Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಬಿಜೆಪಿಯಲ್ಲಿನ ಅತೃಪ್ತ ಶಾಸಕರು ಕಾಂಗ್ರೆಸ್ ಸೇರಲಿದ್ದಾರೆ : ಯಾವಾಗ, ಯಾರು ಎಂಬ ಮಾಹಿತಿ ತಿಳಿಸಿದ ಸವದಿ

Facebook
Twitter
Telegram
WhatsApp

ಬಾಗಲಕೋಟೆ: ಲೋಕಸಭಾ ಚುನಾವಣೆಗೆ ಸಿದ್ಧತೆ ನಡೆಸುತ್ತಿರುವಾಗಲೇ ಬಿಜೆಪಿಯಲ್ಲಿನ ಹಲವರು ಕಾಂಗ್ರೆಸ್ ಗೆ ಬರಲಿದ್ದಾರೆ ಎಂಬ ಮಾತನ್ನು ಶಾಸಕ ಲಕ್ಷ್ಮಣ ಸವದಿ ತಿಳಿಸಿದ್ದಾರೆ. ಬಿಜೆಪಿಯಲ್ಲಿನ ಅತೃಪ್ತ ಶಾಸಕರು ಕಾಂಗ್ರೆಸ್ ಗೆ ಸೇರಲಿದ್ದಾರೆ ಎಂದಿದ್ದಾರೆ.

ಬಿಜೆಪಿಯ ಹಲವು ಅತೃಪ್ತ ಶಾಸಕರು ನನ್ನ ಸಂಪರ್ಕದಲ್ಲಿದ್ದಾರೆ. ನಾವೂ ಜನವರಿ 26ರ ನಂತರ ಅದರ ಪ್ರಕ್ರಿಯೆ ಮುಂದುವರೆಸುತ್ತೇವೆ. ಎಷ್ಟು ಮಂದಿ ಕಾಂಗ್ರೆಸ್ ಸೇರುತ್ತಾರೆ ಎಂಬುದನ್ನು ನೀವೆ ನೋಡುತ್ತೀರಿ. ಬಿಜೆಪಿಯಿಂದ ಬಂದವರಿಗೆ ಅನ್ಯಾಯ ಆಗಬಾರದು. ಹೀಗಾಗಿ ಅವರ ಇಚ್ಛೆಯಂತೆ ಕಾಂಗ್ರೆಸ್ ಗೆ ಸೇರುವವರನ್ನು ಗೌರವಯುತವಾಗಿ ಸ್ವಾಗತಿಸಲಾಗುವುದು. ಲಿಂಗಾಯತರು ಮಾತ್ರವಲ್ಲ, ಕಾಂಗ್ರೆಸ್ ಎಲ್ಲರನ್ನು ಸ್ವಾಗತಿಸುತ್ತದೆ.

ಸಂಸತ್ ಚುನಾವಣೆಯಲ್ಲಿ 20 ಸ್ಥಾನಗಳನ್ನು ಗೆಲ್ಲಲು ಈಗಾಗಲೇ ಸಿದ್ಧತೆ ನಡೆಸಿದ್ದೇವೆ. ಇವತ್ತಿನ ಪರಿಸ್ಥಿತಿಯಲ್ಲಿ ಯಾರೇ ಅಧ್ಯಕ್ಷರಾದರೂ ಸಹಿಸಿಕೊಳ್ಳುವುದು ಕಷ್ಟವಿದೆ. ಈಗಾಗಲೇ ಬಿಜೆಪಿಯಲ್ಲಿ ಸಾಕಷ್ಟು ಅಸಮಾಧಾನವಿದೆ. ಅದು ಸ್ಪೋಟ ಆಗುವುದು ಒಂದೇ ಬಾಕಿ. ಉತ್ತರ ಕರ್ನಾಟಕದಲ್ಲಿ ಲಿಂಗಾಯತರು ಹೆಚ್ಚು ಕೇಂದ್ರೀಕೃತವಾಗಿದ್ದರೆ, ವಿಜಯೇಂದ್ರ ಅವರು ದಕ್ಷಿಣ ಕರ್ನಾಟಕದ ಮೈಸೂರು, ಬೆಂಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಿಗೆ ಸೀಮಿತರಾಗಿದ್ದಾರೆ. ವಿಜಯೇಂದ್ರ ಅವರನ್ನು ರಾಜ್ಯಾಧ್ಯಕ್ಷರನ್ನಾಗಿ ಮಾಡುವ ಪಕ್ಷದ ನಿರ್ಧಾರಕ್ಕೆ ಬಿಜೆಪಿಯ ಹಲವು ನಾಯಕರಿಗೆ ಒಪ್ಪಿಗೆಯಿಲ್ಲ. ವಿಜಯೇಂದ್ರ ಅವರಂತಹ ಕಿರಿಯ ನಾಯಕರ ಅಡಿಯಲ್ಲಿ ಕೆಲಸ ಮಾಡುವುದು ಹೇಗೆ ಎಂದು ಹಿರಿಯ ನಾಯಕರು ಗೊಂದಲಕ್ಕೊಳಗಾಗಿದ್ದಾರೆ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಬೇಸಿಗೆಯಲ್ಲಿ ಕೂದಲಿಗೆ ಎಣ್ಣೆ ಹಚ್ಚಿದರೆ ಏನಾಗುತ್ತೆ ಗೊತ್ತಾ ?

ಸುದ್ದಿಒನ್ : ಹವಾಮಾನದ ಬದಲಾವಣೆಗೆ ಅನುಗುಣವಾಗಿ ಚರ್ಮ ಮತ್ತು ಕೂದಲಿಗೆ ಸರಿಯಾದ ಪೋಷಣೆ ನೀಡಬೇಕು. ಇಲ್ಲದಿದ್ದರೆ ಖಂಡಿತವಾಗಿಯೂ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಅಲ್ಲದೆ, ಅನೇಕ ಜನರು ತಮ್ಮ ಕೂದಲಿಗೆ ಎಣ್ಣೆಯನ್ನು ಹಾಕುವುದಿಲ್ಲ ಏಕೆಂದರೆ ಅದು ಬೇಸಿಗೆಯಲ್ಲಿ

ಈ ರಾಶಿಯವರು ತುಂಬಾ ಪ್ರೀತಿಸುವರು ಆದರೆ ಬೇರೆಯವರ ಜೊತೆ ಮದುವೆ ಒಳ್ಳೆಯದಲ್ಲ

ಈ ರಾಶಿಯವರು ತುಂಬಾ ಪ್ರೀತಿಸುವರು ಆದರೆ ಬೇರೆಯವರ ಜೊತೆ ಮದುವೆ ಒಳ್ಳೆಯದಲ್ಲ, ಗುರುವಾರ ರಾಶಿ ಭವಿಷ್ಯ -ಮೇ-2,2024 ಸೂರ್ಯೋದಯ: 05:53, ಸೂರ್ಯಾಸ್ತ : 06:32 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ ,

ಇಂದಿನಿಂದ ರಾಜ್ಯಾದ್ಯಂತ ಮಳೆ : ಬೆಂಗಳೂರಿಗೆ ಮಳೆ ದರ್ಶನ ಯಾವಾಗಿಂದ..?

ಬೆಂಗಳೂರು: ಬಿಸಿಲಿನ ತಾಪ ಅದ್ಯಾಕೆ ದಿನೇ ದಿನೇ ಏರಿಕೆಯಾಗುತ್ತಿದೆಯೋ ತಿಳಿದಿಲ್ಲ. ಜನರಂತು ಬಿಸಿಲಿನ ಬೇಗೆಗೆ ಹೈರಾಣಾಗಿ ಹೋಗಿದ್ದಾರೆ. ಕಳೆದ ವರ್ಷವಂತು ಮಳೆಯಿಲ್ಲ ಈ ವರ್ಷ ಮೊದಲ ಮಳೆಯೂ ಸರಿಯಾಗಿ ಆಗಿಲ್ಲ. ಮೇ ತಿಂಗಳಿಗೆ ಬಂದರೂ

error: Content is protected !!