Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಸಿದ್ದಾಪುರದಲ್ಲಿ ಹೆಚ್ಚಿದ ಮಂಗನ ಕಾಯಿಲೆ : ಚಿಕಿತ್ಸೆ ಫಲಿಸದೆ ವೃದ್ದೇ ಸಾವು..!

---Advertisement---

ಶಿರಸಿ: ಮಂಗನ ಕಾಯಿಲೆ ಮಲೆನಾಡು ಭಾಗದಲ್ಲಿ ದಿನೇ ದಿನೇ ಹೆಚ್ಚಾಗುತ್ತಲೇ ಇದೆ. ಅದರಲ್ಲೂ ಸಿದ್ದಪುರ ಮಂಗನ ಕಾಯಿಲೆಯ ಹಾಟ್ ಸ್ಪಾಟ್ ಅಂತಾನೇ ಹೇಳಬಹುದು.‌ ದಿನೇ ದಿನೇ ಹೆಚ್ಚುತ್ತಿರುವ ಕಾಯಿಲೆಗೆ ಈಗಾಗಲೇ ಎರಡು ಬಲಿಯಾಗಿದೆ. ಇಂದು ಚಿಕಿತ್ಸೆ ಫಲಕಾರಿಯಾಗದೆ ವೃದ್ದೇಯೊಬ್ಬರು ಬಲಿಯಾಗಿದ್ದಾರೆ.

 

ಮಂಗನ ಕಾಯಿಲೆ ಉಲ್ಬಣವಾಗುತ್ತಿದ್ದು, ಈಗಾಗಲೇ 43 ಪ್ರಕರಣಗಳು ಚಾಲ್ತಿಯಲ್ಲಿವೆ. ಅಷ್ಟೂ ಪ್ರಕರಣಗಳು ಸಿದ್ದಾಪುರದಲ್ಲೇ ದಾಖಲಾಗಿದ್ದು, ಸ್ಥಳೀಯರು ಆತಂಕಕ್ಕೆ ಒಳಗಾಗಿದ್ದಾರೆ. ಈಗ ಸಾವನ್ನಪ್ಪಿರುವ ವೃದ್ದೆಯನ್ನು ಕೂಡ ಆರಂಭದಲ್ಲಿ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿತ್ತು. ಆದರೆ ಚಿಕಿತ್ಸೆ ಫಲಕಾತಿಯಾಗದೆ ಸಾವನ್ನಪ್ಪಿದ್ದಾರೆ.

 

ಮಂಗನ ಕಾಯಿಲೆಗೆ ಸರಿಯಾದ ಲಸಿಕೆ ಇಲ್ಲದೆ ಸಾವುಗಳಾಗುತ್ತಿವೆ ಎಂದು ಸ್ಥಳೀಯರು ಆಕ್ರೋಶ ಹೊರ ಹಾಕಿದ್ದಾರೆ. ಅಧಿಕಾರಿಗಳು ಕೂಡ ಸರಿಯಾಗಿ ಗಮನ ಕೊಡುತ್ತಿಲ್ಲ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಇದರ ನಡುವೆ ಪ್ರಕರಣಗಳು ದಿನೇ ದಿನೇ ಹೆಚ್ಚಾಗುತ್ತಿರುವುದು ಆತಂಕಕ್ಕೆ ಕಾರಣವಾಗಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...