ಮೊಳಕಾಲ್ಮೂರು | ಮೊಬೈಲ್ ಕಳುವು ಬಗ್ಗೆ ಸಾರ್ವಜನಿಕರು ಎಚ್ಚರಿಕೆಯಿಂದಿರಿ : ಪಿಎಸ್ ಐ ಮಹೇಶ್ ಲಕ್ಷ್ಮಣ್ ಹೊಸಪೇಟೆ

1 Min Read

 

ಸುದ್ದಿಒನ್, ಮೊಳಕಾಲ್ಮುರು, ಫೆಬ್ರವರಿ. 08 : ಪಟ್ಟಣದ ಪೊಲೀಸ್ ಠಾಣೆಯ ಆವರಣದಲ್ಲಿ ಭಾನುವಾರ ಜನಸಂಪರ್ಕ ಸಭೆ ಹಾಗೂ ಕಳೆದುಕೊಂಡಿದ್ದ ಮೊಬೈಲ್ ಗಳನ್ನು ವಾರಸುದಾರರಿಗೆ ಹಿಂದಿರುಗಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಮೊಳಕಾಲ್ಮುರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಕಳ್ಳತನ ಹಾಗೂ ಕಳೆದು ಹೋಗಿದ್ದ ಮೊಬೈಲ್ ಗಳನ್ನು ಜಪ್ತಿ ಮಾಡಿಕೊಂಡಿದ್ದ 26 ಮೊಬೈಲ್‌ ಫೋನ್‌ಗಳನ್ನು ವಾರಸುದಾರರಿಗೆ ಹಸ್ತಾಂತರ ಮಾಡಲಾಯಿತು.

ಈ ಸಂದರ್ಭದಲ್ಲಿ ಪಿಎಸ್ ಐ ಮಹೇಶ್ ಲಕ್ಷ್ಮಣ್ ಹೊಸಪೇಟೆ ಮಾತನಾಡಿ, ಪೊಲೀಸ್‌ ಸಿಬ್ಬಂದಿಗೆ ಸಾರ್ವಜನಿಕರಿಂದ ಸಲಹೆ ಸೂಚನೆಗಳು ಬೇಕು. ನಿಮ್ಮೆಲ್ಲರ ಸಲಹೆ ಪಡೆದು ರೂಪುರೇಷೆ ಸಿದ್ದಪಡಿಸುತ್ತೇವೆ. ಪೊಲೀಸ್ ಇಲಾಖೆಗೆ ಸಂಬಂಧಿಸಿದ ಯಾವುದೇ ಸಮಸ್ಯೆ ಇದ್ದರೂ ಬಗೆಹರಿಸಲು ಪ್ರಯತ್ನಿಸುತ್ತೇವೆ. ನಿಮ್ಮ ಸೇವೆಗೆ ಸದಾ ಸಿದ್ಧರಿದ್ದೇವೆ’ ಎಂದು ಹೇಳಿದರು. ಪೊಲೀಸ್ ಹಾಗೂ ಜನರ ಮಧ್ಯೆ ಯಾವ ರೀತಿ ಸಂಪರ್ಕ ಇರಬೇಕು ಎಂಬುದರ ಬಗ್ಗೆ ವಿವರಿಸಿದರು.

ಜನಸಂದಣಿ ಇರುವ ಸ್ಥಳಗಳಲ್ಲಿ, ಬಸ್ ನಿಲ್ದಾಣ, ಮಾರುಕಟ್ಟೆ, ಜಾತ್ರೆ, ಕಾರ್ಯಕ್ರಮಗಳಲ್ಲಿ ಮೊಬೈಲ್‌ಗಳನ್ನು ಜೇಬು ಅಥವಾ ಕೈಯಲ್ಲಿ ಅಜಾಗರೂಕತೆಯಿಂದ ಇಡುವುದು ಅಪಾಯಕಾರಿಯಾಗಿದೆ. ಅಪರಿಚಿತರು ಮೊಬೈಲ್ ಕೇಳಿದರೆ ಅಥವಾ ಗಮನ ಬೇರೆಡೆ ಸೆಳೆಯುವ ಪ್ರಯತ್ನ ಮಾಡಿದರೆ ಎಚ್ಚರಿಕೆ ವಹಿಸಬೇಕು. ದ್ವಿಚಕ್ರ ವಾಹನದಲ್ಲಿ ಪ್ರಯಾಣಿಸುವಾಗ ಮೊಬೈಲ್ ಬಳಕೆ ತಪ್ಪಿಸಬೇಕು. ಮೊಬೈಲ್ ಕಳೆದುಹೋದಲ್ಲಿ ಅಥವಾ ಕಳ್ಳತನವಾದಲ್ಲಿ ತಕ್ಷಣವೇ ಸಮೀಪದ ಪೊಲೀಸ್ ಠಾಣೆಗೆ ದೂರು ನೀಡಬೇಕು. ಮೊಬೈಲ್ ಸುರಕ್ಷಿತವಾಗಿರಿಸಲು ಪಾಸ್‌ವರ್ಡ್, ಫಿಂಗರ್‌ಪ್ರಿಂಟ್ ಅಥವಾ ಫೇಸ್ ಲಾಕ್ ಬಳಸಬೇಕು. ಸಾರ್ವಜನಿಕರ ಸಹಕಾರದಿಂದಲೇ ಮೊಬೈಲ್ ಕಳ್ಳತನವನ್ನು ತಡೆಯಲು ಸಾಧ್ಯ ಎಂದರು.

ಸಭೆಯಲ್ಲಿ ಸಿಪಿಐ ನಾಗರಾಜ್, ಹಾಗೂ ಮುಖಂಡರಾದ ಚಂದ್ರಶೇಖರ ಗೌಡ, ಶ್ರೀನಿವಾಸ್ ಮೂರ್ತಿ ಮಾತನಾಡಿದರು.

Share This Article
Enable Notifications OK No thanks