ಸುದ್ದಿಒನ್ ಚಿತ್ರದುರ್ಗ: ಅಕ್ರಮ ಬೆಟ್ಟಿಂಗ್ ಕೇಸ್ ನಲ್ಲಿ ಜೈಲು ಪಾಲಾಗಿದ್ದ ಶಾಸಕ ವೀರೇಂದ್ರ ಪಪ್ಪಿ ಅವರಿಗೆ ಜಾಮೀನು ಲಭ್ಯವಾಗಿದೆ. ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದೆ. ಕಳೆದ ನಾಲ್ಕು ತಿಂಗಳಿನಿಂದ ಜೈಲಿನಲ್ಲಿ ಇದ್ದಂತ ವೀರೇಂದ್ರ ಪಪ್ಪಿ ಅವರಿಗೆ ಕೊಂಚ ರಿಲೀಫ್ ಸಿಕ್ಕಿದೆ.
ಇಡಿ ಅಧಿಕಾರಿಗಳ ದಾಳಿ ಬಳಿಕ ವೀರೇಂದ್ರ ಪಪ್ಪಿ ಅವರನ್ನು ಪೊಲೀಸರು ಬಂಧಿಸಿದ್ದರು. ಜಾಮೀನು ಕೋರಿ ವೀರೇಂದ್ರ ಪಪ್ಪಿ ಅವರು ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಕೆ ಮಾಡಿದ್ದರು. ಅರ್ಜಿ ವಿಚಾರಣೆ ನಡೆಸಿದ ಕೋರ್ಟ್ ಜಾಮೀನು ನೀಡಿ, ಆದೇಶ ಹೊರಡಿಸಿದೆ.

ಶಾಸಕ ವೀರೇಂದ್ರ ಪಪ್ಪಿ ಅವರನ್ನು ಇಡಿ ಅಧಿಕಾರಿಗಳು ಅಕ್ರಮ ಆನ್ಲೈನ್ ಬೆಟ್ಟಿಂಗ್ ಪ್ರಕರಣದಲ್ಲಿ ಬಂಧಿಸಿದ್ದರು. ದಾಳಿ ನಡೆಸಿದ ಬಳಿಕ ಪಪ್ಪಿ ಬ್ಯಾಂಕ್ ಖಾತೆಯಿಂದ 55 ಕೋಟಿ ನಗದನ್ನು ಜಪ್ತಿ ಮಾಡಲಾಗಿತ್ತು. ಆ ಸಂಬಂಧ ಇಡಿ ಅಧಿಕಾರಿಗಳು ಅಧಿಜೃತವಾಗಿ ಪ್ರಕಟಣೆ ಹೊರಡಿಸಿತ್ತು. ಕೆ.ಸಿ ವೀರೇಂದ್ರ ಅವರ 9 ಬ್ಯಾಂಕ್ ಖಾತೆಗಳಲ್ಲಿ ಅಂದಾಜು 40.69 ಕೋಟಿ ನಗದು ರೂ. ಪತ್ತೆಯಾಗಿದ್ದು, 262 ಮ್ಯೂಲ್ ಖಾತೆಗಳಲ್ಲಿ ಒಟ್ಟು 14.46 ಕೋಟಿ ರೂ. (ಅಂದಾಜು) ಸೇರಿದಂತೆ 55 ಕೋಟಿ ರೂ. ಹಣದ ಜೊತೆಗೆ 5 ಐಷಾರಾಮಿ ಕಾರುಗಳನ್ನೂ ಸೀಜ್ ಮಾಡಲಾಗಿದೆ. ಇಡಿ ಅಧಿಕಾರಿಗಳು ದಾಳಿ ನಡೆಸಿದ ಬಳಿಕ, ಏನೆಲ್ಲಾ ವಶಪಡಿಸಿಕೊಂಡರು ಎಂದು ಬಹಿರಂಗಪಡಿಸಿದಾಗಲೇ ಗೊತ್ತಾಗಿದ್ದು ಶಾಸಕ ವೀರೇಂದ್ರ ಪಪ್ಪಿ ಎಷ್ಟು ಕುಬೇರರು ಎಂಬುದು. ಕೋಟಿ ಕೋಟಿ ಹಣ, ಕೆಜಿಗಟ್ಟಲೆ ಚಿನ್ನ, ಕೆಜಿ ಗಟ್ಟಲೆ ಬೆಳ್ಳಿ, ವಜ್ರ ವೈಡೂರ್ಯವೆಲ್ಲ ಸಿಕ್ಕಿತ್ತು. ಇದೀಗ ಆ ಕೇಸಲ್ಲಿ ಜಾಮೀನು ಸಿಕ್ಕಿದೆ.


















