Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ರಾಜ್ಯಾದ್ಯಂತ ಮುಂಗಾರು ಮಳೆ ಅಬ್ಬರ : ಹಲವು ಜಿಲ್ಲೆಗಳಲ್ಲಿ ಜನಜೀವನ ಅಸ್ತವ್ಯಸ್ತ

---Advertisement---

ಬೆಂಗಳೂರು : ಕರ್ನಾಟಕಕ್ಕೆ ಮುಂಗಾರು ಮಳೆಯ ಅಧಿಕೃತ ಪ್ರವೇಶವಾಗಿದ್ದು, ರಾಜ್ಯದಾದ್ಯಂತ ವರುಣನ ಆರ್ಭಟ ಜೋರಾಗಿದೆ. ಉತ್ತರ ಕರ್ನಾಟಕ, ಕಲ್ಯಾಣ ಕರ್ನಾಟಕ ಮತ್ತು ಮಲೆನಾಡು ಭಾಗಗಳಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ.

ಬಳ್ಳಾರಿ ನಗರದ ತಗ್ಗು ಪ್ರದೇಶಗಳ ಮನೆಗಳಿಗೆ ಚರಂಡಿ ನೀರು ನುಗ್ಗಿ ದವಸ-ಧಾನ್ಯಗಳು ನಾಶವಾಗಿವೆ. ಪ್ರಮುಖ ಶೋರೂಮ್ ಒಂದರ ನೆಲಮಹಡಿಗೆ ನೀರು ನುಗ್ಗಿದ್ದರಿಂದ ನೂರಾರು ಬೈಕ್‌ಗಳು ಹಾಗೂ ಜನರೇಟರ್ ಜಲಾವೃತಗೊಂಡಿವೆ. ಬಾಗಲಕೋಟೆಯ ನವನಗರದ ಜಿಲ್ಲಾ ಕ್ರೀಡಾಂಗಣದ ರಸ್ತೆಗಳು ಹಾಗೂ ಕಲಬುರಗಿಯ ಸೇಡಂ ಪಟ್ಟಣದ ಮುಖ್ಯ ರಸ್ತೆಗಳು ಕೆರೆಯಂತಾಗಿದ್ದು, ವಾಹನ ಸಂಚಾರಕ್ಕೆ ತೀವ್ರ ಅಡಚಣೆ ಉಂಟಾಗಿದೆ. ಕೆಲವು ತಗ್ಗು ಪ್ರದೇಶಗಳ ಮನೆಗಳಿಗೂ ನೀರು ನುಗ್ಗಿದೆ.

ಹಾವೇರಿ ಜಿಲ್ಲೆಯ ಅಗಡಿ ಗ್ರಾಮದ ಹಳ್ಳ ತುಂಬಿ ಹರಿದಿದ್ದರಿಂದ ಮನೆ, ಅಂಗಡಿಗಳು ಹಾಗೂ ಬಸ್ ನಿಲ್ದಾಣದ ಬಳಿಯ ದೇವಸ್ಥಾನದ ಕಟ್ಟಿ ಜಲಾವೃತಗೊಂಡಿದೆ. ರಾಣೇಬೆನ್ನೂರು ಗ್ರಾಮೀಣ ಪೊಲೀಸ್ ಠಾಣೆಯ ಒಳಗೂ ನೀರು ನುಗ್ಗಿದ್ದರಿಂದ ಕಡತಗಳ ರಕ್ಷಣೆಗೆ ಸಿಬ್ಬಂದಿ ಪರದಾಡಿದ್ದಾರೆ.
ಹುಬ್ಬಳ್ಳಿಯಲ್ಲಿ ಒಂದು ಗಂಟೆಗೂ ಹೆಚ್ಚು ಕಾಲ ಸುರಿದ ಮಳೆಗೆ ಅಂಡರ್ ಬ್ರಿಡ್ಜ್ ಹಾಗೂ ರಸ್ತೆಗಳು ಮುಳುಗಡೆಯಾಗಿವೆ. ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರ ಕಚೇರಿ ಆವರಣದಲ್ಲಿ ಬೃಹತ್ ಮರ ಬಿದ್ದು ದ್ವಿಚಕ್ರ ವಾಹನಗಳು ಜಖಂಗೊಂಡಿವೆ. ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದ ಹಲ್ಯಾಳ ರಸ್ತೆಯಲ್ಲಿದ್ದ ಶಿಥಿಲಾವಸ್ಥೆಯ ಎರಡಂತಸ್ತಿನ ಖಾಸಗಿ ಕಚೇರಿ ಕಟ್ಟಡವೊಂದು ನೆಲಕ್ಕುರುಳಿದೆ. ಅದೃಷ್ಟವಶಾತ್ ಘಟನೆಯ ವೇಳೆ ಯಾರೂ ಇಲ್ಲದ ಕಾರಣ ಪ್ರಾಣಹಾನಿ ತಪ್ಪಿದೆ. ರಾಯಚೂರು ಜಿಲ್ಲೆಯ ಮಸ್ಕಿ ತಾಲೂಕಿನ ಅಡವಿಬಾವಿ ತಾಂಡಾದಲ್ಲಿ ಸರ್ಕಾರಿ ಶಾಲೆ ಜಲಾವೃತಗೊಂಡು ವಿದ್ಯಾರ್ಥಿಗಳು ತೊಂದರೆ ಅನುಭವಿಸುತ್ತಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

Join WhatsApp

Join Now

Join Telegram

Join Now