Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಮುಂಗಾರು ಹಂಗಾಮು ಬೆಳೆ ಸಮೀಕ್ಷೆ: ಮೊಬೈಲ್ ಆ್ಯಪ್ ಮೂಲಕ ಬೆಳೆ ಮಾಹಿತಿ ರೈತರೇ ಅಪ್‍ಲೋಡ್ ಮಾಡಲು ಸೂಚನೆ

---Advertisement---

 

ಚಿತ್ರದುರ್ಗ. ಜುಲೈ. 01: ಜಿಲ್ಲೆಯಲ್ಲಿ 2025-26ನೇ ಸಾಲಿನ ಮುಂಗಾರು ಹಂಗಾಮು ಬೆಳೆ ಸಮೀಕ್ಷೆಗೆ ರೈತರ ಆ್ಯಪ್ ಬಿಡುಗಡೆ ಮಾಡಲಾಗಿದ್ದು, ರೈತರು ಗೂಗಲ್ ಪ್ಲೇಸ್ಟೋರ್‍ನಿಂದ “Kharif Crop Survey App – 2025-26 (ಮುಂಗಾರು ರೈತರಬೆಳೆ ಸಮೀಕ್ಷೆ-2025)” ಎಂದು ಹುಡುಕಿ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಂಡು ತಾವು ಬೆಳೆದ ಬೆಳೆ ಮಾಹಿತಿ ಹಾಗೂ ಛಾಯಚಿತ್ರ ಅಪ್‍ಲೋಡ್ ಮಾಡಬಹುದಾಗಿದೆ.

ಈ ಮಾಹಿತಿಯನ್ನು ಬೆಳೆ ವಿಮೆ, ಬೆಳೆ ನಷ್ಟ ಪರಿಹಾರ, ಬೆಂಬಲ ಬೆಲೆ ಮತ್ತು ಸರ್ಕಾರದ ವಿವಿಧ ಯೋಜನೆಗಳಡಿ ಸವಲತ್ತುಗಳನ್ನು ಒದಗಿಸಲು ಪಹಣಿಯಲ್ಲಿ ಅಳವಡಿಸಲು ಬಳಸಲಾಗುತ್ತದೆ.

ರೈತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ತಮ್ಮ ಜಮೀನಿನ ಬೆಳೆ ಮಾಹಿತಿಯನ್ನು ತಾವೇ ಖುದ್ದಾಗಿ ದಾಖಲಿಸಲು ಕೋರಿದೆ. ರೈತರು ಹತ್ತಿರದ ರೈತ ಸಂಪರ್ಕ ಕೇಂದ್ರ, ಗ್ರಾಮ ಲೆಕ್ಕಾಧಿಕಾರಿಗಳು ಅಥವಾ ಗ್ರಾಮಗಳಿಗೆ ನಿಯೋಜಿಸಿದ ಖಾಸಗಿ ನಿವಾಸಿಗಳ ಸಹಾಯದೊಂದಿಗೆ ಸಹ ಬೆಳೆ ಮಾಹಿತಿಯನ್ನು ದಾಖಲಿಸಬಹುದು.

ಬೆಳೆ ವಿವರಗಳನ್ನು ದಾಖಲು ಮಾಡದಿದ್ದಲ್ಲಿ ಇಲಾಖೆಗಳಿಂದ ದೊರೆಯುವ ಸವಲತ್ತುಗಳಿಂದ ವಂಚಿತರಾಗುತ್ತೀರಿ. ಹೆಚ್ಚಿನ ಮಾಹಿತಿಗಾಗಿ ರೈತರು ಬೆಳೆ ಸಮೀಕ್ಷೆ ಸಹಾಯವಾಣಿ ಸಂಖ್ಯೆ 18004253553 ಗೆ ಕರೆ ಮಾಡಬಹುದು ಅಥವಾ ಸಂಬಂಧಪಟ್ಟ ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕರ ಕಛೇರಿ/ರೈತ ಸಂಪರ್ಕ ಕೇಂದ್ರ, ಅಥವಾ ಗ್ರಾಮ ಲೆಕ್ಕಾಧಿಕಾರಿಗಳನ್ನು ಸಂಪರ್ಕಿಸಬಹುದು ಎಂದು ಜಂಟಿ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...