Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಮೊಳಕಾಲ್ಮೂರು | ಹಾಸ್ಟೆಲ್ ವಾರ್ಡನ್ ಅಮನಾತು

---Advertisement---

 

ಚಿತ್ರದುರ್ಗ. ಡಿ.24: ಸರ್ಕಾರಿ ಆಸ್ತಿ ದುರ್ಬಳಕೆ ಹಾಗೂ ವಿದ್ಯಾರ್ಥಿ ನಿಲಯ ನಿರ್ವಹಣೆಯಲ್ಲಿನ ಕರ್ತವ್ಯ ಲೋಪ ಆರೋಪದ ಮೇರೆಗೆ ಕೋನಸಾಗರ ಪರಿಶಿಷ್ಟ ಜಾತಿ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿನಿಲಯದ ವಾರ್ಡನ್ ಫಯಾಜ್ ಬಾಷಾ ಅವರನ್ನು ಸೇವೆಯಿಂದ ಅಮಾನತುಗೊಳಿಸಿ, ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಸ್.ಜೆ.ಸೋಮಶೇಖರ್ ಆದೇಶ ಹೊರಡಿಸಿದ್ದಾರೆ.

 

ಫಯಾಜ್ ಬಾಷಾ ಅವರು ಮೊಳಕಾಲ್ಮೂರು ಟೌನ್‍ನ ಪರಿಶಿಷ್ಟ ವರ್ಗಗಳ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿನಿಲಯದ ವಾರ್ಡನ್ ಆಗಿದ್ದ ಸಂದರ್ಭದಲ್ಲಿ ವಿದ್ಯಾರ್ಥಿ ನಿಲಯಕ್ಕಾಗಿ, ಚಿತ್ರದುರ್ಗ ನಗರದ ಐ.ಯು.ಡಿ.ಪಿ ಲೇ ಔಟ್‍ನ ಸರ್ಕಾರಿ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿನಿಲಯದಲ್ಲಿ ಹೆಚ್ಚುವರಿಯಾಗಿದ್ದ 30 ಟೂ-ಟಯರ್ ಕಾಟ್, 44 ಬೆಡ್ ಮತ್ತು 36 ಪಿಲ್ಲೋಗಳನ್ನು ತೆಗೆದುಕೊಂಡು ಹೋಗಿದ್ದರು.  ವಾರ್ಡನ್ ಫಯಾಜ್ ಬಾಷಾ ಇವುಗಳಲ್ಲಿ 30 ಟೂ-ಟಯರ್ ಕಾಟ್‍ಗಳನ್ನು ದುರಪಯೋಗ ಪಡಿಸಿಕೊಂಡಿದ್ದಾರೆ.  ಸರ್ಕಾರಿ ಆಸ್ತಿಗಳ ದುರ್ಬಳಕೆ, ಕರ್ತವ್ಯ ನಿರ್ಲಕ್ಷತೆ ಮತ್ತು ಬೇಜವಾಬ್ದಾರಿ ತೋರಿದ್ದಾರೆ ಎಂಬುದಾಗಿ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಹಾಗೂ ಸಮಾಜ ಕಲ್ಯಾಣ ಇಲಾಖೆ ಜಂಟಿನಿರ್ದೇಶಕರು ನೀಡಿದ ವರದಿ ಆಧರಿಸಿ, ಕೆ.ಸಿ.ಎಸ್(ಸಿ.ಸಿ.ಎ) ನಿಯಮಾವಳಿ-1957ರ ನಿಯಮ 10(1)ರ ಅನ್ವಯ ವಾರ್ಡನ್ ಫಯಾಜ್ ಬಾಷಾ ಅವರನ್ನು ಇಲಾಖಾ ವಿಚಾರಣೆ/ ಶಿಸ್ತು ಕ್ರಮ ಕಾಯ್ದಿರಿಸಿ ತಕ್ಷಣದಿಂದ ಜಾರಿಗೆ ಬರುವಂತೆ ಅಮಾನುತ್ತುಗೊಳಿಸಲಾಗಿದೆ ಎಂದು ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಜೆ. ಸೋಮಶೇಖರ್ ಅವರು ಆದೇಶದಲ್ಲಿ ತಿಳಿಸಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment