Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಶಾಸಕ ವಿನಯ್ ಕುಲಕರ್ಣಿಗೆ ಸಂಕಷ್ಟ : ಸುಪ್ರೀಂ ಕೋರ್ಟ್ ಹೇಳಿದ್ದೇನು..?

---Advertisement---

ನವದೆಹಲಿ: ಧಾರವಾಡದ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್ ನಲ್ಲಿ ದೊಡ್ಡಮಟ್ಟದ ಶಾಕ್ ಎದುರಾಗಿದೆ. ಗ್ರಾಮ ಪಂಚಾಯತಿ ಸದಸ್ಯ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ವಿನಯ್ ಕುಲಕರ್ಣಿಗೆ ಸಂಕಷ್ಟ ಎದುರಾಗಿದೆ. ಸಿಬಿಐ ಅರ್ಜಿಯನ್ನ ಸುಪ್ರೀಂ ಕೋರ್ಟ್ ಪುರದ್ಕರಿಸಿದ್ದು, ಸಾಕ್ಷಿ ನಾಶ ಕೇಸನ್ನ ಕೋರ್ಟ್ ಎತ್ತಿ ಹಿಡಿದಿದೆ. ಈ ಹಿಂದೆ ಸಾಕ್ಷಿ ನಾಶ ಪ್ರಕರಣವನ್ನು ಹೈಕೋರ್ಟ್ ತಿರಸ್ಕರಿಸಿತ್ತು. ಆದರೆ ಇದನ್ನ ಸುಪ್ರೀಂ ಕೋರ್ಟ್ ಪುರಸ್ಕರಿಸಿದೆ.

ಈ ಹಿಂದೆ ಸಿಬಿಐನಿಂದ ಬಂಧಿತರಾಗಿ ಸೆರೆವಾಸ ಅನುಭವಿಸಿದ್ದ ವಿನಯ್ ಕುಲಕರ್ಣಿ, ಜಾಮೀನಿನ ಮೇಲೆ ಹೊರ ಬಂದಿದ್ದರು. ಆದರೆ ಧಾರವಾಡಕ್ಕೆ ಅವರಿಗೆ ಎಂಟ್ರಿ ಇರಲಿಲ್ಲ. ಆದರೂ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧೆ ಮಾಡಿದ್ದರು. ಬಳಿಕ ಶಾಸಕರಾಗಿಯೂ ಆಯ್ಕೆಯಾಗಿದ್ದರು. ಆದರೆ ಸಾಕ್ಷಿಗಳ ಮೇಲೆ ಪ್ರಭಾವ ಬೀರುತ್ತಿದ್ದಾರೆ ಎಂಬ ಆರೋಪದ ಮೇಲೆ ನ್ಯಾಯಾಲಯ ಇವರ ಜಾಮೀನು ರದ್ದು ಮಾಡಿದ್ದರಿಂದ ಮರಳಿ ಅವರು ಪರಪ್ಪನ ಅಗ್ರಹಾರ ಸೇರಬೇಕಾಗಿ ಬಂತು. ಸಿಬಿಐ ಮತ್ತೆ ಬಂಧಿಸಿ ಪರಪ್ಪನ ಅಗ್ರಹಾರಕ್ಕೆ ಕಳುಹಿಸಿದ್ದಾರೆ. ಇದೀಗ ಸಿಬಿಐ ಸಲ್ಲಿಸಿದ್ದ ಅರ್ಜಿಯಲ್ಲಿನ ವಿಚಾರವನ್ನ ಕೋರ್ಟ್ ಎತ್ತಿ ಹಿಡಿದಿದೆ.

ಜೈಲು ಸೇರಿದ ಬಳಿಕ ವಿನಯ್ ಕುಲಕರ್ಣಿ ಮಗನ ಆರೋಗ್ಯ ಪರಿಸ್ಥಿತಿ ಸರಿ ಇರಲಿಲ್ಲ. ಸರ್ಜರಿ ಮಾಡಬೇಕು ಎಂದು ವೈದ್ಯರು ಸೂಚನೆ ನೀಡಿದ್ದರು. ಹೀಗಾಗಿ 20 ದಿನಗಳ ಕಾಲ ವಿನಯ್ ಕುಲಕರ್ಣಿ ಅವರಿಗೆ ಜಾಮೀನು ನೀಡಿದ್ದರು. ಬಳಿಕ ಆಸ್ಪತ್ರೆ ಕೆಲಸವನ್ನೆಲ್ಲ ಮುಗಿಸಿಕೊಂಡು ಮತ್ತೆ ಜೈಲುಗೆ ವಾಪಾಸ್ ಬಂದಿದ್ದಾರೆ. ಈಗ ಸಾಕ್ಷಿ ನಾಶ ಮಾಡಿದ್ದರ ಅರ್ಜಿಯನ್ನ ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now