ ಕೆಸಿ ವೀರೇಂದ್ರ ಪಪ್ಪಿ ತೀವ್ರವಾಗಿ ಬೇಸರ ವ್ಯಕ್ತಪಡಿಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *