Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಹಿರಿಯೂರು ಕ್ಷೇತ್ರ ಅಭಿವೃದ್ಧಿ ಹಾಗೂ ನೀರಾವರಿ ಯೋಜನೆಗೆ ಆದ್ಯತೆ ನೀಡಲು ಎಂಎಲ್‌ಸಿ ಟಿ.ಡಿ.ಶ್ರೀನಿವಾಸ್ ಆಗ್ರಹ

---Advertisement---

ಚಿತ್ರದುರ್ಗ. ಜು.25:  ಹಿರಿಯೂರು ಕ್ಷೇತ್ರ ವ್ಯಾಪ್ತಿಯ ವಿವಿಧ ನೀರಾವರಿ, ಕುಡಿಯುವ ನೀರು, ಶಿಕ್ಷಣ ಮತ್ತು ಮೂಲಸೌಕರ್ಯ ಯೋಜನೆಗಳ ಕುರಿತು ವಿಧಾನ ಪರಿಷತ್ ಸದಸ್ಯ ಟಿ.ಡಿ. ಶ್ರೀನಿವಾಸ್ ಮುಖ್ಯಮಂತ್ರಿಗಳ ಗಮನ ಸೆಳೆದರು.

ಬೆಂಗಳೂರು ವಿಭಾಗ ಮಟ್ಟದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಜೋಗಿಹಳ್ಳಿ ಭಾಗದ 17 ಕೆರೆಗಳಿಗೆ ನೀರು: ಹಿರಿಯೂರು ಕ್ಷೇತ್ರದ ಅತಿ ಬರಪೀಡಿತ ಪ್ರದೇಶವಾದ ಜೋಗಿಹಳ್ಳಿ ಭಾಗದ 17 ಕೆರೆಗಳಿಗೆ ನೀರು ತುಂಬಿಸುವ ರೂ.164 ಕೋಟಿ ವೆಚ್ಚದ ಯೋಜನೆಗೆ ಸಂಪುಟ ಅನುಮೋದನೆ ನೀಡಿರುವುದಕ್ಕೆ ಅಭಿನಂದನೆ ಸಲ್ಲಿಸಿದರು. ಯೋಜನೆ ಅನುಷ್ಠಾನದಲ್ಲಿ ಸಣ್ಣ ಬದಲಾವಣೆ ಸೂಚಿಸಿದ ಅವರು, ಗೊನ್ನಿಕೇರೆ ಬಿಡಬ್ಲ್ಯೂಡಿ ರಸ್ತೆಯನ್ನು ಎತ್ತರಿಸಿ ಪಿಕ್-ಅಪ್ ಬ್ಯಾರೇಜ್ ನಿರ್ಮಿಸುವುದರಿಂದ ಹೆಚ್ಚಿನ ಅನುಕೂಲವಾಗಲಿದೆ ಎಂದು ಸಲಹೆ ನೀಡಿದರು.

ಐಮಂಗಲ ಭಾಗದ 24 ಕೆರೆಗಳಿಗೆ ಭದ್ರಾ ಮೇಲ್ದಂಡೆ ಯೋಜನೆಯಡಿ ನೀರು ತುಂಬಿಸುವ ಕಾಮಗಾರಿ ಅಂತಿಮ ಹಂತದಲ್ಲಿದ್ದು, ತಾಂತ್ರಿಕ ತೊಡಕುಗಳನ್ನು ಶೀಘ್ರ ಬಗೆಹರಿಸಿ ನೀರು ಹರಿಸಬೇಕು. ಅಲ್ಲದೆ, ವಿವಿ ಸಾಗರ ಜಲಾಶಯದ ಬಳಿಯಿರುವ ಬರಮಗಿರಿ ಕೆರೆಗೆ ಪೈಪ್‌ಲೈನ್ ಕಾಮಗಾರಿ ಪೂರ್ಣಗೊಂಡಿದ್ದರೂ ಬೆಸ್ಕಾಂ (KEB) ಬಾಕಿ ಬಿಲ್ ಸಮಸ್ಯೆಯಿಂದ ನೆಂಜಿಕೊಂಡಿದ್ದು, ಇದನ್ನು ತಕ್ಷಣವೇ ಬಗೆಹರಿಸಬೇಕೆಂದು ಮನವಿ ಮಾಡಿದರು.

ಹಿರಿಯೂರು ಕ್ಷೇತ್ರದಲ್ಲಿ 332 ಶಾಲೆಗಳಿದ್ದು, 512 ಶಾಲಾ ಕೊಠಡಿಗಳು ಶಿಥಿಲಾವಸ್ಥೆಯಲ್ಲಿವೆ. ಇವುಗಳನ್ನು ಸಿಎಸ್‌ಆರ್ (CSR) ಹಾಗೂ ಡಿಎಮ್‌ಎಫ್ (DMF) ಅನುದಾನ ಬಳಸಿಕೊಂಡು ತ್ವರಿತವಾಗಿ ಬ್ಲ್ಯಾಕ್‌ಔಟ್ ಮಾಡಿ ಸ್ಮಾರ್ಟ್ ಕ್ಲಾಸ್‌ರೂಮ್‌ಗಳಾಗಿ ಮೇಲ್ದರ್ಜೆಗೇರಿಸಬೇಕು ಎಂದರು.
‘ಅನುಗ್ರಹ’ ಯೋಜನೆಯಡಿ ಜಾನುವಾರು ಮೃತಪಟ್ಟರೆ ನೀಡುವ ಪರಿಹಾರ ಧನವನ್ನು ರೈತರಿಗೆ ತಕ್ಷಣವೇ ಬಿಡುಗಡೆ ಮಾಡಬೇಕು.ಜೆಜೆಎಂ (JJM) ಕಾಮಗಾರಿ ವೇಳೆ ಅಗೆದು ಹಾಳಾಗಿರುವ ಸಿಸಿ ಹಾಗೂ ತಾರೂ ರಸ್ತೆಗಳನ್ನು ಗುತ್ತಿಗೆದಾರರೇ ಕಡ್ಡಾಯವಾಗಿ ಪುನರ್ನಿರ್ಮಾಣ (Restoration) ಮಾಡುವಂತೆ ಕಟ್ಟುನಿಟ್ಟಿನ ಸೂಚನೆ ನೀಡಬೇಕು ಎಂದು ಮನವಿ ಮಾಡಿದರು.

ಬೆಂಗಳೂರು ವಿಭಾಗದಲ್ಲಿ 300ಕ್ಕೂ ಹೆಚ್ಚು ಮಳೆ ಮಾಪನ ಕೇಂದ್ರಗಳು ಕೆಟ್ಟು ಹೋಗಿದ್ದು, ಇದರಿಂದ ನಿಖರ ಮಳೆಯ ಮಾಹಿತಿ ಸಿಗುತ್ತಿಲ್ಲ. ಇವುಗಳನ್ನು ತಕ್ಷಣವೇ ಸರಿಪಡಿಸಿ, ಬಹುಗ್ರಾಮ ಕುಡಿಯುವ ನೀರಿನ ಯೋಜನೆಗೆ ಹೆಚ್ಚಿನ ಒತ್ತು ನೀಡಬೇಕೆಂದು ಸಭೆಯಲ್ಲಿ ಕೋರಿದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now