ನವದೆಹಲಿ: ಈ ಬಾರಿಯ ಮುಂಗಾರು ಅಧಿವೇಶನ ಮುಕ್ತಾಯವಾಗಿದೆ. ಸಂಸತ್ ಮುಂಗಾರು ಅಧಿವೇಶನ ಅನಿರ್ಧಿಷ್ಟಾವಧಿಗೆ ಮುಂದೂಡಿಕೆಯಾಗಿದೆ. ಅದರಲ್ಲೂ ಈ ಬಾರಿಯ ಅಧಿವೇಶನದಲ್ಲಿ ಮಣಿಪುರದ ಘಟನೆ ಸದ್ದು ಮಾಡಿದೆ.
ಮಣಿಪುರದ ಘಟನೆ ವಿಪಕ್ಷಗಳು ಆಡಳಿತ ಪಕ್ಷದ ವಿರುದ್ಧ ಯುದ್ಧ ಸಾರಿತ್ತು. ಪ್ರಧಾನಿ ಮೋದಿಯವರು ಕೂಡ ವಿಪಕ್ಷಗಳ ಮಾತಿಗೆ ಉತ್ತರ ನೀಡಿರಲಿಲ್ಲ. ಆಡಳಿತ ಪಕ್ಷ ಮತ್ತು ವಿಪಕ್ಷಗಳ ತಿಕ್ಕಾಟದಿಂದ ಮುಂಗಾರು ಅಧಿವೇಶನ ಮುಕ್ತಾಯವಾಗಿದೆ.
ಈ ಬಾರಿಯ ಸಂಸತ್ ಅಧಿವೇಶನ ಸಾಕಷ್ಟು ಗಮನ ಸೆಳೆಯಿತು. 17 ದಿನಗಳಲ್ಲಿ ಒಟ್ಟು 44 ಗಂಟೆ 13 ನಿಮಿಷ ಕಾಲ ಅಧಿವೇಶನ ನಡೆಸಿದ್ದೇವೆ ಎಂದು ಸ್ಪೀಕರ್ ಓಂ ಬಿರ್ಲಾ ಮಾಹಿತಿ ನೀಡಿದ್ದಾರೆ. 20 ಮಸೂದೆಗಳನ್ನು ಪರಿಚಯಿಸಿದ್ದು ಒಟ್ಟು 22 ಕರಡು ಮಸೂದೆಗಳನ್ನ ಈ ಬಾರಿ ಅಂಗೀಕರಿಸಲಾಗಿದೆ. ಅಧಿವೇಶನ ಅನಿರ್ದಿಷ್ಟಾವಧಿಗೆ ಮುಂದೂಡಿ ಇದೀಗ ಆದೇಶ ಹೊರಡಿಸಲಾಗಿದೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.


















