Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಮೋದಿ ಕರೆ ಎಫೆಕ್ಟ್: ಬೆಂಗಳೂರಲ್ಲಿ ಅಡುಗೆ ಎಣ್ಣೆ ದರ ಇಳಿಕೆ, ಅಕ್ಕಿ ಬೆಲೆ ಏರಿಕೆ!

---Advertisement---

 

ಮಧ್ಯಪ್ರಾಚ್ಯ ಯುದ್ಧದ ಪರಿಣಾಮ ಭಾರತದಲ್ಲಿಯೂ ಕಾಣಿಸತೊಡಗಿದ್ದು, ದೇಶದ ಆರ್ಥಿಕ ಪರಿಸ್ಥಿತಿ ಗಮನದಲ್ಲಿಟ್ಟುಕೊಂಡು ಪ್ರಧಾನಿ ನರೇಂದ್ರ ಮೋದಿ ಜನತೆಗೆ ಕೆಲ ಮಹತ್ವದ ಸಲಹೆಗಳನ್ನು ನೀಡಿದ್ದಾರೆ. ಅದರಲ್ಲಿ ಅಡುಗೆ ಎಣ್ಣೆಯ ಬಳಕೆಯನ್ನು ಮಿತಿಗೊಳಿಸುವ ಮನವಿಯೂ ಪ್ರಮುಖವಾಗಿದೆ.ಈ ಕರೆಯ ಬೆನ್ನಲ್ಲೇ ಬೆಂಗಳೂರಿನಲ್ಲಿ ಅಡುಗೆ ಎಣ್ಣೆ ದರದಲ್ಲಿ ಇಳಿಕೆ ಕಂಡುಬಂದಿದ್ದು, ಮತ್ತೊಂದೆಡೆ ಅಕ್ಕಿ ಬೆಲೆ ಏರಿಕೆಯಾಗಿರುವುದು ಗ್ರಾಹಕರ ಗಮನ ಸೆಳೆದಿದೆ.

ಇತ್ತೀಚೆಗೆ ಪ್ರಧಾನಿ ಮೋದಿ ದೇಶದ ಜನತೆಗೆ ಉದ್ದೇಶಿಸಿ ಮಾತನಾಡಿ, ಆರೋಗ್ಯ ಹಾಗೂ ದೇಶದ ಆರ್ಥಿಕತೆಯ ಹಿತದೃಷ್ಟಿಯಿಂದ ಅಡುಗೆ ಎಣ್ಣೆ ಬಳಕೆಯನ್ನು ಕಡಿಮೆ ಮಾಡುವಂತೆ ವಿಶೇಷವಾಗಿ ಗೃಹಿಣಿಯರಿಗೆ ಮನವಿ ಮಾಡಿದ್ದರು.ಈ ಹೇಳಿಕೆಯ ಬಳಿಕ ಬೆಂಗಳೂರಿನ ಮಾರುಕಟ್ಟೆಯಲ್ಲಿ ವಿವಿಧ ಬ್ರ್ಯಾಂಡ್‌ಗಳ ಅಡುಗೆ ಎಣ್ಣೆ ದರದಲ್ಲಿ ಲೀಟರ್‌ಗೆ 3ರಿಂದ 5 ರೂಪಾಯಿ ತನಕ ಇಳಿಕೆಯಾಗಿದೆ. ಒಂದು ಟಿನ್ ಎಣ್ಣೆಯ ಬೆಲೆಯಲ್ಲಿ 30ರಿಂದ 40 ರೂಪಾಯಿವರೆಗೆ ಕಡಿತ ಕಂಡುಬಂದಿದೆ.

ವ್ಯಾಪಾರಿಗಳ ಪ್ರಕಾರ, ಅಡುಗೆ ಎಣ್ಣೆಯ ಆಮದು ಪ್ರಮಾಣ ಹೆಚ್ಚಳ, ಪೂರೈಕೆ ಸುಧಾರಣೆ ಹಾಗೂ ಪ್ರಧಾನಿ ಮೋದಿ ಅವರ ಮನವಿಯ ಪರಿಣಾಮದಿಂದ ದರ ಇಳಿಕೆಯಾಗಿದೆ.
ಎಣ್ಣೆಯ ವಿಧಹಳೆಯ ದರಹೊಸ ದರಇಳಿಕೆ

 

ಪಾಮ್ ಆಯಿಲ್
₹143
₹141
₹2 ಇಳಿಕೆ
ಸನ್ ಪ್ಯೂರ್
₹170
₹167
₹3 ಇಳಿಕೆ
ಕಡಲೆಕಾಯಿ ಎಣ್ಣೆ
₹190
₹185
₹5 ಇಳಿಕೆ

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...