Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಂದ್ರನನ್ನು ಹಿಂದೂ ರಾಷ್ಟ್ರವನ್ನಾಗಿ ಘೋಷಿಸಬೇಕಂತೆ : ಹಿಂದೂ ಮಹಾಸಭಾದಿಂದ ಹೊಸ ಆಗ್ರಹ..!

---Advertisement---

 

ನವದೆಹಲಿ: ಚಂದ್ರಯಾನ 3 ಯಶಸ್ವಿಯಾದ ಬೆನ್ನಲ್ಲೇ ಸಂಶೋಧನ ಕಾರ್ಯವೂ ಶುರುವಾಗಿದೆ. ಪ್ರಧಾನಿ ಮೋದಿ ಬೆಂಗಳೂರಿಗೆ ಬಂದು ಇಸ್ರೋ ವಿಜ್ಞಾನಿಗಳನ್ನು ಅಭಿನಂದಿಸಿ ಹೋಗಿದ್ದಾರೆ. ಅದರ‌ ಜೊತೆಗೆ ವಿಕ್ರಂ ಲ್ಯಾಂಡರ್ ಇಳಿದ ಜಾಗವನ್ನು ಶಿವಶಕ್ತಿ ಎಂದು ಘೋಷಣೆ ಮಾಡಲಾಗಿದೆ. ಈ ಬೆನ್ನಲ್ಲೇ ಚಂದ್ರನ ಜಾಗವನ್ನು ಹಿಂದೂ ರಾಷ್ಟ್ರವೆಂದು ಘೋಷಣೆ ಮಾಡಲು, ಆಲ್ ಇಂಡಿಯಾ ಹಿಂದೂ ಮಹಾಸಭಾದ ಅಧ್ಯಕ್ಷರು ಆಗ್ರಹಿಸಿದ್ದಾರೆ.

ಅಧ್ಯಕ್ಷ ಸ್ವಾಮಿ ಚಕ್ರಪಾಣಿ ಮಹಾರಾಜ್ ಅವರು, ಬೇರೆ ಧರ್ಮದವರು, ಬೇರೆ ದೇಶದವರು ಚಂದ್ರನ ಮೇಲೆ ಹಕ್ಕು ಸಾಧಿಸುವ ಮೊದಲೇ ಅದನ್ನು ಹಿಂದೂ ರಾಷ್ಟ್ರವೆಂದು ಘೋಷಣೆ‌ ಮಾಡಬೇಕು. ಸಂಸತ್ ನಲ್ಲಿ ಈ ಸಂಬಂಧ ನಿರ್ಣಯ ಮಂಡಿಸಬೇಕು ಎಂದಿದ್ದಾರೆ.

ಚಂದ್ರನ ಅಂಗಳಕ್ಕೆ ವಿಕ್ರಂ ಕಾಲಿಟ್ಟ ಸ್ಥಳವನ್ನು ‘ಶಿವ ಶಕ್ತಿ’ ಎಂದು ಹೆಸರಿಡಲಾಗಿದೆ. ಕೇವಲ ಹೆಸರನ್ನು ಇಟ್ಟರೆ ಮಾತ್ರ ಸಾಲದು, ಆ ಸ್ಥಳವನ್ನು ಅಭಿವೃದ್ಧಿ ಮಾಡಬೇಕು. ಜೊತೆಗೆ ಚಂದ್ರನನ್ನು ಹಿಂದೂ ರಾಷ್ಟ್ರವೆಂದು ಘೋಷಣೆ ಮಾಡಿ, ‘ಶಿವ ಶಕ್ತಿ’ಯನ್ನು ರಾಜಧಾನಿಯನ್ನಾಗಿ ಘೋಷಣೆ ಮಾಡಬೇಕು. ಜೊತೆಗೆ ಶಿವ-ಪಾರ್ವತಿಯನ್ನೂ ಅಲ್ಲಿ ಪ್ರತಿಷ್ಠಾಪಿಸಬೇಕು ಎಂದು ಒತ್ತಡ ಹಾಕಿದ್ದಾರೆ. ಚಕ್ರಪಾಣಿ ಅವರ ವಿಡಿಯೋ ಸದ್ಯಕ್ಕೆ ವೈರಲ್ ಆಗಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...