Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಬಿಜೆಪಿಯಲ್ಲಿನ ಅತೃಪ್ತ ಶಾಸಕರು ಕಾಂಗ್ರೆಸ್ ಸೇರಲಿದ್ದಾರೆ : ಯಾವಾಗ, ಯಾರು ಎಂಬ ಮಾಹಿತಿ ತಿಳಿಸಿದ ಸವದಿ

---Advertisement---

ಬಾಗಲಕೋಟೆ: ಲೋಕಸಭಾ ಚುನಾವಣೆಗೆ ಸಿದ್ಧತೆ ನಡೆಸುತ್ತಿರುವಾಗಲೇ ಬಿಜೆಪಿಯಲ್ಲಿನ ಹಲವರು ಕಾಂಗ್ರೆಸ್ ಗೆ ಬರಲಿದ್ದಾರೆ ಎಂಬ ಮಾತನ್ನು ಶಾಸಕ ಲಕ್ಷ್ಮಣ ಸವದಿ ತಿಳಿಸಿದ್ದಾರೆ. ಬಿಜೆಪಿಯಲ್ಲಿನ ಅತೃಪ್ತ ಶಾಸಕರು ಕಾಂಗ್ರೆಸ್ ಗೆ ಸೇರಲಿದ್ದಾರೆ ಎಂದಿದ್ದಾರೆ.

ಬಿಜೆಪಿಯ ಹಲವು ಅತೃಪ್ತ ಶಾಸಕರು ನನ್ನ ಸಂಪರ್ಕದಲ್ಲಿದ್ದಾರೆ. ನಾವೂ ಜನವರಿ 26ರ ನಂತರ ಅದರ ಪ್ರಕ್ರಿಯೆ ಮುಂದುವರೆಸುತ್ತೇವೆ. ಎಷ್ಟು ಮಂದಿ ಕಾಂಗ್ರೆಸ್ ಸೇರುತ್ತಾರೆ ಎಂಬುದನ್ನು ನೀವೆ ನೋಡುತ್ತೀರಿ. ಬಿಜೆಪಿಯಿಂದ ಬಂದವರಿಗೆ ಅನ್ಯಾಯ ಆಗಬಾರದು. ಹೀಗಾಗಿ ಅವರ ಇಚ್ಛೆಯಂತೆ ಕಾಂಗ್ರೆಸ್ ಗೆ ಸೇರುವವರನ್ನು ಗೌರವಯುತವಾಗಿ ಸ್ವಾಗತಿಸಲಾಗುವುದು. ಲಿಂಗಾಯತರು ಮಾತ್ರವಲ್ಲ, ಕಾಂಗ್ರೆಸ್ ಎಲ್ಲರನ್ನು ಸ್ವಾಗತಿಸುತ್ತದೆ.

ಸಂಸತ್ ಚುನಾವಣೆಯಲ್ಲಿ 20 ಸ್ಥಾನಗಳನ್ನು ಗೆಲ್ಲಲು ಈಗಾಗಲೇ ಸಿದ್ಧತೆ ನಡೆಸಿದ್ದೇವೆ. ಇವತ್ತಿನ ಪರಿಸ್ಥಿತಿಯಲ್ಲಿ ಯಾರೇ ಅಧ್ಯಕ್ಷರಾದರೂ ಸಹಿಸಿಕೊಳ್ಳುವುದು ಕಷ್ಟವಿದೆ. ಈಗಾಗಲೇ ಬಿಜೆಪಿಯಲ್ಲಿ ಸಾಕಷ್ಟು ಅಸಮಾಧಾನವಿದೆ. ಅದು ಸ್ಪೋಟ ಆಗುವುದು ಒಂದೇ ಬಾಕಿ. ಉತ್ತರ ಕರ್ನಾಟಕದಲ್ಲಿ ಲಿಂಗಾಯತರು ಹೆಚ್ಚು ಕೇಂದ್ರೀಕೃತವಾಗಿದ್ದರೆ, ವಿಜಯೇಂದ್ರ ಅವರು ದಕ್ಷಿಣ ಕರ್ನಾಟಕದ ಮೈಸೂರು, ಬೆಂಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಿಗೆ ಸೀಮಿತರಾಗಿದ್ದಾರೆ. ವಿಜಯೇಂದ್ರ ಅವರನ್ನು ರಾಜ್ಯಾಧ್ಯಕ್ಷರನ್ನಾಗಿ ಮಾಡುವ ಪಕ್ಷದ ನಿರ್ಧಾರಕ್ಕೆ ಬಿಜೆಪಿಯ ಹಲವು ನಾಯಕರಿಗೆ ಒಪ್ಪಿಗೆಯಿಲ್ಲ. ವಿಜಯೇಂದ್ರ ಅವರಂತಹ ಕಿರಿಯ ನಾಯಕರ ಅಡಿಯಲ್ಲಿ ಕೆಲಸ ಮಾಡುವುದು ಹೇಗೆ ಎಂದು ಹಿರಿಯ ನಾಯಕರು ಗೊಂದಲಕ್ಕೊಳಗಾಗಿದ್ದಾರೆ ಎಂದಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...