Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ನಾಳೆಯಿಂದ ಮಳೆಗಾಲದ ಅಧಿವೇಶನ ಆರಂಭ..ಆಡಳಿತ ಪಕ್ಷ ತರಾಟೆಗೆ ವಿಪಕ್ಷ ಸಿದ್ಧತೆ.. ಸಿದ್ದರಾಮಯ್ಯ ವಿರುದ್ಧ ರೀಡು ಅಸ್ತ್ರಕ್ಕೆ ಬಿಜೆಪಿ ಸಿದ್ಧತೆ..!

Facebook
Twitter
Telegram
WhatsApp

 

 

ಬೆಂಗಳೂರು: ಆಡಳಿತಾರೂಢ ಬಿಜೆಪಿ ಪಕ್ಷವನ್ನು ತರಾಟೆಗೆ ತೆಗೆದುಕೊಳ್ಳಲು ವಿಪಕ್ಷ ಕಾಂಗ್ರೆಸ್ ಗೆ ಸಾಕಷ್ಟು ವಿಚಾರಗಳು ಸಿದ್ಧವಾಗಿದೆ. ಸದ್ಯ ಮಳೆಯಿಂದಾಗ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲು ಸಾಕಷ್ಟು ಸಮಸ್ಯೆ ಎದುರಾಗಿದೆ. ಹೀಗಾಗಿ ನಾಳೆಯಿಂದ ಶುರುವಾಗುವ ಮಳೆಗಾಲ ಅಧಿವೇಶದಲ್ಲಿ ಬಿಜೆಪಿಯನ್ನು ತರಾಟೆ ತೆಗೆದುಕೊಳ್ಳಲು ಕಾಂಗ್ರೆಸ್ ಯೋಜಿಸಿದೆ.

ಅಧಿವೇಶನ ನಡೆಯುವಾಗ ವಿಪಕ್ಷ ಸ್ಥಾನದಲ್ಲಿರುವವರು ಆಡಳಿತ ಪಕ್ಷದ ಸಮಸ್ಯೆಗಳನ್ನು ಎತ್ತಿ ತೋರಿಸುವುದು ಸಹಜ. ಇದೀಗ ವಿಪಕ್ಷಕ್ಕೂ ತಿರುಗೇಟು ನೀಡಲು ಬಿಜೆಪಿ ಸಕಲ ಸಿದ್ಧತೆ ನಡೆಸಿದೆ. ಸಿದ್ದರಾಮಯ್ಯ ಅವರ ಹಳೇ ಕೇಸ್ ಮೂಲಕ ತಿರುಗೇಟು ನೀಡಲು ಸಜ್ಜಾಗಿದೆ. 2015ರಲ್ಲಿ ಅರ್ಕಾವತಿ ಬಡಾವಣೆಯ 541 ಎಕರೆ ರೀಡು ಡಿನೋಟಿಫೈ ಆರೋಪಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಆಗಿನ ಕಾಂಗ್ರೆಸ್ ಸರ್ಕಾರವೇ ನ್ಯಾ.ಕೆಂಪಣ್ಣ ಆಯೋಗ ರಚಿಸಿತ್ತು.

 

ಈ ಆಯೋಗ 2017ರ ಆಗಸ್ಟ್ 23ರಂದು ಸರ್ಕಾರಕ್ಕೆ 4 ಸಂಪುಟಗಳಲ್ಲಿ ಸುಮಾರು 9 ಸಾವಿರ ಪುಟಗಳ ಅಂತಿಮ ವರದಿ ಸಲ್ಲಿಸಿದೆ. ಆದರೆ 5 ವರ್ಷವಾದ್ರೂ ಶಾಸನ ಸಭೆಯಲ್ಲಿ ಇಲ್ಲಿ ತನಕ ನ್ಯಾ.ಕೆಂಪಣ್ಣ ಆಯೋಗದ ವರದಿ ಮಂಡನೆ ಆಗಿಲ್ಲ. ಆದರೆ ಇದೀಗ ಹೈಕಮಾಂಡ್ ವರದಿ ಮಂಡನೆಗೆ ಸೂಚಿಸಿದೆ. ಇದೇ ವಿಚಾರ ಅಧಿವೇಶನದಲ್ಲಿ ಬಿಜೆಪಿ ವರ್ಸಸ್ ಕಾಂಗ್ರೆಸ್ ಫೈಟ್ ಗೆ ಕಾರಣವಾಗಬಹುದು ಎನ್ನಲಾಗಿದೆ. ಅಧಿವೇಶನದ ಮೊದಲ ದಿನವೇ ಫೈಟ್ ಶುರುವಾಗಲಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

Summer Migraine: ಬಿಸಿಲಿಗೆ ಹೋದಾಗ ಈ ನಿಯಮಗಳನ್ನು ಪಾಲಿಸಿ : ಮೈಗ್ರೇನ್‌ ನಿಂದ ದೂರವಿರಿ….!

ಸುದ್ದಿಒನ್ : ಈ ಬೇಸಿಗೆಯಲ್ಲಿ ಬಿಸಿಲು ಜೋರಾಗಿದೆ. ತಾಪಮಾನವು 37 ರಿಂದ 40 ಡಿಗ್ರಿ  ಆಸುಪಾಸಿನಲ್ಲಿದೆ. ವಿಪರೀತ ಬಿಸಿಲಿನಿಂದ ಮಕ್ಕಳಿಂದ ವೃದ್ಧರವರೆಗೆ ಬಹುತೇಕ ಎಲ್ಲರೂ ಅನಾರೋಗ್ಯಕ್ಕೆ ತುತ್ತಾಗುತ್ತಿದ್ದಾರೆ. ಆದರೆ ಮೈಗ್ರೇನ್ ಪೀಡಿತರು ಸ್ವಲ್ಪ ಹೆಚ್ಚು

ಈ ರಾಶಿಯ ತಂದೆ ತಾಯಿಗೆ ಮಗಳ ಕುಟುಂಬದಲ್ಲಿ ತುಂಬ ಸಮಸ್ಯೆ ಇದೆ

ಈ ರಾಶಿಯ ತಂದೆ ತಾಯಿಗೆ ಮಗಳ ಕುಟುಂಬದಲ್ಲಿ ತುಂಬ ಸಮಸ್ಯೆ ಇದೆ, ಈ ರಾಶಿಯವರ ಉದ್ಯೋಗದಲ್ಲಿ ತುಂಬಾ ಸಮಸ್ಯೆ ಅದರ ಜೊತೆ ಹಣಕಾಸಿನ ಸಮಸ್ಯೆ ಕಾಡಲಿದೆ, ಬುಧವಾರ ರಾಶಿ ಭವಿಷ್ಯ -ಏಪ್ರಿಲ್-24,2024 ಸೂರ್ಯೋದಯ: 05:57,

ಬಿ ಎನ್ ಚಂದ್ರಪ್ಪ ಪರ ಮತಯಾಚನೆ ಮಾಡಿ, ಮೋದಿ, ಅಮಿತ್ ಶಾ ವಿರುದ್ಧ ಗುಡುಗಿದ ಸಿದ್ದರಾಮಯ್ಯ

ಚಿತ್ರದುರ್ಗ: ಈ ತಿಂಗಳ 26 ಕ್ಕೆ ಚುನಾವಣೆ ನಡೆಯಲಿದೆ. ಕಾಂಗ್ರೆಸ್ ಅಭ್ಯರ್ಥಿ ಬಿಎನ್ ಚಂದ್ರಪ್ಪ ರನ್ನ ಹೆಚ್ಚು ಮತಗಳಿಂದ ಗೆಲ್ಲಿಸಿಕೊಡಬೇಕು ಎಂದು ಮನವಿ ಮಾಡ್ತೀನಿ. ಕಳೆದ 10 ವರ್ಷಗಳಿಂದ ಕೇಂದ್ರದಲ್ಲಿ ಅಧಿಕಾರದಲ್ಲಿದೆ ಮೋದಿಯವರು ಪ್ರಧಾನಿಯಾಗಿದ್ದಾರೆ.

error: Content is protected !!