Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಜೂ.1ರಂದೇ ರಾಜ್ಯ ಪ್ರವೇಶಿಸಲಿದೆ ಮುಂಗಾರು..!

---Advertisement---

ಬೆಂಗಳೂರು: ಬೇಸಿಗೆಯ ಬಿಸಿಲಿನಿಂದ ರಾಜ್ಯದ ಜನತೆಗೆ ಈಗಾಗಲೇ ಮಳೆರಾಯ ತಂಪೆರೆದಿದ್ದಾನೆ. ಇದೀಗ ಮುಂಗಾರು ಮಳೆಯ ಸೂಚನೆಯನ್ನು ನೀಡಲಾಗಿದೆ. ಜೂನ್ 1 ರಿಂದ ರಾಜ್ಯಕ್ಕೆ ಮುಂಗಾರು ಮಳೆ ಪ್ರವೇಶವಾಗುವ ಸೂಚನೆಯನ್ನು ಹವಮಾನ ಇಲಾಖೆ ನೀಡಿದೆ. ಜೂನ್ 13 ಅಥವಾ 14ರಂದು ಮಾನ್ಸೂನ್ ಕೂಡ ಶುರುವಾಗಲಿದೆ. ಜೂನ್ ಮೊದಲ ವಾರದವರೆಗೂ ಬೆಂಗಳೂರಿನಲ್ಲಿ ಮುಂಗಾರು ಪೂರ್ವ ಮಳೆಯಾಗಲಿದೆ.

ಸಿಲಿಕಾನ್ ಸಿಟಿಯಲ್ಲಿ ಕಳೆದ ಕೆಲವು ದಿನದಿಂದ ಮಳೆಯ ಆರ್ಭಟ ನಿಂತಿದೆ. ಆದರೆ ಈ ತಿಂಗಳ ಅಂತ್ಯದ ವೇಳೆಗೆ ಮತ್ತೆ ಮಳೆಯಾಗಲಿದೆ. ರಾಜ್ಯಾದ್ಯಂತ ಮಳೆಯ ಆರ್ಭಟ ಜೋರಾಗಲಿದೆ. ಕರಾವಳಿಯ ಉಡುಪಿ, ಉತ್ತರ ಕನ್ನಡ ಜಿಲ್ಲೆಯ ಹೆಚ್ಚಿನ ಸ್ಥಳಗಳಲ್ಲಿ ಗುಡುಗು ಸಹಿತ ಮಳೆಯಗಲಿದೆ. ದಕ್ಷಿಣ ಒಳನಾಡಿನ ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಕೋಲಾರ, ಮಂಡ್ಯ, ರಾಮನಗರ ಮತ್ತು ಶಿವಮೊಗ್ಗದಲ್ಲೂ ವ್ಯಾಪಕ ಮಳೆಯಾಗಲಿದೆ.

ಬಳ್ಳಾರಿ, ಚಿತ್ರದುರ್ಗ, ಚಿಕ್ಕಬಳ್ಳಾಪುರದ ಹಲವು ಕಡೆಗಳಲ್ಲಿ ಗಾಳಿಯು ರಭಸವಾಗಿ ಬೀಸಲಿದ್ದು, ಗುಡುಗು ಸಹಿತ ಮಳೆ ಲಘು ಮಳೆಯಾಗಲಿದೆ. ತುಮಕೂರು ಮತ್ತು ವಿಜಯನಗರ ಸೇರಿದಂತೆ ಬೀದರ್, ಕೊಪ್ಪಳ, ರಾಯಚೂರು ಮತ್ತು ಯಾದಗಿರಿಯಲ್ಲೂ ಗಾಳಿ ಸಹಿತ ಭಾರಿ ಮಳೆಯಾಗಲಿದೆ.

ಈಗಾಗಲೇ ಮಳೆ ಉತ್ತಮವಾಗುವ ಮುನ್ಸೂಚನೆ ಸಿಕ್ಕಿರುವ ಕಾರಣ ರೈತರು ಸಂತಸದಲ್ಲಿದ್ದಾರೆ. ಬಿತ್ತನೆ ಮಾಡಿಕೊಳ್ಳುವುದಕ್ಕೆ ಎಲ್ಲಾ ತಯಾರಿಯನ್ನು ನಡೆಸುತ್ತಿದ್ದಾರೆ. ಈ ಬಾರಿ ಉತ್ತಮ ಬೆಳೆ ಕೈ ಸೇರುವ ನಿರೀಕ್ಷೆಯೂ ಇದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment