Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಎನ್‌ಡಿಎ ಸಭೆಯಲ್ಲಿ ನಿತೀಶ್ ಮಾತಿಗೆ ಮೋದಿ ಭಾವುಕ…!

---Advertisement---

ಸುದ್ದಿಒನ್, ನವದೆಹಲಿ, ಜೂನ್. 07 : ಇಂದು
ನಡೆದ ನ್ಯಾಷನಲ್ ಡೆಮಾಕ್ರಟಿಕ್ ಅಲಯನ್ಸ್ ಪಾರ್ಲಿಮೆಂಟರಿ ಪಕ್ಷದ ಸಭೆಯಲ್ಲಿ ನರೇಂದ್ರ ಮೋದಿ ಅವರನ್ನು ಎನ್‌ಡಿಎ ಪಕ್ಷದ ನಾಯಕರಾಗಿ ಅವಿರೋಧವಾಗಿ ಆಯ್ಕೆ ಮಾಡಲಾಯಿತು.

ಈ ಸಂದರ್ಭದಲ್ಲಿ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ನರೇಂದ್ರ ಮೋದಿ ಅವರನ್ನು ಹೊಗಳಿದ್ದಾರೆ. ನೀವು ದೇಶಕ್ಕೆ ಸಾಕಷ್ಟು ಸೇವೆ ಸಲ್ಲಿಸಿದ್ದೀರಿ, ಆದರೆ ದೇಶದ ಜನರು ಅದನ್ನು ಗುರುತಿಸಲು ಸಾಧ್ಯವಾಗಲಿಲ್ಲ. ಅತ್ಯಂತ ಕಡಿಮೆ ಬಹುಮತ ನೀಡಿದ್ದಾರೆ. ಇದನ್ನು ಕೇಳಿದ ನರೇಂದ್ರ ಮೋದಿ ಭಾವುಕರಾದರು. ನಿತೀಶ್ ಕುಮಾರ್ ಪ್ರತಿಪಕ್ಷಗಳನ್ನು ಗುರಿಯಾಗಿಸಿಕೊಂಡು, ಈ ಬಾರಿ ಅಲ್ಲೊಬ್ಬರು, ಇಲ್ಲೊಬ್ಬರು ಯಶಸ್ಸು ಸಾಧಿಸಿದ್ದಾರೆ. ಕೊನೆಗೆ ಎಲ್ಲರೂ ಸೋಲುತ್ತಾರೆ. ದೇಶದ ಸರ್ವತೋಮುಖ ಅಭಿವೃದ್ಧಿಯಾಗಬೇಕಾದರೆ ಮೋದಿಯಿಂದ ಮಾತ್ರ ಸಾಧ್ಯ ಎಂದು ನಿತೀಶ್ ಕುಮಾರ್ ಹೇಳಿದರು.

ನರೇಂದ್ರ ಮೋದಿ ಅವರು ಇಡೀ ದೇಶಕ್ಕೆ ಸೇವೆ ಸಲ್ಲಿಸಿದ್ದು, ಏನಾದರೂ ಉಳಿದಿದ್ದರೆ ಮುಂದಿನ ಬಾರಿ ಎಲ್ಲ ರಾಜ್ಯಗಳಿಗೂ ಪೂರೈಸುವ ವಿಶ್ವಾಸವಿದೆ ಎಂದು ನಿತೀಶ್ ಕುಮಾರ್ ಹೇಳಿದರು. “ನಮ್ಮ ಪಕ್ಷ ಜನತಾ ದಳ (ಯುನೈಟೆಡ್) ಭಾರತೀಯ ಜನತಾ ಪಕ್ಷದ ಸಂಸದೀಯ ಪಕ್ಷದ ನಾಯಕ ನರೇಂದ್ರ ಮೋದಿ ಅವರನ್ನು ಪ್ರಧಾನಿ ಹುದ್ದೆಗೆ ಸಂಪೂರ್ಣವಾಗಿ ಬೆಂಬಲಿಸುತ್ತದೆ. 10 ವರ್ಷಗಳ ಕಾಲ ಪ್ರಧಾನಿಯಾಗಿದ್ದ ಅವರು ಮತ್ತೊಮ್ಮೆ ಪ್ರಧಾನಿಯಾಗುತ್ತಿರುವುದು ಸಂತಸದ ಸಂಗತಿ. ನಾವು ಐದು ವರ್ಷಗಳ ಕಾಲ ಅವರೊಂದಿಗೆ ಇರುತ್ತೇವೆ. ಅವರು ಏನು ಮಾಡಿದರೂ ಮತ್ತು ಹೇಗೆ ಮಾಡಿದರೂ, ತುಂಬಾ ಚೆನ್ನಾಗಿ ಮಾಡುತ್ತಾರೆ ಎಂದು ನಿತೀಶ್ ಕುಮಾರ್ ಪ್ರಶಂಸೆಯನ್ನು ವ್ಯಕ್ತಪಡಿಸಿದರು.

https://x.com/ANI/status/1798978006012293357?t=es7H6sEsKx5zq3rEYc1uZA&s=19

ನೀವು ದೇಶಕ್ಕೆ ಸಾಕಷ್ಟು ಸೇವೆ ಸಲ್ಲಿಸಿದ್ದೀರಿ, ಇದೆಲ್ಲದರ ನಂತರ ಹೀಗೆ ನಡೆಯಬಾರದಿತ್ತು ಎಂದು ಹೇಳಿದರು. ಆದರೆ, ಈ ಬಾರಿ ನಿಮಗೆ ಈ ಅವಕಾಶ ಸಿಕ್ಕಿದೆ. ಪ್ರತಿಪಕ್ಷಗಳಿಗೆ ಸ್ಕೋಪ್ ಇರುವುದಿಲ್ಲ. ಮೋದಿ ಆಡಳಿತದಲ್ಲಿ ದೇಶ ಸಾಕಷ್ಟು ಪ್ರಗತಿ ಸಾಧಿಸಲಿದೆ ಎಂದರು.

ಅದರಲ್ಲೂ ಬಿಹಾರದಲ್ಲಿ ಎಲ್ಲ ಕಾಮಗಾರಿ ಮುಗಿದಿದೆ. ಉಳಿದವುಗಳನ್ನು ಕೂಡ ಶೀಘ್ರದಲ್ಲೇ ಪೂರ್ಣಗೊಳಿಸಲಾಗುವುದು, ಆದ್ದರಿಂದ ನಾವು ಸಂಪೂರ್ಣವಾಗಿ ಒಟ್ಟಿಗೆ ಇದ್ದೇವೆ ಎಂದು ನಿತೀಶ್ ಕುಮಾರ್ ಸ್ಪಷ್ಟಪಡಿಸಿದರು. ನಾವು ನಿಮ್ಮನ್ನು ಬೆಂಬಲಿಸುತ್ತೇವೆ. ಆದಷ್ಟು ಬೇಗ ಪ್ರಮಾಣ ವಚನ ಸ್ವೀಕರಿಸಬೇಕು ಎಂದು ಮೋದಿಗೆ ನಿತೀಶ್ ಕುಮಾರ್ ಭರವಸೆ ನೀಡಿದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment