Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಶಾಸಕರ ಸಂಬಳ ಶೇ.50ರಷ್ಟು ಹೆಚ್ಚಳವಾಗುವ ಸಾಧ್ಯತೆ..!

---Advertisement---

ಶಾಸಕರಿಗೆ ಸರ್ಕಾರದಿಂದ ಈ ಬಜೆಟ್ ವೇಳೆ ಸಿಹಿ‌ ಸುದ್ದಿ ಸಿಗುವ ಸಾಧ್ಯತೆ ಇದೆ. ಶಾಸಕರ ಸಂಬಳ ಏರಿಕೆ ಈ ಬಾರಿ ಅರ್ಧಕ್ಕೆ ಅರ್ಧದಷ್ಟು ಹೆಚ್ಚಾಗಲಿರುವ ಸೂಚನೆ ಸಿಕ್ಕಿದೆ. ಅಂದ್ರೆ ಶೇಕಡ 50 ರಷ್ಟು ಸಂಬಳ ಜಾಸ್ತಿಯಾಗಲಿದೆ ಎನ್ನಲಾಗಿದೆ. ಇಂದಿನಿಂದ ಕಲಾಪ ಆರಂಭಗೊಂಡಿದೆ. ಈ ಕಲಾಪದ ವೇಳೆ ಶಾಸಕರ ಸಂಬಳದ ಬಗ್ಗೆ ಚರ್ಚೆಯಾಗಿದೆ.

ವಿಧಾನಸಭೆಯ ಕಲಾಪ ಸಲಹಾ ಸಮಿತಿ ಸಭೆಯಲ್ಲಿ ಈ ಸಂಬಂಧ ಮಹತ್ವದ ಚರ್ಚೆ ನಡೆದಿದೆ. ಕಳೆದ ಬಾರಿ ನಡೆದ ಅಧಿವೇಶನದ ವೇಳೆ ಶಾಸಕರ ಸಂಬಳ ಹೆಚ್ಚಿಸಬೇಕೆಂಬ ವಿಚಾರಕ್ಕೆ ಶಾಸಕ ಅರವಿಂದ್ ಬೆಲ್ಲದ್ ಗಮನ ಸೆಳೆದಿದ್ದರು. ಶಾಸಕರ ವೇತನ ಹೆಚ್ಚಳಕ್ಕೆ ಆಯೋಗ ರಚಿಸುವಂತೆಯೂ ಆಗ್ರಹಿಸಿದ್ದರು. ಇದೀಗ ಶಾಸಕರ ಸಂಬಳ ಏರಿಕೆಯಾಗುವ ಮುನ್ಸೂಚನೆ ಸಿಕ್ಕಿದೆ. ಇಂದು ನಡೆದ ಸಲಹಾ ಸಮಿತಿ ಸಭೆಯಲ್ಲಿ ಶಾಸಕರ ಸಂಬಳ ಶೇಕಡ 50 ರಷ್ಡು ಏರಿಕೆಯಾಗುವ ಬಗ್ಗೆ ಮಹತ್ವದ ಸಭೆ ನಡೆಸಿ, ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.

ಇನ್ನು ಶಾಸಕರ ಸಂಬಳ ಏರಿಕೆ ಎಂಬ ವಿಚಾರ ಬಂದಾಗಲೇ ಜನಸಾಮಾನ್ಯರು ಆಕ್ರೋಶ ಹೊರ ಹಾಕಿದ್ದಾರೆ. ಮಹಿಳೆಯರಿಗೆ ಬಸ್ ಪ್ರಯಾಣ ಉಚಿತವೇ ಆದರೂ, ಪುರುಷರಿಗೆ ಟಿಕೆಟ್ ದರದ ಬಿಸಿ ಜಾಸ್ತಿಯಾದಂತಾಗಿದೆ. ಮೆಟ್ರೋ ದರವಂತು ಸಾಕು ಸಾಕಾಗಿ ಹೋಗಿದೆ. ಹಾಲಿನ ದರವನ್ನು ಏರಿಸುತ್ತಲೇ ಇದ್ದಾರೆ. ಹೀಗೆ ಪ್ರತಿದಿನ ಬಳಕೆ ಮಾಡಲೇಬೇಕಾದ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿದ್ದು, ಜನ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಹೀಗಿರುವಾಗ ಶಾಸಕರ ಸಂಬಳ ಏರಿಕೆ ಮಾಡುತ್ತಿದ್ದಾರೆ ಎಂಬ ನಿರ್ಧಾರ ಆಕ್ರೋಶಕ್ಕೆ ಕಾರಣವಾಗಿದೆ. ಸಾಮಾನ್ಯ ಜನರು ನೊಂದು ಬೆಂದರು, ಶಾಸಕರು ಮಾತ್ರ ಆರಾಮಾಗಿ ಇರಲಿದ್ದಾರೆ ಎಂದು ಕೋಪ ಹೊರ ಹಾಕುತ್ತಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment