Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮೊಬೈಲ್ ಗೀಳು ಆರೋಗ್ಯಕ್ಕೆ ಮತ್ತು ಪ್ರತಿಭೆಗೆ ಹಾನಿಕರ : ಎಸ್. ಜೆ. ಕುಮಾರಸ್ವಾಮಿ

Facebook
Twitter
Telegram
WhatsApp

ಸುದ್ದಿಒನ್, ಚಿತ್ರದುರ್ಗ, ಜೂನ್.19 : ಮಕ್ಕಳ ಪ್ರತಿಭೆಯನ್ನು ಗುರುತಿಸಲು ಹೌಸ್‍ಗಳು ಸಹಾಯಕ. ಮೊಬೈಲ್ ಗೀಳು ಆರೋಗ್ಯಕ್ಕೆ ಮತ್ತು ಪ್ರತಿಭೆಗೆ ಹಾನಿಕರ ಎಂದು ಹೆಚ್ಚುವರಿ ಪೋಲಿಸ್ ವರಿಷ್ಠಾಧಿಕಾರಿ ಎಸ್. ಜೆ. ಕುಮಾರಸ್ವಾಮಿ ಕಿವಿ ಮಾತು ಹೇಳಿದರು.

ಅವರು ನಗರದ ವಿದ್ಯಾ ವಿಕಾಸ ವಿದ್ಯಾ ಸಂಸ್ಥೆಯಲ್ಲಿ “ಶಾಲಾ ಮಟ್ಟದ ಹೌಸ್‍ಗಳ ಉದ್ಘಾಟನಾ ಸಮಾರಂಭದಲ್ಲಿ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿ ಮಾತನಾಡಿದರು.

ಒನಕೆ ಓಬವ್ವಳ ಸಾಹಸ ಗಾಥೆಯನ್ನು ಸ್ಮರಿಸಿದರು. ಶಿಸ್ತಿನಿಂದ ಇದ್ದರೆ ನಿಮ್ಮ ಗುರಿ ಸಾಧಿಸಲು ಅವಕಾಶವಾಗುತ್ತದೆ ಎಂದರು. ಕ್ರೀಡೆ ಮತ್ತು ಸಾಂಸ್ಕೃತಿಕ ಚಟುವಟಿಕೆಗಳನ್ನು ಚೆನ್ನಾಗಿ ನಿಭಾಯಿಸಿ ಎಂದರು.

ಮಕ್ಕಳ ಸರ್ವತೋಮುಖ ಅಭಿವೃದ್ಧಿಯ ದೃಷ್ಠಿಯಿಂದ ಶೈಕ್ಷಣಿಕವಾಗಿ, ಕ್ರೀಡೆ ಮತ್ತು ಸಾಂಸ್ಕøತಿಕವಾಗಿ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಲು “ಪದ್ಮಶ್ರೀ, ಪದ್ಮ ವಿಭೂಷಣ, ಪದ್ಮಭೂಷಣ, ಭಾರತ ರತ್ನ ” ಎಂಬ ನಾಲ್ಕು ಹೌಸ್‍ಗಳನ್ನು ರಚಿಸಲಾಗಿದೆ ಎಂದರು.

ಸಂಸ್ಥೆಯ ಕಾರ್ಯದರ್ಶಿಗಳಾದ ಬಿ.ವಿಜಯ್ ಕುಮಾರ್‍ರವರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಮಕ್ಕಳ ಅಭಿವೃದ್ದಿಗೆ ಹೌಸ್‍ಗಳ ಮಹತ್ವವನ್ನು ವಿವರಿಸಿದರು.

ಕಾರ್ಯಕ್ರಮದಲ್ಲಿ ಸಂಸ್ಥೆಯ ನಿರ್ದೇಶಕರಾದ ಎಸ್.ಎಂ ಪೃಥ್ವೀಶ ಸರ್ ಶ್ರೀಮತಿ ಸುನೀತಾ ವಿಜಯ್ ಕುಮಾರ್, ಮುಖ್ಯೋಪಾಧ್ಯಾಯರಾದ ತಿಪ್ಪೇಸ್ವಾಮಿ ಎನ್.ಜಿ ಐಸಿಎಸ್‍ಸಿ  ಪ್ರಾಚಾರ್ಯರಾದ ಶ್ರೀ ಬಸವರಾಜಯ್ಯ ಪಿ.  ಉಪಪ್ರಾಚಾರ್ಯರಾದ ಶ್ರೀ ಅವಿನಾಶ್.ಬಿ. ಶಿಕ್ಷಕ/ಶಿಕ್ಷಕೇತರ ವೃಂದ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ವಿದ್ಯಾರ್ಥಿಗಳಾದ ಸನಿಹಾ ಸಿಂಚನ ನಿರೂಪಿಸಿದರು,  ಜುಹಾ ಸಾರಾ, ಸ್ವಾಗತಿಸಿದರು,  ವರ್ಷಿತಾ ವಂದಿಸಿದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

10 ಸಾವಿರ ಶಿಕ್ಷಕರನ್ನು ನೇಮಿಸಲು ರಾಜ್ಯ ಸರ್ಕಾರ ನಿರ್ಧಾರ : ಯಾವಾಗಿಂದ ಆರಂಭವಾಗಬಹುದು..?

ಬೆಂಗಳೂರು: ಶಿಕ್ಷಕ ವೃತ್ತಿ ಮಾಡಬೇಕೆಂದುಕೊಂಡವರಿಗೆ ಗುಡ್ ನ್ಯೂಸ್ ಸಿಕ್ಕಿದೆ. ರಾಜ್ಯ ಸರ್ಕಾರ 10 ಸಾವಿರ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲು ನಿರ್ಧಾರ ಮಾಡಿದೆ‌. ಈ ಸಂಬಂಧ ಈಗಾಗಲೇ ಆರ್ಥಿಕ ಇಲಾಖೆಗೆ ಪ್ರಸ್ತಾವನೆಯನ್ನು ಸಲ್ಲಿಕೆ ಮಾಡಿದೆ. ಜೊತೆಗೆ45

ಹಲವು ನಟಿಯರ ವಿರುದ್ಧ ರೇಣುಕಾಸ್ವಾಮಿ ತಂದೆ ಆಕ್ರೋಶ : ಯಾಕೆ ಗೊತ್ತಾ..?

ಸುದ್ದಿಒನ್, ಚಿತ್ರದುರ್ಗ, ಜುಲೈ. 03 : ಪವಿತ್ರಾಗೌಡಗೆ ರೇಣುಕಾಸ್ವಾಮಿ ಅಶ್ಲೀಲ ಮೆಸೇಜ್ ಗಳನ್ನು ಕಳುಹಿಸುತ್ತಿದ್ದ ಎಂದು ಚಿತ್ರದುರ್ಗದಿಂದ ಬೆಂಗಳೂರಿಗೆ ಕರೆತಂದು ಎಚ್ಚರಿಕೆ ಕೊಡಲು ಹೋಗಿ ಆ ಗಲಾಟೆ ಕೊಲೆಯಲ್ಲಿ ಅಂತ್ಯವಾಗಿದೆ. ಕೊಲೆ ಆರೋಪದಲ್ಲಿ ದರ್ಶನ್

error: Content is protected !!