Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ರೇಣುಕಾ ಸ್ವಾಮಿ ಮನೆಗೆ ಶಾಸಕ ವೀರೇಂದ್ರ ಭೇಟಿ : ಸರ್ಕಾರದಿಂದ ಸೂಕ್ತ ಪರಿಹಾರದ ಭರವಸೆ

---Advertisement---

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಸುದ್ದಿಒನ್, ಚಿತ್ರದುರ್ಗ ಜೂ.15 : ತಪ್ಪು ಯಾರೇ ಮಾಡಿದರು ರಕ್ಷಿಸುವ ಮಾತೇ ಇಲ್ಲ. ಈ ನೆಲದ ಕಾನೂನು ಎಲ್ಲರಿಗೂ ಸಮಾನವಾಗಿದೆ. ತನಿಖೆ ಉತ್ತಮವಾಗಿ ನಡೆಯುತ್ತಿದೆ. ಇದರ ಬಗ್ಗೆ ಯಾವುದೇ ಅನುಮಾನ ಬೇಡ’ ಎಂದು ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ತಿಳಿಸಿದರು.

ನಟ ದರ್ಶನ್ ಮತ್ತು ಆತನ ಗ್ಯಾಂಗ್‍ನಿಂದ ಹತ್ಯೆಯಾದ ರೇಣುಕಾಸ್ವಾಮಿ ವಿಆರ್‍ಎಸ್ ಬಡಾವಣೆಯ ನಿವಾಸಕ್ಕೆ ಶನಿವಾರ ಭೇಟಿ ಮಾಡಿದ ಶಾಸಕ ವಿರೇಂದ್ರ ಪಪ್ಪಿ ತಂದೆ, ತಾಯಿ, ಪತ್ನಿಗೆ ಸಾಂತ್ವನ ಹೇಳಿದ ನಮತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರೇಣುಕಾ ಸ್ವಾಮಿಯ ಕೊಲೆಯ ಸಂಗತಿ ತಿಳಿದು ಮನಸ್ಸಿಗೆ ತುಂಬಾ ನೋವಾಯಿತು. ಕುಟುಂಬದವರಿಗೆ ಸಾಂತ್ವನ ಹೇಳಿ ವೈಯಕ್ತಿಕ ಸಹಾಯ ಮಾಡಿದ್ದೇನೆ. ಶಿವಗಣಾರಾಧನೆ ಕಾರ್ಯ ಮುಗಿದ ಕೂಡಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕುಟುಂಬಕ್ಕೆ ಭೇಟಿ ಮಾಡಿಸುವ ಕಾರ್ಯ ಮಾಡುತ್ತೇನೆ’ ಎಂದರು.

`ಸರ್ಕಾರದಿಂದ ಸೂಕ್ತ ಪರಿಹಾರ ಹಾಗೂ ರೇಣುಕಾಸ್ವಾಮಿ ಪತ್ನಿಗೆ ಸರ್ಕಾರಿ ಉದ್ಯೋಗ ಕಲ್ಪಿಸುವ ಕುರಿತು, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಜತೆ ಚರ್ಚೆ ನಡೆಸಲಾಗುವುದು. ಇಡೀ ಕುಟುಂಬದ ಜತೆ ನಾವಿದ್ದೇವೆ’ ಎಂದು ತಿಳಿಸಿದರು.

`ಒಬ್ಬ ಮನುಷ್ಯ ಇನ್ನೊಬ್ಬ ಮನುಷ್ಯನ ಜೀವ ತೆಗೆಯುವ ಮಟ್ಟಕ್ಕೆ ಹೋಗಬಾರದು. ಇಂತಹ ಪ್ರಯತ್ನ ಯಾರು ಮಾಡಬಾರದು. ಜನನಾಯಕರು, ಅಭಿಮಾನಿ ವರ್ಗ ಹೊಂದಿರುವವರು ಆದರ್ಶರಾಗಿರಬೇಕು. ಇಂತಹ ಹೀನ ಕೆಲಸ ಮಾಡಿದಾಗ ಬೇಲಿಯೇ ಎದ್ದು ಹೊಲ ಮೇದಂತೆ ಆಗುತ್ತದೆ’ ಎಂದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

ಮಿಸ್ ಮಾಡ್ದೆ ಓದಿ

ಚಿತ್ರದುರ್ಗ ಜಿಲ್ಲೆಯಾದ್ಯಂತ ಡಿ.ಜೆ, ಹೈ-ಡೆಸಿಬಲ್ ಧ್ವನಿವರ್ಧಕಗಳ ಬಳಕೆಗೆ ಸಂಪೂರ್ಣ ನಿಷೇಧ: ಜಿಲ್ಲಾಧಿಕಾರಿ ಕಟ್ಟುನಿಟ್ಟಿನ ಆದೇಶ

ಚಿತ್ರದುರ್ಗ ಮುಖ್ಯ ರಸ್ತೆ ಅಗಲೀಕರಣ : ಭೂಸ್ವಾಧೀನ, ಕಟ್ಟಡ ಪರಿಹಾರದ ನಿಖರ ಮಾಹಿತಿ ಸಂಗ್ರಹಿಸಲು ಸಚಿವ ಟಿ. ರಘುಮೂರ್ತಿ ಸೂಚನೆ

ಗೌರಿ-ಗಣೇಶ ಹಬ್ಬದ ಮೆರವಣಿಗೆಯಲ್ಲಿ ಕಲರ್ ಪೇಪರ್ ಬ್ಲಾಸ್ಟಿಂಗ್, ಪಟಾಕಿ/ಸಿಡಿಮದ್ದು ಬಳಕೆ ನಿಷೇಧ: ಚಿತ್ರದುರ್ಗ ಜಿಲ್ಲಾಧಿಕಾರಿ ಆದೇಶ

ಗೋನೂರು ಕೆರೆಯಲ್ಲಿ ಭದ್ರೆಗೆ ಸಿಎಂ ಗಂಗಾಪೂಜೆ, ಬಾಗಿನ: ಅಗತ್ಯ ಸಿದ್ಧತೆಗೆ ಸಚಿವ ಟಿ. ರಘುಮೂರ್ತಿ ಸೂಚನೆ

ಕೆಲಸ ಮಾಡಲು ಇಷ್ಟವಿರದಿದ್ದರೆ ಬಿಟ್ಟುಬಿಡಿ : ಚಿತ್ರದುರ್ಗ ಜಿಲ್ಲಾಸ್ಪತ್ರೆ ಅಧಿಕಾರಿಗಳಿಗೆ ಸಚಿವ ರಘುಮೂರ್ತಿ ಎಚ್ಚರಿಕೆ

ವಿದ್ಯಾ ನಗರದಲ್ಲಿ 18 ನೇ ವರ್ಷದ ಗಣೇಶೋತ್ಸವ : ‘ವಿ ಬಾಯ್ಸ್’ ವತಿಯಿಂದ ರಕ್ತದಾನ ಶಿಬಿರ: ಸಾರ್ಥಕತೆ ಮೆರೆದ ಯುವಪಡೆ.!

Leave a Comment