ಸುದ್ದಿಒನ್, ಚಿತ್ರದುರ್ಗ, ನವೆಂಬರ್. 24 : ಮೊಳಕಾಲ್ಮೂರು ತಾಲ್ಲೂಕು ರಾಂಪುರ ಗ್ರಾಮದಲ್ಲಿ ನ.25 ರಂದು ಶನಿವಾರ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಮತ್ತು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಗಡಿ ಸಾಂಸ್ಕøತಿಕ ಉತ್ಸವ ಜರುಗಲಿದೆ.
ರಾಂಪುರ ಗ್ರಾಮದಲ್ಲಿ ಶನಿವಾರ 32 ವರ್ಷಗಳ ನಂತರ ಗಡಿ ಉತ್ಸವ ಜರುಗಲಿದೆ. ಬೆಳಗ್ಗೆ 9 ಗಂಟೆಗೆ ಎಸ್ಪಿಎಸ್ಆರ್ ಸಂಸ್ಥೆಯ ಸ್ಥಳದಿಂದ ಬೃಹತ್ ಮೆರವಣಿಗೆ ಆರಂಭವಾಗಲಿದೆ. ಅಲಂಕೃತ ಬೆಳ್ಳಿ ರಥದಲ್ಲಿ ಭುವನೇಶ್ವರಿ ಯ ಮೆರವಣಿಗೆ ಜರುಗಲಿದೆ.
ಮೆರವಣಿಗೆಯಲ್ಲಿ ಡೊಳ್ಳು, ಕಹಳೆ, ಸೋಬಾನೆ ಪದ,ಕೋಲಾಟ,ಟ್ರಾಷ್ ವಾದ್ಯಗಳು ಸೇರಿದಂತೆ ನಾನಾ ಕಲಾ ತಂಡಗಳು ಭಾಗವಹಿಸಲಿವೆ.
ಮೆರವಣಿಗೆಯು ಎಸ್ಪಿಎಸ್ ಆರ್ ಶಾಲೆ,ಗ್ರಾಪಂ ಕಚೇರಿ ಮೂಲಕ ಎಸ್.ಜಿ.ಎಂ. ಶಾಲೆ ತಲುಪಲಿದೆ. ಎಸ್.ಜಿ.ಎಂ. ವಿದ್ಯಾಪೀಠ ಶಾಲೆಯ ಆವರಣದಲ್ಲಿ ಸಭಾ ಕಾರ್ಯಕ್ರಮ ಜರುಗಲಿದೆ.
ಶಾಸಕ ಎನ್.ವೈ.ಗೋಪಾಲಕೃಷ್ಣ, ಗ್ರಾಪಂ ಅಧ್ಯಕ್ಷೆ ಟಿ.ನಾಗವೇಣಿ ರವಿಶಂಕರ್. ತಹಸೀಲ್ದಾರ್ ಎಂ.ವಿ.ರೂಪ, ಬಿಇಒ ಇ.ನಿರ್ಮಲಾದೇವಿ ಸೇರಿದಂತೆ ನಾನಾ ಜನಪ್ರತಿನಿಧಿಗಳು ಮತ್ತು ಗಣ್ಯರು ಭಾಗವಹಿಸಲಿದ್ದಾರೆ.
ಸಾಹಿತ್ಯಾಸಕ್ತರು ಹೆಚ್ಚಿನ ಪ್ರಮಾಣದಲ್ಲಿ ಆಗಮಿಸಬೇಕೆಂದು ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ
ಕೆ.ಎಂ.ಶಿವಸ್ವಾಮಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಚಿತ್ರದುರ್ಗ. ಫೆ.24: ಬರುವ ಮಾರ್ಚ್ 01 ರಂದು ಚಿತ್ರದುರ್ಗದ ಮುರುಘರಾಜೇಂದ್ರ ಕ್ರೀಡಾಂಗಣ (ಸರ್ಕಾರಿ ವಿಜ್ಞಾನ ಕಾಲೇಜು ಮೈದಾನ) ದಲ್ಲಿ ಬೃಹತ್…
ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳೆಗೆರೆ, ಚಳ್ಳಕೆರೆ, ಮೊ : 84314 13188 ಸುದ್ದಿಒನ್, ಚಳ್ಳಕೆರೆ, ಫೆಬ್ರವರಿ. 24 :…
ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ.…
ಚಿತ್ರದುರ್ಗ, ಫೆಬ್ರವರಿ. 24 : ಭದ್ರ ಮೇಲ್ದಂಡೆ ಯೋಜನೆಗೆ ಮುಂಬರುವ ರಾಜ್ಯ ಬಜೆಟ್ ನಲ್ಲಿ ಕನಿಷ್ಟ ಐದು ಸಾವಿರ ಕೋಟಿ…
ವಿಕ್ಕಿ ಕೌಶಲ್ ಹಾಗೂ ರಶ್ಮಿಕಾ ಮಂದಣ್ಣ ನಟನೆಯ ಛಾವಾ ಸಿನಿಮಾ ಎಲ್ಲೆಡೆ ಭರ್ಜರಿ ರೆಸ್ಪಾನ್ಸ್ ಪಡೆದುಕೊಳ್ಳುತ್ತಿದೆ. ಇದರಲ್ಲಿ ಸಂಭಾಜಿ ಜೀವನ…
ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಚಿತ್ರದುರ್ಗ ಫೆ. 24 :…