ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
ಕಲಬುರಗಿ: ಚುನಾವಣೆ ಹತ್ತಿರವಾಗುತ್ತಿದ್ದಂತೆ ಪಕ್ಷಗಳ ಚಟುವಟಿಕೆಗಳು ಜೋರಾಗಿ ನಡೆಯುತ್ತಿವೆ. ಈ ಬಾರಿ ಕರ್ನಾಟಕ ಚುನಾವಣೆಯನ್ನು ಗೆಲ್ಲಲೇಬೇಕೆಂದು ಪಣತೊಟ್ಟಿರುವ ಬಿಜೆಪಿ, ಫುಲ್ ಆ್ಯಕ್ಟಿವ್ ಆಗಿದೆ. ಪ್ರಧಾನಿ ಮೋದಿ ಅವರು, ರಾಜ್ಯಕ್ಕೆ ಎರಡನೇ ಬಾರಿ ಬರುತ್ತಿದ್ದಾರೆ. ಮೊದಲ ಬಾರಿಗೆ ಕಲಬುರಗಿಗೆ ಭೇಟಿ ನೀಡುತ್ತಿದ್ದಾರೆ.
ಇಂದು ಬೆಳಗ್ಗೆ 11 ಗಂಟೆಗೆ ಕಲಬುರಗಿಯ ಏರ್ ಪೋರ್ಟ್ ಗೆ ಬಂದು ಇಳಿಯಲಿದ್ದಾರೆ. ಬಳಿಕ ಅಲ್ಲಿಂದ ಕೊಡೇಕಲ್ ಹೆಲಿಪ್ಯಾಡ್ ಗೆ ಪ್ರಯಾಣ ಬೆಳೆಸಲಿದ್ದಾರೆ. ಜಲಧಾರೆ ಮಿಷನ್ ಯೋಜನೆಯಡಿ, 1 ಸಾವಿರದ ನಾಲ್ಕು ಕೋಟಿ ರೂಪಾಯಿ ಯೋಜನೆಯ ಬಸವಸಾಗರ ಡ್ಯಾಂನ ಸ್ಕಾಡಾ ಕಾಲುವೆ ಉದ್ಘಾಟಿಸಲಿದ್ದಾರೆ. ಈ ಯೋಜನೆಯ ಮೂಲಕ ಸುಮಾರು 713 ಗ್ರಾಮಗಳಿಗೆ ಕುಡಿಯುವ ನೀರು ಒದಗಿಸಲಾಗುತ್ತದೆ.
ಯಾದಗಿರಿಯಲ್ಲಿ ಹಲವು ಯೋಜನೆಗಳಿಗೆ ಚಾಲನೆ ನೀಡಲಾಗುತ್ತಿದೆ. ಸುಮಾರು 4 ಸಾವಿರ 234 ಕೋಟಿ ರೂಪಾಯಿ ಮೊತ್ತದ ಯೋಜನೆಗೆ ಚಾಲನೆ ನೀಡಲಾಗುತ್ತಿದೆ. ಅದರ ಜೊತೆಗೆ ರಾಷ್ಟ್ರೀಯ ಹೆದ್ದಾರಿಗೂ ಶಂಕುಸ್ಥಾಪನೆ ಮಾಡಲಾಗುತ್ತಿದೆ. ಮಳಖೇಡದಲ್ಲಿ ಲಂಬಾಣಿ ಫಲಾನುಭವಿಗಳಿಗೆ ಹಕ್ಕುಪತ್ರ ವಿತರಣೆ ಮಾಡಲಾಗುತ್ತಿದೆ. ಇದು ಕಲಬುರಗಿಯಲ್ಲಿ ಅತಿ ದೊಡ್ಡ ಕಾರ್ಯಕ್ರಮ ಮಾಡಿ, ರಾಜ್ಯದಾದ್ಯಂತ ಲಂಬಾಣಿ ತಾಂಡಾ, ಹಟ್ಟಿ ಹಾಗೂ ಅಲೆಮಾರಿ ಜನಾಂಗದವರಿಗೆ ಖಾಯಂ ಸೂರು ಒದಗಿಸುವ ದೃಷ್ಟಿಯಿಂದ ಹಕ್ಕು ಪತ್ರ ವಿತರಣೆ ಮಾಡಲಾಗುತ್ತಿದೆ.


ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.







ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್ಡೇಟ್. ನೀವು ಯಾವಾಗಲೂ ಅಪ್ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್