Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಮೊಳಕಾಲ್ಮುರು ತಾ.ಪಂ ವ್ಯವಸ್ಥಾಪಕ ಅಮಾನತು

---Advertisement---

ಚಿತ್ರದುರ್ಗ. ಸೆ.27: ಪದೇ ಪದೇ ಕಚೇರಿ ಕರ್ತವ್ಯಕ್ಕೆ ಅನಧಿಕೃತ ಗೈರು ಹಾಜರಾಗುವುದು ಹಾಗೂ ಕರ್ತವ್ಯದಲ್ಲಿ ನಿರ್ಲಕ್ಷö್ಯ ತೋರಿದ ಕಾರಣಕ್ಕಾಗಿ ಮೊಳಕಾಲ್ಮುರು ತಾಲ್ಲೂಕು ಪಂಚಾಯಿತಿ ವ್ಯವಸ್ಥಾಪಕ ಅರುಣ್ ಕುಮಾರ್ ಅವರನ್ನು ಸೇವೆಯಿಂದ ಅಮಾನತುಗೊಳಿಸಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಜೆ.ಸೋಮಶೇಖರ್ ಆದೇಶಿಸಿದ್ದಾರೆ.

ಮೊಳಕಾಲ್ಮುರು ತಾ.ಪಂ ವ್ಯವಸ್ಥಾಪಕ ಅರುಣ್ ಕುಮಾರ್ ಅವರು 2024ರ ಆಗಸ್ಟ್ 08 ರಿಂದ 13 ರವರೆಗೆ ಅನಧಿಕೃತ ಗೈರು ಹಾಜರಾಗಿದ್ದು, ಈ ಕುರಿತಂತೆ ನೌಕರರಿಗೆ ಕಾರಣ ಕೇಳಿ ನೋಟೀಸ್ ಜಾರಿ ಮಾಡಲಾಗಿರುತ್ತದೆ. ಮುಂದುವರೆದು 2024ರ ಆಗಸ್ಟ್ 14 ರಿಂದ 21 ರವರೆಗೆ ಮೇಲಾಧಿಕಾರಿಗಳ ಅನುಮತಿ ಪಡೆಯದೇ ಪುನಃ ಕರ್ತವ್ಯಕ್ಕೆ ಗೈರು ಹಾಜರಾಗಿರುತ್ತಾರೆ. ಈ ನೌಕರರು ಮೇಲಾಧಿಕಾರಿಗಳ ಅನುಮತಿ ಪಡೆಯದೇ ಪದೇ ಪದೇ ಕರ್ತವ್ಯಕ್ಕೆ ಗೈರು ಹಾಜರಾಗಿರುವುದರಿಂದ ಈ ನೌಕರರ ಮೇಲೆ ಶಿಸ್ತು ಕ್ರಮ ಜರುಗಿಸುವಂತೆ ಮೊಳಕಾಲ್ಮುರು ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿಗಳು ವರದಿ ಸಲ್ಲಿಸಿರುತ್ತಾರೆ.

ಈ ಎಲ್ಲ ಅಂಶಗಳನ್ನು ಪರಿಶೀಲಿಸಿ, ಕೆಸಿಎಸ್ (ಸಿ.ಸಿ.ಎ) ನಿಯಮಾವಳಿ-1957ರ ನಿಯಮ-10(1) ರನ್ವಯ ಮೊಳಕಾಲ್ಮುರು ತಾ.ಪಂ ವ್ಯವಸ್ಥಾಪಕ ಅರುಣ್ ಕುಮಾರ್ ಅವರ ವಿರುದ್ಧ ಇಲಾಖಾ ವಿಚಾರಣೆಯನ್ನು ಕಾಯ್ದಿರಿಸಿ ತಕ್ಷಣದಿಂದಲೇ ಜಾರಿಗೆ ಬರುವಂತೆ ಸೇವೆಯಿಂದ ಅಮಾನತುಗೊಳಿಸಿದ್ದು, ಅಮಾನತು ಅವಧಿಯಲ್ಲಿ ಪ್ರಾಧಿಕಾರದ ಅನುಮತಿ ಪಡೆಯದೇ ಕೇಂದ್ರಸ್ಥಾನ ಬಿಡುವಂತಿಲ್ಲ ಮತ್ತು ಅನ್ಯ ಉದ್ಯೋಗದಲ್ಲಿ ತೊಡಗುವಂತಿಲ್ಲ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಶಿಸ್ತು ಪ್ರಾಧಿಕಾರಿ ಎಸ್.ಜೆ.ಸೋಮಶೇಖರ್ ಆದೇಶಿಸಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment