ಜುಲೈ 15ರಿಂದ ಆರಂಭವಾಗಲಿದೆ ಮುಂಗಾರು ಅಧಿವೇಶನ : ವಿಪಕ್ಷಗಳ ಫ್ಲ್ಯಾನ್ ಏನು..?

ಬೆಂಗಳೂರು: ಹತ್ತು ದಿನಗಳ ಕಾಲ ಮುಂಗಾರು ಅಧಿವೇಶನಕ್ಕೆ ದಿನಾಂಕ ನಿಗದಿಯಾಗಿದೆ. ಜುಲೈ 15 ರಿಂದ ಜುಲೈ 26ರ ತನಕ ಮುಂಗಾರು ಅಧಿವೇಶನ ನಡೆಯಲಿದೆ. ಸಿಎಂ ಸಿದ್ದರಾಮಯ್ಯ ಅವರು ಅಧಿವೇಶನದ ದಿನಾಂಕವನ್ನು ಫೈನಲ್ ಮಾಡಿದ್ದಾರೆ. ಈ ಕುರಿತು ರಾಜ್ಯಪಾಲರಿಗೆ ಶಿಫಾರಸು ಮಾಡಲಾಗಿದೆ.

ಮುಂಗಾರು ಅಧಿವೇಶನದಲ್ಲಿ ಆಡಳಿತ ಪಕ್ಷದ ಮೇಲೆ ಚಾಟಿ ಬೀಸಲು ಬಿಜೆಪಿ ಹಾಗೂ ಜೆಡಿಎಸ್ ಸಜ್ಜಾಗಿವೆ. ರಾಜ್ಯದಲ್ಲಿ ಬೆಲೆ ಏರಿಕೆಯ ವಿಚಾರವನ್ನೇ ಅಸ್ತ್ರ ಮಾಡಿಕೊಂಡಿದ್ದಾರೆ. ಪೆಟ್ರೋಲ್-ಡಿಸೇಲ್ ಬೆಲೆ ಏರಿಕೆ, ಹಾಲಿನ ದರ ಏರಿಕೆ, ಹಗರಣಗಳಿಗೆ ಸಂಬಂಧಪಟ್ಟಂತೆ ಸರ್ಕಾರದ ವಿರುದ್ಧ ಮುಗಿಬೀಳುವ ಸಾಧ್ಯತೆ ಇದೆ. ಹಗರಣಗಳಿಂದಾನೇ ಸರ್ಕಾರವನ್ನು ಕಟ್ಟಿ ಹಾಕುವ ಪ್ರಯತ್ನ ಮಾಡುವ ಪ್ಲ್ಯಾನ್ ಹಾಕಿಕೊಂಡಿದೆ.

ಈ ಬಾರಿಯ ಅಧಿವೇಶನ ಅರ್ಥಪೂರ್ಣ, ಪ್ರಯೋಜನಯುತವಾಗಿ ಚರ್ಚೆಯಾಗುತ್ತಾ ಎಂಬುದನ್ನು ನೋಡಬೇಕಿದೆ. ವಿಪಕ್ಷಗಳ ಗದ್ದಲದಿಂದ ಸರಿಯಾದ ಚರ್ಚೆಯಾಗದೆ ಉಳಿಯುತ್ತಾ ಅಥವಾ ವಿಪಕ್ಷಗಳು ಅಭಿವೃದ್ಧಿ ಬಗ್ಗೆ ಚರ್ಚೆ ಮಾಡ್ತಾರಾ ಎಂಬುದನ್ನು ಕಾದು ನೋಡಬೇಕಿದೆ.

ರಾಜ್ಯದಲ್ಲಿ ಬೆಲೆ ಏರಿಕೆಯಿಂದಾಗಿ ಜನ ಸಾಕಷ್ಟು ನೊಂದಿದ್ದಾರೆ. ದಿನೇ ದಿನೇ ಒಂದಿಲ್ಲೊಂದು ವಸ್ತುವಿನ ಬೆಲೆ ಏರಿಕೆಯಾಗುತ್ತಲೇ ಇದೆ. ಪೆಟ್ರೋಲ್ ಡಿಸೇಲ್ ಬೆಕೆಯಲ್ಲಿ ಏರಿಕೆಯಾಗಿದ್ದರ ಜೊತೆಗೆ ಹಾಲನ್ನು ಹೆಚ್ಚಳ ಮಾಡಿ, ಎರಡು ರೂಪಾಯಿ ಏರಿಕೆ ಮಾಡಿದೆ. ಇದು ಕೂಡ ವಿಪಕ್ಷಗಳಿಗೆ ಅಸ್ತ್ರವಾಗಿದೆ. ಇನ್ನು ಹಗರಣಗಳ ವಿಚಾರದಲ್ಲು ಅಷ್ಟೇ ಸಾಕಷ್ಟು ಹಗರಣಗಳು ಬೆಳಕಿಗೆ ಬರುತ್ತಿವೆ. ಈಗಾಗಲೇ ವಾಲ್ಮೀಕಿ ಅಭಿವೃದ್ಧಿ ನಿಗಮ ಮಂಡಳಿಯಲ್ಲಿ ಆದ ಹಗರಣದಿಂದ ಸಿಬ್ಬಂದಿ ಆತ್ಮಹತ್ಯೆಯನ್ನೇ ಮಾಡಿಕೊಂಡಿದ್ದಾರೆ. ಇದರ ಜೊತೆಗೆ ಮೈಸೂರು ಮೂಡಾ ಹಗರಣವೂ ಬೆಳಕಿಗೆ ಬಂದಿದೆ. ಹೀಗಾಗಿ ಆಡಳಿತ ಪಕ್ಷದ ಮೇಲೆ ಸವಾರಿ ಮಾಡಲು ವಿಪಕ್ಷ ಸಜ್ಜಾಗಿದೆ.

suddionenews

Recent Posts

ಮೈಸೂರಿನ ಘಟನೆ ಮಾಸುವ ಮುನ್ನವೇ ವಿಸಿ ನಾಲೆಗೆ ಹಾರಿದ ಒಂದೇ ಕುಟುಂಬದ ಮೂವರು..!

ಮಂಡ್ಯ: ಇತ್ತೀಚೆಗೆ ಸಾಲದಿಂದ ಮನನೊಂದು ಮೈಸೂರಿನ ವಿಶ್ವೇಶ್ವರಯ್ಯ ನಗರ ಅಪಾರ್ಟ್ಮೆಂಟ್ ನಲ್ಲಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡಿದ್ದರು. ಇದೀಗ…

1 hour ago

ಮಾರ್ಚ್ 01 ರಂದು ತ್ರೈಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆ

ಚಿತ್ರದುರ್ಗ ಫೆ. 24 : ತ್ರೈಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆ (20 ಅಂಶಗಳ ಕಾರ್ಯಕ್ರಮಗಳೂ ಸೇರಿದಂತೆ) ಮಾ. 01…

3 hours ago

ನರೇಗಾ : ಕರ್ತವ್ಯಕ್ಕೆ ಗೈರಾದ ತಾಂತ್ರಿಕ ಸಹಾಯಕರ ಬಿಡುಗಡೆ

ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 24 : ಮಹಾತ್ಮಾ ಗಾಂಧೀಜಿ ನರೇಗಾ ಯೋಜನೆಯಡಿ ಹೊರಗುತ್ತಿಗೆ ಆಧಾರದಲ್ಲಿ ಚಿತ್ರದುರ್ಗ ತಾಲ್ಲೂಕಿನಲ್ಲಿ ತಾಂತ್ರಿಕ ಸಹಾಯಕರಾಗಿ…

3 hours ago

ಕರ ವಸೂಲಾತಿಯಲ್ಲಿ ನಿರ್ಲಕ್ಷ್ಯ : ಮೂವರು ಪಿಡಿಒ ಗಳ ವಾರ್ಷಿಕ ವೇತನ ಬಡ್ತಿಗೆ ತಡೆ

ಚಿತ್ರದುರ್ಗ ಫೆ. 24 : ಜಿಲ್ಲೆಯ ಗ್ರಾಮ ಪಂಚಾಯತಿಗಳ ವ್ಯಾಪ್ತಿಯಲ್ಲಿ ಕರ ವಸೂಲಾತಿ ಆದೋಲನ ಹಮ್ಮಿಕೊಂಡು, ತೆರಿಗೆ ವಸೂಲಾತಿ ಮಾಡಿ,…

3 hours ago

ಮೈಸೂರಲ್ಲಿ ವಿಜಯೇಂದ್ರ : ಭೇಟಿಗೆ ಓಡಿ ಬಂದ ಪ್ರತಾಪ್ ಸಿಂಹ : ಇವರ್ಯಾರ ಬಣ ಎಂಬುದೇ ದೊಡ್ಡ ಪ್ರಶ್ನೆ..!

    ಮೈಸೂರು: ಇಂದು ಬಿಜೆಪಿ ರಾಜ್ಯಾಧ್ಯಕ್ಷ ಮೈಸೂರಿಗೆ ಭೇಟಿ ನೀಡಿದ್ದಾರೆ. ಹಿಂದೂಪರ ಸಂಘಟನೆಗಳು ಹಾಗೂ ಬಿಜೆಪಿ ನಾಯಕರು ನಡೆಸುತ್ತಿರುವ…

3 hours ago

ಚಿತ್ರದುರ್ಗ APMC | ಶೇಂಗಾ, ಕಡಲೆ, ಸೂರ್ಯಕಾಂತಿ ಸೇರಿದಂತೆ ಇತರೆ ಉತ್ಪನ್ನಗಳ ಫೆಬ್ರವರಿ 24 ರ ಮಾರುಕಟ್ಟೆ ಧಾರಣೆ ವಿವಿರ ಇಲ್ಲಿದೆ…!

ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 24 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಕಡಲೆ, ಶೇಂಗಾ, ಸೂರ್ಯಕಾಂತಿ, ಮೆಕ್ಕೆಜೋಳ ಸೇರಿದಂತೆ ಇತರೆ…

3 hours ago