Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಮೋದಿ ನನ್ನ ಹೃದಯದಲ್ಲಿದ್ದಾರೆ, ಫೋಟೋ ಬಳಕೆಗೆ ಅನುಮತಿ ಸಿಕ್ಕಿದೆ : ಕೆ. ಎಸ್. ಈಶ್ವರಪ್ಪ

---Advertisement---

 

 

ಶಿವಮೊಗ್ಗ: ಬಿಜೆಪಿಯಿಂದ ಟಿಕೆಟ್ ಸಿಗದ ಹಿನ್ನೆಲೆ ಬಂಡಾಯವೆದ್ದು, ಪಕ್ಷೇತರ ಅಭ್ಯರ್ಥಿಯಾಗಿ ಕೆ ಎಸ್ ಈಶ್ವರಪ್ಪ ಶಿವಮೊಗ್ಗ ಅಖಾಡದಲ್ಲಿ ನಿಂತಿದ್ದಾರೆ. ಆರಂಭದಿಂದಲೂ ಪ್ರಧಾನಿ ಮೋದಿಯವರ ಫೋಟೋವನ್ನೇ ಬಳಕೆ ಮಾಡಿಕೊಳ್ಳುತ್ತಿದ್ದರು. ಆದರೆ ಬಿಜೆಪಿ ನಾಯಕರು ಇದಕ್ಕೆ ಸಿಡಿಮಿಡಿಗೊಂಡು ಕೋರ್ಟ್ ಮೊರೆ ಕೂಡ ಹೋಗಿದ್ದರು. ಇದೀಗ ಕೋರ್ಟ್ ನಲ್ಲೂ ಈಶ್ವರಪ್ಪ ಅವರಿಗೆ ಜಯ ಸಿಕ್ಕಿದ್ದು, ಫೋಟೋ ಬಳಕೆಗೆ ಅನುಮತಿ ಸಿಕ್ಕಿದೆ.

 

ಈ ಬಗ್ಗೆ ಇಂದು ಮಾತನಾಡಿರುವ ಈಶ್ವರಪ್ಪ, ಪ್ರಧಾನಿ ನರೇಂದ್ರ ಮೋದಿ ನನ್ನ ಹೃದಯದಲ್ಲಿದ್ದಾರೆ. ಅವರ ಫೋಟೋವನ್ನು ನಾನು ಬಳಸಬಾರದೆಂದು ಬಿಜೆಪಿ ಕೋರ್ಟ್ ಮೊರೆ ಹೋಗಿತ್ತು. ಆದರೆ ಪ್ರಧಾನಿ ಮೋದಿಯ ಫೋಟೋ ಬಳಕೆಗೆ ನನಗೆ ಅವಕಾಶ ಸಿಕ್ಕಿದೆ. ಬಿಜೆಪಿಯವರು ಕೋರ್ಟ್ ಮತ್ತು ಚುನಾವಣಾ ಆಯೋಗಕ್ಕೆ ದೂರು ನೀಡಿದ್ದರು. ಆದರೆ ಫೋಟೋ ಬಳಕೆಗೆ ನನಗೆ ಅವಕಾಶ ಸಿಕ್ಕಿದೆ. ಇದರಿಂದ ಬಿಜೆಪಿಯವರಿಗೆ ಎರಡು ಕಡೆ ಹಿನ್ನಡೆಯಾಗಿದೆ. ಇದರಿಂದ ನನಗೆ ಸಂತೋಷವಾಗಿದೆ ಎಂದಿದ್ದಾರೆ.

ಬಿಎಸ್ ಯಡಿಯೂರಪ್ಪ ಹಾಗೂ ರಾಘವೇಂದ್ರ ಕುತಂತ್ರ ಮಾಡಿದ್ದಾರೆ. ಬುಧವಾರ ಶಿರಾಳಕೊಪ್ಪದಲ್ಲಿ ನನ್ನ ಕಾರ್ಯಕ್ರಮಕ್ಕೆ ಅಡ್ಡಿಪಡಿಸಿದ್ದಾರೆ‌. ಇದೇ ರೀತಿ ಮುಂದುವರೆದರೆ ತಕ್ಕ ಉತ್ತರ ನೀಡುತ್ತೇನೆ ಎಂದು ಎಚ್ಚರಿಕೆಯನ್ನು ನೀಡಿದ್ದಾರೆ.

ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಶಿವಮೊಗ್ಗದಲ್ಲಿ ತ್ರಿಕೋನ ಸ್ಪರ್ಧೆ ಏರ್ಪಟ್ಟಿದೆ. ಗೀತಾ ಶಿವರಾಜ್ ಕುಮಾರ್ ಹಾಗೂ ಬಿವೈ ರಾಘವೇಂದ್ರ ಅವರ ನಡುವೆ ಸ್ಪರ್ಧೆ ಇತ್ತು. ಆದರೆ ಈ ಬಾರಿ ಬಿಜೆಪಿಯಿಂದಾನೆ ಬಂಡಾಯವೆದ್ದು ಈಶ್ವರಪ್ಪ ಅವರೇ ಸ್ಪರ್ಧೆ ನಡೆಸಿದ್ದು, ಶಿವಮೊಗ್ಗ ಅಖಾಡ ಬೇಸುಗೆ ಬಿಸಿಲಿಗಿಂತ ಲೋಕಸಭೆಯ ಕಾವನ್ನು ಹೆಚ್ಚಾಗಿಸಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment