ಬೆಂಗಳೂರು: ರಾಜಕೀಯದಲ್ಲಿ ಸ್ಥಾನಗಳಿಗಾಗಿ ಗುದ್ದಾಟ ನಡೆಯೋದು ಕಾಮನ್ ಆಗಿದೆ. ಇದೀಗ ಹಲವು ನಿಗಮ ಮಂಡಳಿಯ ಅಧ್ಯಕ್ಷರು, ಸದಸ್ಯ ಸ್ಥಾನಕ್ಕೆ ಡಿಮ್ಯಾಂಡ್ ಹೆಚ್ಚಾಗಿದೆ. ರಾಯಚೂರು ಗ್ರಾಮಾಂತರ ಶಾಸಕ ಬಸನಗೌಡ ದದ್ದಲ್ ರಾಯಚೂರು ಎಪಿಎಂಸಿ ಅಧ್ಯಕ್ಷ- ಉಪಾಧ್ಯಕ್ಷ ಸ್ಥಾನವನ್ನು ತಮ್ಮ ಬೆಂಬಲಿಗರಿಗೆ, ಪಕ್ಷಕ್ಕಾಗಿ ದುಡಿದವರಿಗೆ ಕೊಡಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಆದ್ರೆ ಈಗ ಜಿಲ್ಲೆಯಲ್ಲಿ ಬಣ ರಾಜಕೀಯದ ಸಂಘರ್ಷ ಶುರುವಾಗಿದೆ. ಜಿಲ್ಲೆಯ ನಾನಾ ನಿಗಮಗಳಿಗೆ ತಮ್ಮ ಹೆಸರು ಸೂಚಿಸುವಂತೆ ಕಾಂಗ್ರೆಸ್ ಆಕಾಂಕ್ಷಿಗಳು ಬೆಂಗಳೂರಿಗೆ ಆಗಮಿಸಿದ್ದು ಪ್ರಭಾವಿ ನಾಯಕರ ಮನೆಗೆ ಭೇಟಿ ನೀಡುತ್ತಿದ್ದಾರೆ.
ಜಿಲ್ಲೆಯಲ್ಲಿ ಹಲವು ಸಮುದಾಯದ ಮುಖಂಡರು ನಮ್ಮ ನಾಯಕರಿಗೆ ನಿಗಮ ಮಂಡಳಿ ಸ್ಥಾನ ನೀಡಿ ಎಂದು ಮಾಧ್ಯಮಗಳ ಮೂಲಕವೂ ಒತ್ತಾಯಿಸುತ್ತ ಲಾಭಿ ನಡೆಸಿರುವುದು ಗೋಚರಿಸಿದೆ. ಇನ್ನೂ ಕೆಲವರು ತಮ್ಮ ಕ್ಷೇತ್ರಗಳ ಶಾಸಕರಲ್ಲಿ ಪ್ರೀತಿ ವಿಶ್ವಾಸ ಸಂಪಾದಿಸಿ ನಿಗಮ ಮಂಡಳಿಯಲ್ಲಿ ಸ್ಥಾನ ಪಡೆಯುವ ಪ್ರಯತ್ನ ನಡೆಸಿದ್ದಾರೆ.ಕಳೆದ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಕಾರಣರಾದವರ ಸೇವೆ ಪರಿಗಣಿಸುವ ಸಾಧ್ಯತೆಯಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.










