Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ನ್ಯಾಯಬೇಕು ಮೋದಿ : ಹ್ಯಾಶ್ ಟ್ಯಾಗ್ ನೊಂದಿಗೆ ಪ್ರಶ್ನಿಸಿದ ಸಿದ್ದರಾಮಯ್ಯ..!

Facebook
Twitter
Telegram
WhatsApp

ಬೆಂಗಳೂರು: ಪಿಎಸ್ಐ ಹಗರಣ ಸೇರಿದಂತೆ ಪ್ರಧಾನಿ ಮೋದಿಗೆ,‌ಮಾಜಿ ಸಿಎಂ ಸಿದ್ದರಾಮಯ್ಯ ಅವರು 12 ಪ್ರಶ್ನೆಗಳನ್ನು ಕೇಳಿದ್ದಾರೆ. ಟ್ವಿಟ್ಟರ್ ನಲ್ಲಿ ಫೋಟೋ ಹಂಚುವ ಮೂಲಕ ನ್ಯಾಯಬೇಕು ಮೋದಿ ಎಂಬ ಹ್ಯಾಸ್ ಟ್ಯಾಗ್ ಬಳಸಿದ್ದಾರೆ. ಈ ಹಿಂದೆಯೂ ಪ್ರಧಾನಿ ಮೋದಿ ಅವರಿಗೆ ಹಲವು ಪ್ರಕಾರ ಪ್ರಶ್ನೆಗಳನ್ನು ಕೇಳಿದ್ದರು.

* ಪಿಎಸ್ಐ ನೇಮಕಾತಿ ಹಗರಣದಿಂದ, ಸಹಾಯಕ ಪ್ರಾಧ್ಯಾಪಕರ ಹಗರಣ, PWD ಸಹಾಯಕ ಎಂಜಿನಯರ್ ನೇಮಕಾತಿ ಹಗರಣದಲ್ಲಿ ಕೆಲಸದಿಂದ ವಂಚಿತರಾದ ಎಲ್ಲರಿಗೂ ನ್ಯಾಯ ಕೊಡಿಸಿ‌ ಮೋದಿಯವರೆ..!

* ಕೆ ಆರ್ ಪುರಂನ ಇನ್ಸ್ಪೆಕ್ಟರ್ ನಂದೀಶ್ 80 ಲಕ್ಷ ಲಂಚ ಕೊಟ್ಟು ಬರ್ಗಾವಣೆ ಪಡೆದು ಬಂದ ಕಾರಣಕ್ಕೆ ಒತ್ತಡದಿಂದ ಸತ್ತಿದ್ದಾರೆ ಎಂದು ಸ್ವತಃ ಬಿಜೆಪಿ ಸಚಿವ ಎಂಟಿಬಿ ನಾಗರಾಜ್ ಹೇಳಿದ್ದಾರೆ. ಇತರರಿಗೆ ರಕ್ಷಣೆ ನೀಡುವ ಪೊಲೀಸರೇ ಹೀಗಾದರೆ ಸಾಮಾನ್ಯರ ಗತಿ ಏನು..?

* ಕೋವಿಡ್ ಸಮಯದಲ್ಲಿ ಅಗತ್ಯ ಸಲಕರಣೆ ಮಾಡಿದ್ದ ಗುತ್ತಿಗೆದಾರ ಬಸವರಾಜ ಅಮರಗೋಳ ಅವರಿಗೆ ರಾಜ್ಯ ಸರ್ಕಾರ ಬಿಲ್ ನೀಡದ ಹಿನ್ನೆಲೆ, ರಾಷ್ಟ್ರಪತಿಯವರಿಗೆ ದಯಾಮರಣಕ್ಕೆ ಅರ್ಜಿ ಹಾಕಿದ್ದರು. ಇವರಿಗೆ ನ್ಯಾಯಕೊಡಿಸಬೇಕಾದವರು ನೀವಲ್ಲವೇ ಮೋದಿ..?

* ಪರೇಶ್ ಮೇಸ್ತಾನ ಸಾವನ್ನೂ ತನ್ನ ಭರ್ಜರಿ ರಾಜಕೀಯ ಲಾಭಕ್ಕೆ ಬಳಸಿಕೊಂಡಿದ್ದು ಬಿಜೆಪಿ. ಈಗ ಆತನ ವಯೋವೃದ್ಧ ತಂದೆ ತಾಯಿಗೆ ನ್ಯಾಯಬೇಕು.

* ಕೊರೊನಾ ಕಾಲದಲ್ಲಿ ನಡೆದ ಮೂರು ಸಾವಿರ ಕೋಟಿ ಅವ್ಯವಹಾರ, ಶರಾವತಿ ಸಂತ್ರಸ್ಥ ಕುಟುಂಬಗಳ ಸಮಸ್ಯೆ, ನಂದಿನಿ ಸಂಸ್ಥೆ ಮೇಲೆ ಗುಜರಾತ್ ಅಮುಲ್ ಕಣ್ಣು, ಕಾಲುಬಾಯಿ ಮತ್ತು ಚರ್ಮಗಂಟು ರೋಗದಿಂದ ರಾಸುಗಳನ್ನು ಕಳೆದುಕೊಂಡ ರೈತರಿಗೆ ಪರಿಹಾರ, 40% ಕಮಿಷನ್ ಹೀಗೆ ಹನ್ನೆರಡು ವಿಚಾರಗಳ ಮೇಲೆ ಪ್ರಧಾನಿ ಮೋದಿ ಅವರಿಗೆ ಪ್ರಶ್ನೆ ಮಾಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಳ್ಳಕೆರೆ | ರಸ್ತೆ ಅಪಘಾತದಲ್ಲಿ ಛಾಯಾಗ್ರಾಹಕ ಮೃತ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಳ್ಳಕೆರೆ, ಮಾರ್ಚ್. 29 :  ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿಯಾಗಿ ಓರ್ವ ವ್ಯಕ್ತಿ ಸ್ಥಳದಲ್ಲಿಯೇ ಮೃತಪಟ್ಟ ಘಟನೆ

ಚಿತ್ರದುರ್ಗ | ಕಣಿವೆಯಿಂದ ಠಾಣೆಗೆ ಬಂದ ಮಾರಮ್ಮನ ರೋಚಕ ಕಥೆ..!

ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 29 :  ಚಿತ್ರದುರ್ಗ ನಗರ ಪೊಲೀಸ್ ಠಾಣೆ ಆವರಣದಲ್ಲಿ ಶ್ರೀ ಕಣಿವೆ ಮಾರಮ್ಮ ದೇವಿ ಆಸೀನಳಾಗಿ ಬಹು ವಿಜೃಂಭಣೆಯಿಂದ ರಾರಾಜಿಸುತ್ತಿದ್ದಾಳೆ, ತಾಯಿ. ಅಸಂಖ್ಯಾತ ಭಕ್ತಜನ ದಿನದಿನವೂ ಅರ್ಚನೆ, ಹರಕೆಗಳಿಂದ ಇದೀಗ

ಈ ರಾಶಿಯ ದಂಪತಿಗಳಿಗೆ ಸಂತಾನದ ವಿಷಯ ಕೇಳಿ ಹರ್ಷವೋ ಹರ್ಷ!

ಈ ರಾಶಿ ಒಲ್ಲದ ಮನಸಿಗೆ ಮದುವೆ ಯೋಗ, ಈ ರಾಶಿಯ ದಂಪತಿಗಳಿಗೆ ಸಂತಾನದ ವಿಷಯ ಕೇಳಿ ಹರ್ಷವೋ ಹರ್ಷ! ಶುಕ್ರವಾರ- ರಾಶಿ ಭವಿಷ್ಯ ಮಾರ್ಚ್-29,2024 ಸೂರ್ಯೋದಯ: 06:16, ಸೂರ್ಯಾಸ್ತ : 06:25 ಶಾಲಿವಾಹನ ಶಕೆ1944,

error: Content is protected !!